AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಐರ್ಲೆಂಡ್ ಸರಣಿ: ಟೀಮ್ ಇಂಡಿಯಾ ಹೊಸ ಕೋಚ್ ವಿವಿಎಸ್​ ಲಕ್ಷ್ಮಣ್

India Tour of Ireland: ವಿಶೇಷ ಎಂದರೆ ಭಾರತ ತಂಡ 4 ವರ್ಷಗಳ ಬಳಿಕ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮೊದಲು, 2018 ರಲ್ಲಿ, ಭಾರತ ತಂಡವು ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರವಾಸ ಕೈಗೊಂಡಿತು.

ಭಾರತ vs ಐರ್ಲೆಂಡ್ ಸರಣಿ: ಟೀಮ್ ಇಂಡಿಯಾ ಹೊಸ ಕೋಚ್ ವಿವಿಎಸ್​ ಲಕ್ಷ್ಮಣ್
vvs laxman
TV9 Web
| Edited By: |

Updated on: Jun 13, 2022 | 9:02 PM

Share

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಬಳಿಕ ಟೀಮ್ ಇಂಡಿಯಾ ಐರ್ಲೆಂಡ್ (India Tour of Ireland) ವಿರುದ್ಧ ಸೀಮಿತ ಓವರ್‌ಗಳ ಸರಣಿ ಆಡಲಿದೆ. ಜೂನ್ ಕೊನೆಯ ವಾರದಲ್ಲಿ ಭಾರತ ತಂಡ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ಸರಣಿಯಲ್ಲಿ ಎರಡು ಟಿ20 ಪಂದ್ಯಗಳನ್ನು ಆಡಲಿದೆ. ಈ ಎರಡೂ ಪಂದ್ಯಗಳು ಜೂನ್ 26 ಮತ್ತು 28 ರಂದು ಮಲಾಹೈಡ್‌ನಲ್ಲಿ ನಡೆಯಲಿವೆ. ಈ ಸರಣಿಗಾಗಿ ಇದೀಗ ಟೀಮ್ ಇಂಡಿಯಾ ಸಿಬ್ಬಂದಿಗಳನ್ನು ಬಿಸಿಸಿಐ ಆಯ್ಕೆ ಮಾಡಿಕೊಂಡಿದೆ. ಅದರಂತೆ ತಂಡದ ಕೋಚ್ ಆಗಿ ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಐರ್ಲೆಂಡ್ ವಿರುದ್ದ ಸರಣಿಗೆ ಟೀಮ್ ಇಂಡಿಯಾ ಮೀಸಲು ತಂಡವನ್ನು ಕಳುಹಿಸಲು ನಿರ್ಧರಿಸಿದೆ.

ಏಕೆಂದರೆ ಜುಲೈ 1 ರಿಂದ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸರಣಿ ಆಡಲಿದೆ. ಹೀಗಾಗಿ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಪ್ರಮುಖ ಆಟಗಾರರು ಇಂಗ್ಲೆಂಡ್ ವಿರುದ್ದದ ಸರಣಿಗೆ ತೆರಳಲಿದೆ. ಹಾಗೆಯೇ ಐರ್ಲೆಂಡ್ ವಿರುದ್ದದ ಸರಣಿಗೆ ಮತ್ತೊಂದು ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಈ ತಂಡದ ಕೋಚ್ ಆಗಿ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಳ್ಳಲಿದ್ದು, ಜೊತೆಗೆ ಎನ್‌ಸಿಎ ತರಬೇತುದಾರರಾದ ಸಿತಾಂಶು ಕೊಟಕ್, ಸಾಯಿರಾಜ್ ಬಹುತುಲೆ ಮತ್ತು ಮುನಿಶ್ ಬಾಲಿ ಟೀಮ್ ಇಂಡಿಯಾ ಜೊತೆ ಐರ್ಲೆಂಡ್‌ ಪ್ರವಾಸ ಕೈಗೊಳ್ಳಲಿದ್ದಾರೆ.

ಸಿತಾಂಶು ಕೋಟಾಕ್ ಈ ಹಿಂದೆ ಭಾರತ ಎ ತಂಡದ ಕೋಚ್​ ಆಗಿ ಕಾರ್ಯ ನಿರ್ವಹಿಸಿದ್ದರು. ಹಾಗೆಯೇ ಸಾಯಿರಾಜ್ ಬಹುತುಲೆ ಮತ್ತು ಬಾಲಿ ಅಂಡರ್-19 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಕೋಚಿಂಗ್ ಸಿಬ್ಬಂದಿಯ ಭಾಗವಾಗಿದ್ದರು. ಈ ಅನುಭವವನ್ನು ಪರಿಗಣಿಸಿ ಹೊಸ ಜವಾಬ್ದಾರಿ ನೀಡಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೀಸಲು ತಂಡ ಐರ್ಲೆಂಡ್ ವಿರುದ್ದ 2 ಟಿ20 ಸರಣಿ ಆಡಲಿದೆ.

ಇದನ್ನೂ ಓದಿ
Image
KL Rahul: ಗಾಯ ಗಂಭೀರವಲ್ಲ..ಜಿಮ್​ನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ವಿಶೇಷ ಎಂದರೆ ಭಾರತ ತಂಡ 4 ವರ್ಷಗಳ ಬಳಿಕ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮೊದಲು, 2018 ರಲ್ಲಿ, ಭಾರತ ತಂಡವು ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರವಾಸ ಕೈಗೊಂಡಿತು. ಇದೀಗ ಮತ್ತೊಮ್ಮೆ ಐರ್ಲೆಂಡ್ ಪ್ರವಾಸ ಕೈಗೊಳ್ಳುತ್ತಿದೆ. ಈ ಹಿಂದೆ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿ ಆಡುತ್ತಿದ್ದ ವೇಳೆ ಬಿಸಿಸಿಐ ಶಿಖರ್ ಧವನ್ ನಾಯಕತ್ವದಲ್ಲಿ ಮತ್ತೊಂದು ತಂಡವನ್ನು ಶ್ರೀಲಂಕಾ ವಿರುದ್ದದ ಸರಣಿಗೆ ಕಳುಹಿಸಿತ್ತು. ಈ ಬಾರಿ ಕೂಡ ಇದೇ ಮಾದರಿಯಲ್ಲಿ ಬಿಸಿಸಿಐ ಎರಡು ತಂಡಗಳನ್ನು ರೂಪಿಸಲಿದ್ದು, ಮೀಸಲು ಟೀಮ್ ಇಂಡಿಯಾದ ನಾಯಕರಾಗಿ ಯಾರು ಆಯ್ಕೆಯಾಗಲಿದ್ದಾರೆ ಕಾದು ನೋಡಬೇಕಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ