IND vs SL: ಭಾರತ- ಶ್ರೀಲಂಕಾ ಕ್ರಿಕೆಟ್ ಕದನ ಯಾವ ಚಾನೆಲ್​ನಲ್ಲಿ ನೇರಪ್ರಸಾರ ಗೊತ್ತಾ?

IND vs SL, Live Streaming: ಮಾಹಿತಿಯ ಪ್ರಕಾರ, ಶ್ರೀಲಂಕಾ ವಿರುದ್ಧದ ಸರಣಿಯನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ಎಚ್‌ಡಿ ಚಾನೆಲ್‌ಗಳಲ್ಲಿ ಇದನ್ನು ಟಿವಿಯಲ್ಲಿ ನೋಡಬಹುದು. ಮೊಬೈಲ್‌ನಲ್ಲಿ ಇದನ್ನು Sony Liv ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಬಹುದು.

IND vs SL: ಭಾರತ- ಶ್ರೀಲಂಕಾ ಕ್ರಿಕೆಟ್ ಕದನ ಯಾವ ಚಾನೆಲ್​ನಲ್ಲಿ ನೇರಪ್ರಸಾರ ಗೊತ್ತಾ?
ಭಾರತ- ಶ್ರೀಲಂಕಾ
Follow us
|

Updated on: Jul 11, 2024 | 10:03 PM

ಮೂರು ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಗಾಗಿ ಭಾರತ ತಂಡ ಇದೇ ತಿಂಗಳಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಇದೀಗ ಬಿಸಿಸಿಐ ಈ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರವಾಸ ಜುಲೈ 26ರಿಂದ ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಇದು ಆಗಸ್ಟ್ 7 ರಂದು ಏಕದಿನ ಸರಣಿಯ ಕೊನೆಯ ಪಂದ್ಯದೊಂದಿಗೆ ಮುಕ್ತಾಯಗೊಳ್ಳಲಿದೆ. ಇನ್ನು ಉಭಯ ತಂಡಗಳ ಎರಡು ಮಾದರಿಗಳ ಸರಣಿಯನ್ನು ಯಾವ ಚಾನೆಲ್​ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಎಂಬ ಪ್ರಶ್ನೆ ಎಲ್ಲ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆ ಪ್ರಶ್ನೆಗೆ ಪೂರ್ಣ ಉತ್ತರ ಇಲ್ಲಿದೆ.

ನೇರ ಪ್ರಸಾರ ಯಾವ ಚಾನೆಲ್​ನಲ್ಲಿ?

ಮಾಹಿತಿಯ ಪ್ರಕಾರ, ಶ್ರೀಲಂಕಾ ವಿರುದ್ಧದ ಸರಣಿಯನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ಎಚ್‌ಡಿ ಚಾನೆಲ್‌ಗಳಲ್ಲಿ ಇದನ್ನು ಟಿವಿಯಲ್ಲಿ ನೋಡಬಹುದು. ಮೊಬೈಲ್‌ನಲ್ಲಿ ಇದನ್ನು Sony Liv ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಬಹುದು. ಆದಾಗ್ಯೂ, ಮೊಬೈಲ್‌ನಲ್ಲಿ ಈ ಪಂದ್ಯಗಳನ್ನು ವೀಕ್ಷಿಸಲು ಚಂದಾದಾರಿಕೆ ಅಗತ್ಯವಿರುತ್ತದೆ.

ತಂಡ ಪ್ರಕಟ ಯಾವಾಗ?

ಜಿಂಬಾಬ್ವೆ ಸರಣಿಯ ನಂತರ ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಗೆ ತಂಡವನ್ನು ಪ್ರಕಟಿಸಲಾಗುವುದು. ಜಿಂಬಾಬ್ವೆ ವಿರುದ್ಧದ ಸರಣಿಯು ಭಾನುವಾರ, ಜುಲೈ 14 ರಂದು ಕೊನೆಗೊಳ್ಳುತ್ತದೆ. ಬಹುಶಃ ಇದರ ನಂತರ ಜುಲೈ 15 ರಂದು ಟೀಂ ಇಂಡಿಯಾ ತಂಡವನ್ನು ಪ್ರಕಟಿಸಬಹುದು. ಈ ಸರಣಿಯಲ್ಲಿ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗುವುದು ಎಂದು ಹೇಳಲಾಗುತ್ತಿದೆ. ಆದರೆ, ರೋಹಿತ್ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಅವರನ್ನು ಏಕದಿನ ಪಂದ್ಯಗಳಿಗೆ ಮಾತ್ರ ಆಯ್ಕೆ ಮಾಡಬಹುದು, ಆದರೆ ಅವರಿಗೆ ವಿಶ್ರಾಂತಿ ನೀಡಬಹುದು. ಮತ್ತೊಂದೆಡೆ ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಬಹುದು.

ಬೇರೆ ಬೇರೆ ನಾಯಕರು

ಈ ಪ್ರವಾಸದಲ್ಲಿ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಿದರೆ, ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ತಂಡದ ಸಾರಥ್ಯವಹಿಸುವ ಸಾಧ್ಯತೆಗಳಿವೆ. ಇಬ್ಬರಿಗೂ ಬೇರೆ ಬೇರೆ ಸರಣಿಗಳಿಗೆ ನಾಯಕತ್ವ ನೀಡಬಹುದು. ವಿಶೇಷವೆಂದರೆ ಇದು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರ ಮೊದಲ ಪ್ರವಾಸವಾಗಿದೆ. ಅವರು ಮುಖ್ಯ ಕೋಚ್ ಆಗಿ ಮೊದಲ ಬಾರಿಗೆ ಭಾರತ ತಂಡದ ಜೊತೆ ಕಾಣಿಸಿಕೊಳ್ಳಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ