AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: 444 ರನ್​ಗಳ ಹಿನ್ನಡೆಯಲ್ಲಿ ಭಾರತ: ಕುತೂಹಲ ಕೆರಳಿಸಿದ ಮೂರನೇ ದಿನದಾಟ, ರೋಹಿತ್-ಗಿಲ್ ಮೇಲೆ ಎಲ್ಲರ ಕಣ್ಣು

India vs Australia 4th Test: ತನ್ನ ಮೊದಲ ಇನ್ನಿಂಗ್ಸ್ ಶುರು ಮಾಡಿರುವ ಟೀಮ್ ಇಂಡಿಯಾ ದ್ವಿತೀಯ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 36 ರನ್ ಕಲೆಹಾಕಿದ್ದು 444 ರನ್​ಗಳ ಹಿನ್ನಡೆಯಲ್ಲಿದೆ. ಇಂದಿನ ಮೂರನೇ ದಿನದಾಟ ಭಾರತಕ್ಕೆ ಬಹುಮುಖ್ಯವಾಗಿದ್ದು ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಮೇಲೆ ಎಲ್ಲರ ಕಣ್ಣಿದೆ.

IND vs AUS 4th Test: 444 ರನ್​ಗಳ ಹಿನ್ನಡೆಯಲ್ಲಿ ಭಾರತ: ಕುತೂಹಲ ಕೆರಳಿಸಿದ ಮೂರನೇ ದಿನದಾಟ, ರೋಹಿತ್-ಗಿಲ್ ಮೇಲೆ ಎಲ್ಲರ ಕಣ್ಣು
IND vs AUS 4th Test
Vinay Bhat
|

Updated on:Mar 11, 2023 | 7:51 AM

Share

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯ ಕುತೂಹಲ ಕೆರಳಿಸಿದೆ. ಉಸ್ಮಾನ್ ಖವಾಜಾ (Usman Khawaja) ಹಾಗೂ ಕ್ಯಾಮ್ರೋನ್ ಗ್ರೀನ್ ಅವರ ಆಕರ್ಷಕ ಶತಕದ ನೆರವಿನಿಂದ ಕಾಂಗರೂ ಪಡೆ 480 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ತನ್ನ ಮೊದಲ ಇನ್ನಿಂಗ್ಸ್ ಶುರು ಮಾಡಿರುವ ಟೀಮ್ ಇಂಡಿಯಾ ದ್ವಿತೀಯ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 36 ರನ್ ಕಲೆಹಾಕಿದ್ದು 444 ರನ್​ಗಳ ಹಿನ್ನಡೆಯಲ್ಲಿದೆ. ಇಂದಿನ ಮೂರನೇ ದಿನದಾಟ ಭಾರತಕ್ಕೆ ಬಹುಮುಖ್ಯವಾಗಿದ್ದು ರೋಹಿತ್ ಶರ್ಮಾ (Rohit Sharma) ಹಾಗೂ ಶುಭ್​ಮನ್ ಗಿಲ್ ಮೇಲೆ ಎಲ್ಲರ ಕಣ್ಣಿದೆ.

ಶುಕ್ರವಾರ ಎರಡನೇ ದಿನದಾಟ ಶುರು ಮಾಡಿದ ಆಸ್ಟ್ರೇಲಿಯಾ ಭರ್ಜರಿ ಆರಂಭ ಪಡೆದುಕೊಂಡಿತು. ಪಂದ್ಯ ಆರಂಭವಾಗುತ್ತಿದ್ದಂತೆ ಗ್ರೀನ್​ ಅರ್ಧ ಶತಕ ಪೂರ್ಣಗೊಳಿಸಿದರು. ಭೋಜನ ವಿರಾಮದ ವೇಳೆಗೆ ಆಸಿಸ್ ಯಾವುದೇ ವಿಕೆಟ್​ ಕಳೆದುಕೊಳ್ಳದೇ​ ಪ್ರಥಮ ಅವಧಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತು. ಭೋಜನದ ನಂತರ ಸ್ಪಿನ್ನರ್​ಗಳಿಗೆ ನೆರವಾಗದ ಪಿಚ್​ನಲ್ಲೂ ಅಶ್ವಿನ್​ ಮ್ಯಾಜಿಕ್ ಮಾಡಿದರು. ಆಸೀಸ್ ತಂಡಕ್ಕೆ ಶತಕ ಸಿಡಿಸಿ ಆಧಾರವಾಗಿ ನಿಂತಿದ್ದ ಗ್ರೀನ್​ರನ್ನು (114) ಪೆವಿಲಿಯನ್​ಗೆ ಕಳಿಸಿದರು. ಅವರ ನಂತರ ಬಂದ ಅಲೆಕ್ಸ್​ ಕ್ಯಾರಿ (0) ಮತ್ತು ಮಿಚೆಲ್​ ಸ್ಟಾರ್ಕ್ (6)​ ಅವರನ್ನು ಆರ್​ ಅಶ್ವಿನ್​ ಔಟ್​ ಮಾಡಿದರು.

IND vs AUS: ಭಾರತ ವಿರುದ್ಧ ಚೊಚ್ಚಲ ಟೆಸ್ಟ್ ಶತಕ ಬಾರಿಸಿದ ಗ್ರೀನ್! ರೋಹಿತ್ ಪಡೆಗೆ ಸಂಕಷ್ಟ

ಇದನ್ನೂ ಓದಿ
Image
IND vs AUS: ಅಶ್ವಿನ್ ಈಗ ನಂ.1 ಟೆಸ್ಟ್ ಬೌಲರ್; ಕನ್ನಡಿಗ ಕುಂಬ್ಳೆ ದಾಖಲೆಯೂ ಉಡೀಸ್!
Image
IND vs AUS: ಅಶ್ವಿನ್​ಗೆ 6 ವಿಕೆಟ್​; ಭಾರತಕ್ಕೆ ಬೃಹತ್ ಟಾರ್ಗೆಟ್ ನೀಡಿದ ಆಸ್ಟ್ರೇಲಿಯಾ
Image
BAN vs ENG: ಆಂಗ್ಲರಿಗೆ ಸೋಲು; ಮೊದಲ ಪಂದ್ಯದಲ್ಲೇ ವಿಶ್ವ ವಿಜೇತರನ್ನು ಬೇಟೆಯಾಡಿದ ಬಾಂಗ್ಲಾ..!
Image
IND vs AUS: 43 ವರ್ಷಗಳ ನಂತರ ದಾಖಲೆ! ಭಾರತಕ್ಕೆ ದುಬಾರಿಯಾದ ದ್ವಿಶತಕದ ಜೊತೆಯಾಟ

ಟೀ ವಿರಾಮದ ನಂತರ 180 ರನ್​ ಗಳಿಸಿ ಆಡುತ್ತಿದ್ದ ಉಸ್ಮಾನ್​ ಖವಾಜಾರನ್ನು ಅಕ್ಷರ್​ ಪಟೇಲ್​ ಎಲ್​ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ನಂತರ ನೇಥನ್​ ಲಿಯಾನ್​ (34) ಮತ್ತು ಟಾಡ್ ಮಾರ್ಫಿ (41) ಕೊಂಚ ರನ್​ ಕಲೆ ಹಾಕಿದರು. ಅಂತಿಮವಾಗಿ ಆಸ್ಟ್ರೇಲಿಯಾ 167.2 ಓವರ್​ಗಳಲ್ಲಿ 420 ರನ್​ಗೆ ಆಲೌಟ್ ಆಯಿತು. ಬಳಿಕ ತನ್ನ ಮೊದಲ ಇನ್ನಿಂಗ್ಸ್ ಶುರು ಮಾಡಿದ ಭಾರತ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 36 ರನ್ ಗಳಿಸಿದೆ. ರೋಹಿತ್ 17 ಹಾಗೂ ಗಿಲ್ 18 ರನ್ ಗಳಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಅತಿ ಹೆಚ್ಚು ವಿಕೆಟ್​ ಪಡೆದ ಅಶ್ವಿನ್​:

ರವಿಚಂದ್ರನ್ ಅಶ್ವಿನ್ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. 47.2 ಓವರ್‌ ಮಾಡಿದ ಅಶ್ವಿನ್​ 91 ರನ್​ ಬಿಟ್ಟುಕೊಟ್ಟು 6 ವಿಕೆಟ್​ ಗಳಿಸಿದರು. 22 ಪಂದ್ಯಗಳಲ್ಲಿ ಅಶ್ವಿನ್ 28.10 ರ ಸರಾಸರಿಯಲ್ಲಿ 2.71 ರ ಎಕಾನಮಿ ರೇಟ್‌ನಲ್ಲಿ 113 ವಿಕೆಟ್‌ಗಳನ್ನು ಪಡೆದಿದ್ದಾರೆ. ಬಾರ್ಡರ್​-ಗವಾಸ್ಕರ್​ ಟ್ರೋಫಿಯಲ್ಲಿ 103ಕ್ಕೆ 7 ವಿಕೆಟ್​ ಕಿತ್ತದ್ದು ಅವರ ಅತ್ಯುತ್ತಮ ಸಾಧನೆಯಾಗಿದೆ. ಆಸ್ಟ್ರೇಲಿಯಾದ ನೇಥನ್​ ಲಿಯಾನ್ ಕೂಡಾ 113 ವಿಕೆಟ್​ ಪಡೆದಿದ್ದಾರೆ. ಅಶ್ವಿನ್ ಅವರು ಲಿಯಾನ್​ ದಾಖಲೆ ಸರಿಗಟ್ಟಿದ್ದಾರೆ. ಆದರೆ, ಲಿಯಾನ್​ 113 ವಿಕೆಟ್​ ಪಡೆಯಲು 26 ಪಂದ್ಯಗಳನ್ನು ತೆಗೆದುಕೊಂಡಿರುವ ಕಾರಣ ದ್ವಿತೀಯ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:50 am, Sat, 11 March 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ