AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND U19 vs AUS U19: ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಏಕದಿನ ಸರಣಿ ಗೆದ್ದ ಭಾರತ ಯುವ ಪಡೆ

IND U19 vs AUS U19: ಭಾರತದ ಅಂಡರ್-19 ಕ್ರಿಕೆಟ್ ತಂಡವು ಆಸ್ಟ್ರೇಲಿಯಾದಲ್ಲಿ ಆತಿಥೇಯರ ವಿರುದ್ಧ ನಡೆದ ಯೂತ್ ಏಕದಿನ ಸರಣಿಯನ್ನು ಗೆದ್ದುಕೊಂಡಿದೆ. ವೈಭವ್ ಸೂರ್ಯವಂಶಿ (70 ರನ್), ವಿಹಾನ್ ಮಲ್ಹೋತ್ರಾ (70 ರನ್) ಮತ್ತು ಅಭಿಗ್ಯಾನ್ ಕುಂಡು (71 ರನ್) ಅವರ ಅರ್ಧಶತಕಗಳ ನೆರವಿನಿಂದ ಭಾರತ 300 ರನ್ ಗಳಿಸಿತು. ಆಸ್ಟ್ರೇಲಿಯಾದ ಜೇಡನ್ ಡ್ರೇಪರ್ ಅವರ ಶತಕ (107 ರನ್) ಹೊರತಾಗಿಯೂ, ತಂಡ 249 ರನ್‌ಗಳಿಗೆ ಆಲೌಟ್ ಆಯಿತು. ಭಾರತೀಯ ಬೌಲರ್‌ಗಳು ಸಹ ಅತ್ಯುತ್ತಮ ಪ್ರದರ್ಶನ ನೀಡಿದರು.

IND U19 vs AUS U19: ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಏಕದಿನ ಸರಣಿ ಗೆದ್ದ ಭಾರತ ಯುವ ಪಡೆ
Ind U19 Vs Aus U19
ಪೃಥ್ವಿಶಂಕರ
|

Updated on: Sep 24, 2025 | 6:28 PM

Share

ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಅಂಡರ್-19 ತಂಡವು, ಆತಿಥೇಯ ಆಸ್ಟ್ರೇಲಿಯಾ ವಿರುದ್ಧ (IND U19 vs AUS U19) ಸತತ ಎರಡನೇ ಯೂತ್ ಏಕದಿನ ಪಂದ್ಯವನ್ನು ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಮೂವರ ಅರ್ಧಶತಕದ ನೆರವಿನಿಂದ 300 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 249 ರನ್​ಗಳಿಗೆ ಆಲೌಟ್ ಆಗುವ ಮೂಲಕ 51 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಭಾರತದ ಪರ ಬ್ಯಾಟಿಂಗ್​​ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ 70 ರನ್ ಬಾರಿಸಿದರು. ವಿಹಾನ್ ಮಲ್ಹೋತ್ರಾ ಕೂಡ 70 ರನ್​ಗಳ ಕಾಣಿಕೆ ನೀಡಿದರು. ವಿಕೆಟ್ ಕೀಪರ್ ಅಭಿಗ್ಯಾನ್ ಕುಂಡು 71 ರನ್ ಕಲೆಹಾಕಿದರು. ಇತ್ತ ಆಸ್ಟ್ರೇಲಿಯಾದ ಸೋಲಿನ ಹೊರತಾಗಿಯೂ ತಂಡದ ಸ್ಫೋಟಕ ಬ್ಯಾಟರ್ ಜೇಡೆನ್ ಡ್ರೇಪರ್ ಕೇವಲ 65 ಎಸೆತಗಳಲ್ಲಿ ಶತಕ ಬಾರಿಸಿ ಎಲ್ಲರ ಗಮನ ಸೆಳೆದರು. ಆದಾಗ್ಯೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಜೇಡನ್ ಡ್ರೇಪರ್ ಶತಕ

ಜೇಡನ್ ಡ್ರೇಪರ್ ಕೇವಲ 72 ಎಸೆತಗಳಲ್ಲಿ 5 ಸಿಕ್ಸರ್‌ಗಳು ಮತ್ತು 8 ಬೌಂಡರಿಗಳ ಸಹಾಯದಿಂದ 107 ರನ್ ಗಳಿಸಿದರು. ಯೂತ್ ಏಕದಿನ ಪಂದ್ಯದಲ್ಲಿ ಚೊಚ್ಚಲ ಪಂದ್ಯವನ್ನಾಡಿದ್ದ ಡ್ರೇಪರ್, ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಆದಾಗ್ಯೂ, ಅವರ ಅತ್ಯುತ್ತಮ ಇನ್ನಿಂಗ್ಸ್ ಹೊರತಾಗಿಯೂ, ಆಸ್ಟ್ರೇಲಿಯಾ ತಂಡವು 249 ರನ್‌ಗಳಿಗೆ ಆಲೌಟ್ ಆಯಿತು.

ಪಂದ್ಯದಲ್ಲಿ 15 ಸಿಕ್ಸರ್‌ಗಳು

ಎರಡನೇ ಯೂತ್ ಏಕದಿನ ಪಂದ್ಯದಲ್ಲಿ ಒಟ್ಟು 15 ಸಿಕ್ಸರ್‌ಗಳು ಸಿಡಿದವು. ಇದರಲ್ಲಿ ವೈಭವ್ ಸೂರ್ಯವಂಶಿ ಅವರ ಕೊಡುಗೆ ಅತಿ ಹೆಚ್ಚು. ಸೂರ್ಯವಂಶಿ 6 ಸಿಕ್ಸರ್‌ಗಳನ್ನು ಬಾರಿಸಿದರೆ, ಅಭಿಗ್ಯಾನ್ ಕುಂದು ಎರಡು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಆಸ್ಟ್ರೇಲಿಯಾದ ಜೇಡನ್ ಡ್ರೇಪರ್ ಐದು ಸಿಕ್ಸರ್‌ಗಳನ್ನು ಬಾರಿಸಿದರು.

IND A vs AUS A: ಆರ್​​ಸಿಬಿ ನಾಯಕ ರಜತ್ ಪಾಟಿದರ್​ಗೆ ನಾಯಕತ್ವ; ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ಬ್ಯಾಟ್ಸ್‌ಮನ್‌ಗಳಲ್ಲದೆ, ಭಾರತೀಯ ಬೌಲರ್‌ಗಳು ಸಹ ಅಸಾಧಾರಣ ಪ್ರದರ್ಶನ ನೀಡಿದರು. ನಾಯಕ ಆಯುಷ್ ಮ್ಹಾತ್ರೆ ನಾಲ್ಕು ಓವರ್‌ಗಳಲ್ಲಿ 27 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಪಡೆದರೆ, ಕನಿಷ್ಕ್ ಚೌಹಾಣ್ ಎರಡು ವಿಕೆಟ್‌ಗಳನ್ನು ಪಡೆದರು. ಸರಣಿಯ ಕೊನೆಯ ಯೂತ್ ಏಕದಿನ ಪಂದ್ಯ ಸೆಪ್ಟೆಂಬರ್ 26 ರಂದು ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ