AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 Asia Cup, 2023: ರಾಜ್ ಲಿಂಬಾನಿ ಮಿಂಚಿನ ಬೌಲಿಂಗ್: ಎರಡಂಕಿ ಮೊತ್ತಕ್ಕೆ ಎದುರಾಳಿ ತಂಡ ಆಲೌಟ್

India U19 vs Nepal U19: ಟೀಮ್ ಇಂಡಿಯಾ ಪರ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ರಾಜ್ ಲಿಂಬಾನಿ 9.1 ಓವರ್​ಗಳಲ್ಲಿ 13 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದರು. ಇನ್ನು ಲಿಂಬಾನಿಗೆ ಉತ್ತಮ ಸಾಥ್ ನೀಡಿದ ಆರಾಧ್ಯ ಶುಕ್ಲ 2 ವಿಕೆಟ್ ಪಡೆದರೆ, ಅರ್ಶಿನ್ ಕುಲ್ಕರ್ಣಿ ಒಂದು ವಿಕೆಟ್ ಕಬಳಿಸಿದರು.

U19 Asia Cup, 2023: ರಾಜ್ ಲಿಂಬಾನಿ ಮಿಂಚಿನ ಬೌಲಿಂಗ್: ಎರಡಂಕಿ ಮೊತ್ತಕ್ಕೆ ಎದುರಾಳಿ ತಂಡ ಆಲೌಟ್
Raj Limbani
TV9 Web
| Edited By: |

Updated on: Dec 12, 2023 | 3:58 PM

Share

ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ನಡೆದ ಅಂಡರ್-19 ಏಷ್ಯಾಕಪ್ (U19 Asia Cup, 2023)​ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಟೀಮ್ ಇಂಡಿಯಾ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು ರಾಜ್ ಲಿಂಬಾನಿ ಮಾರಕ ದಾಳಿಗೆ ತತ್ತರಿಸಿತು. ಐದನೇ ಓವರ್​ನಲ್ಲಿ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟ ಲಿಂಬಾನಿ, ಆ ಬಳಿಕ ಬ್ಯಾಕ್ ಟು ಬ್ಯಾಕ್ ವಿಕೆಟ್ ಪಡೆದು ಗಮನ ಸೆಳೆದರು.

ಕರಾರುವಾಕ್ ದಾಳಿಯೊಂದಿಗೆ ಮಿಂಚಿದ ರಾಜ್ ಲಿಂಬಾನಿ ನೇಪಾಳ ತಂಡದ ಯಾವುದೇ ಬ್ಯಾಟ್ಸ್​ಮನ್​ ಅನ್ನು ಎರಡಂಕಿ ಗಳಿಸಲು ಬಿಡಲಿಲ್ಲ ಎಂಬುದು ವಿಶೇಷ. ಪರಿಣಾಮ ನೇಪಾಳ ತಂಡವು 22.1 ಓವರ್​ಗಳಲ್ಲಿ 52 ರನ್​ಗಳಿಸಿ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ರಾಜ್ ಲಿಂಬಾನಿ 9.1 ಓವರ್​ಗಳಲ್ಲಿ 13 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದರು. ಇನ್ನು ಲಿಂಬಾನಿಗೆ ಉತ್ತಮ ಸಾಥ್ ನೀಡಿದ ಆರಾಧ್ಯ ಶುಕ್ಲ 2 ವಿಕೆಟ್ ಪಡೆದರೆ, ಅರ್ಶಿನ್ ಕುಲ್ಕರ್ಣಿ ಒಂದು ವಿಕೆಟ್ ಕಬಳಿಸಿದರು.

ಕೇವಲ 57 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಪರ ಆರಂಭಿಕರಾದ ಅರ್ಶಿನ್ ಕುಲ್ಕರ್ಣಿ (40) ಹಾಗೂ ಆದರ್ಶ್ ಸಿಂಗ್ (13) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ 7.1 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 57 ರನ್​ಗಳಿಸಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು.

ಭಾರತ ಅಂಡರ್ 19 ಪ್ಲೇಯಿಂಗ್ ಇಲೆವೆನ್: ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ಉದಯ್ ಸಹರಾನ್ (ನಾಯಕ), ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಎ ಅವಿನಾಶ್ (ವಿಕೆಟ್ ಕೀಪರ್), ರಾಜ್ ಲಿಂಬಾನಿ, ಆರಾಧ್ಯ ಶುಕ್ಲಾ, ಮುರುಗನ್ ಅಭಿಷೇಕ್, ಸೌಮಿ ಪಾಂಡೆ.

ಇದನ್ನೂ ಓದಿ: IPL 2024 Auction: 2 ಕೋಟಿ ರೂ. ಮೂಲ ಬೆಲೆಯಲ್ಲಿ ಕೇವಲ ಮೂವರು ಭಾರತೀಯರು

ನೇಪಾಳ ಅಂಡರ್ 19 ಪ್ಲೇಯಿಂಗ್ ಇಲೆವೆನ್: ದೇವ್ ಖಾನಲ್ (ನಾಯಕ), ಅರ್ಜುನ್ ಕುಮಾಲ್, ದೀಪಕ್ ಪ್ರಸಾದ್ ದುಮ್ರೆ, ಹೇಮಂತ್ ಧಾಮಿ, ಉತ್ತಮ್ ರಂಗು ಥಾಪಾ ಮಗರ್ (ವಿಕೆಟ್ ಕೀಪರ್) , ದೀಪೇಶ್ ಕಾಂಡೇಲ್, ಆಕಾಶ್ ಚಂದ್, ಸುಭಾಷ್ ಭಂಡಾರಿ, ದೀಪಕ್ ಬೋಹರಾ, ಗುಲ್ಸನ್ ಝಾ, ದೀಪಕ್ ಬೋಹರಾ.

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್