AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 Asia Cup, 2023: ರಾಜ್ ಲಿಂಬಾನಿ ಮಿಂಚಿನ ಬೌಲಿಂಗ್: ಎರಡಂಕಿ ಮೊತ್ತಕ್ಕೆ ಎದುರಾಳಿ ತಂಡ ಆಲೌಟ್

India U19 vs Nepal U19: ಟೀಮ್ ಇಂಡಿಯಾ ಪರ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ರಾಜ್ ಲಿಂಬಾನಿ 9.1 ಓವರ್​ಗಳಲ್ಲಿ 13 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದರು. ಇನ್ನು ಲಿಂಬಾನಿಗೆ ಉತ್ತಮ ಸಾಥ್ ನೀಡಿದ ಆರಾಧ್ಯ ಶುಕ್ಲ 2 ವಿಕೆಟ್ ಪಡೆದರೆ, ಅರ್ಶಿನ್ ಕುಲ್ಕರ್ಣಿ ಒಂದು ವಿಕೆಟ್ ಕಬಳಿಸಿದರು.

U19 Asia Cup, 2023: ರಾಜ್ ಲಿಂಬಾನಿ ಮಿಂಚಿನ ಬೌಲಿಂಗ್: ಎರಡಂಕಿ ಮೊತ್ತಕ್ಕೆ ಎದುರಾಳಿ ತಂಡ ಆಲೌಟ್
Raj Limbani
TV9 Web
| Edited By: |

Updated on: Dec 12, 2023 | 3:58 PM

Share

ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ನಡೆದ ಅಂಡರ್-19 ಏಷ್ಯಾಕಪ್ (U19 Asia Cup, 2023)​ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಟೀಮ್ ಇಂಡಿಯಾ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು ರಾಜ್ ಲಿಂಬಾನಿ ಮಾರಕ ದಾಳಿಗೆ ತತ್ತರಿಸಿತು. ಐದನೇ ಓವರ್​ನಲ್ಲಿ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟ ಲಿಂಬಾನಿ, ಆ ಬಳಿಕ ಬ್ಯಾಕ್ ಟು ಬ್ಯಾಕ್ ವಿಕೆಟ್ ಪಡೆದು ಗಮನ ಸೆಳೆದರು.

ಕರಾರುವಾಕ್ ದಾಳಿಯೊಂದಿಗೆ ಮಿಂಚಿದ ರಾಜ್ ಲಿಂಬಾನಿ ನೇಪಾಳ ತಂಡದ ಯಾವುದೇ ಬ್ಯಾಟ್ಸ್​ಮನ್​ ಅನ್ನು ಎರಡಂಕಿ ಗಳಿಸಲು ಬಿಡಲಿಲ್ಲ ಎಂಬುದು ವಿಶೇಷ. ಪರಿಣಾಮ ನೇಪಾಳ ತಂಡವು 22.1 ಓವರ್​ಗಳಲ್ಲಿ 52 ರನ್​ಗಳಿಸಿ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ರಾಜ್ ಲಿಂಬಾನಿ 9.1 ಓವರ್​ಗಳಲ್ಲಿ 13 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದರು. ಇನ್ನು ಲಿಂಬಾನಿಗೆ ಉತ್ತಮ ಸಾಥ್ ನೀಡಿದ ಆರಾಧ್ಯ ಶುಕ್ಲ 2 ವಿಕೆಟ್ ಪಡೆದರೆ, ಅರ್ಶಿನ್ ಕುಲ್ಕರ್ಣಿ ಒಂದು ವಿಕೆಟ್ ಕಬಳಿಸಿದರು.

ಕೇವಲ 57 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಪರ ಆರಂಭಿಕರಾದ ಅರ್ಶಿನ್ ಕುಲ್ಕರ್ಣಿ (40) ಹಾಗೂ ಆದರ್ಶ್ ಸಿಂಗ್ (13) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ 7.1 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 57 ರನ್​ಗಳಿಸಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು.

ಭಾರತ ಅಂಡರ್ 19 ಪ್ಲೇಯಿಂಗ್ ಇಲೆವೆನ್: ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ಉದಯ್ ಸಹರಾನ್ (ನಾಯಕ), ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಎ ಅವಿನಾಶ್ (ವಿಕೆಟ್ ಕೀಪರ್), ರಾಜ್ ಲಿಂಬಾನಿ, ಆರಾಧ್ಯ ಶುಕ್ಲಾ, ಮುರುಗನ್ ಅಭಿಷೇಕ್, ಸೌಮಿ ಪಾಂಡೆ.

ಇದನ್ನೂ ಓದಿ: IPL 2024 Auction: 2 ಕೋಟಿ ರೂ. ಮೂಲ ಬೆಲೆಯಲ್ಲಿ ಕೇವಲ ಮೂವರು ಭಾರತೀಯರು

ನೇಪಾಳ ಅಂಡರ್ 19 ಪ್ಲೇಯಿಂಗ್ ಇಲೆವೆನ್: ದೇವ್ ಖಾನಲ್ (ನಾಯಕ), ಅರ್ಜುನ್ ಕುಮಾಲ್, ದೀಪಕ್ ಪ್ರಸಾದ್ ದುಮ್ರೆ, ಹೇಮಂತ್ ಧಾಮಿ, ಉತ್ತಮ್ ರಂಗು ಥಾಪಾ ಮಗರ್ (ವಿಕೆಟ್ ಕೀಪರ್) , ದೀಪೇಶ್ ಕಾಂಡೇಲ್, ಆಕಾಶ್ ಚಂದ್, ಸುಭಾಷ್ ಭಂಡಾರಿ, ದೀಪಕ್ ಬೋಹರಾ, ಗುಲ್ಸನ್ ಝಾ, ದೀಪಕ್ ಬೋಹರಾ.

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​