India U19 vs Australia U19: ಯಶ್ ಧುಲ್ ಭರ್ಜರಿ ಶತಕ: ಆಸ್ಟ್ರೇಲಿಯಾಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

Yash Dhull: ಉತ್ತಮ ಹೊಂದಾಣಿಕೆಯ ಆಟ ಪ್ರದರ್ಶಿಸಿದ ರಶೀದ್ ಹಾಗೂ ಯಶ್ ಧುಲ್ ಶತಕದ ಜೊತೆಯಾಟವಾಡಿದರು. ಇದಾದ ಬಳಿಕ ತಮ್ಮ ಜೊತೆಯಾಟವನ್ನು 200ಕ್ಕೇರಿಸಿದರು.

India U19 vs Australia U19: ಯಶ್ ಧುಲ್ ಭರ್ಜರಿ ಶತಕ: ಆಸ್ಟ್ರೇಲಿಯಾಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ
Yash Dhull
Follow us
| Updated By: ಝಾಹಿರ್ ಯೂಸುಫ್

Updated on: Feb 02, 2022 | 10:19 PM

ಅಂಟಿಗುವಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್​ನ ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾಗೆ ಕಠಿಣ ಸವಾಲು ನೀಡಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ಕಿರಿಯರ ನಾಯಕ ಯಶ್ ಧುಲ್ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಭಾರತ ತಂಡದ ಆರಂಭ ಉತ್ತಮವಾಗಿರಲಿಲ್ಲ. 6 ರನ್​ಗಳಿಸಿ ರಘವಂಶಿ ಔಟಾದರೆ, ಹನೂರ್ ಸಿಂಗ್ 16 ರನ್​ಗೆ ತಮ್ಮ ಇನಿಂಗ್ಸ್ ಅಂತ್ಯಗೊಳಿಸಿದರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ಯಶ್ ಧುಲ್ ಹಾಗೂ ಉಪನಾಯಕ ಶೇಖ್ ರಶೀದ್ ಅಧ್ಬುತ ಜೊತೆಯಾಟ ಪ್ರದರ್ಶಿಸಿದರು. ಆಸ್ಟ್ರೇಲಿಯಾ ಬೌಲರುಗಳನ್ನು ಅತ್ಯುತ್ತಮವಾಗಿ ಎದುರಿಸಿದ ಈ ಜೋಡಿ ರನ್​ ಗತಿಯನ್ನು ಹೆಚ್ಚಿಸುತ್ತಾ ಸಾಗಿದರು. ಅಲ್ಲದೆ ಈ ಜೋಡಿಯ ಜೊತೆಯಾಟವನ್ನು ಮುರಿಯಲು ಆಸ್ಟ್ರೇಲಿಯಾ ಕಿರಿಯರು ಸಾಕಷ್ಟು ಬೆವರಿಸಬೇಕಾಯಿತು.

ಉತ್ತಮ ಹೊಂದಾಣಿಕೆಯ ಆಟ ಪ್ರದರ್ಶಿಸಿದ ರಶೀದ್ ಹಾಗೂ ಯಶ್ ಧುಲ್ ಶತಕದ ಜೊತೆಯಾಟವಾಡಿದರು. ಇದಾದ ಬಳಿಕ ತಮ್ಮ ಜೊತೆಯಾಟವನ್ನು 200ಕ್ಕೇರಿಸಿದರು. ಪರಿಣಾಮ ಟೀಮ್ ಇಂಡಿಯಾ 200ರ ಗಡಿದಾಟಿದಾಗಲೂ ಭಾರತ ತಂಡ ಕೇವಲ 2 ವಿಕೆಟ್ ಮಾತ್ರ ಕಳೆದುಕೊಂಡಿತ್ತು. ಈ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯಶ್ ಧುಲ್ 110 ಎಸೆತಗಳಲ್ಲಿ 110 ಬಾರಿಸಿ ಮಿಂಚಿದರು. ತಮ್ಮ ಸ್ಪೋಟಕ ಇನಿಂಗ್ಸ್​ನಲ್ಲಿ 1 ಸಿಕ್ಸರ್ ಹಾಗೂ 10 ಬೌಂಡರಿಗಳನ್ನು ಬಾರಿಸಿದ್ದರು. ಮತ್ತೊಂದೆಡೆ ಶೇಖ್ ರಶೀದ್ 108 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಬೌಂಡರಿಗಳೊಂದಿಗೆ 94 ರನ್ ಸಿಡಿಸಿದರು.

ತಂಡದ ಮೊತ್ತ 241 ರನ್​ ಆಗಿದ್ದ ವೇಳೆ ಯಶ್ ಧುಲ್ (110) ವಿಕೆಟ್ ಒಪ್ಪಿಸಿದರೆ, ಇದರ ಬೆನ್ನಲ್ಲೇ ಶೇಖ್ ರಶೀದ್ (94) ಕೂಡ ಪೆವಿಲಿಯನ್​ ಕಡೆ ಮುಖ ಮಾಡಿದರು. ಅಂತಿಮ ಓವರ್​ನಲ್ಲಿ 27 ರನ್​ ಬಾರಿಸುವ ಮೂಲಕ ದಿನೇಶ್ ಮತ್ತು ನಿಶಾಂತ್ ತಂಡದ ಮೊತ್ತವನ್ನು ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್​ಗಳ ನಷ್ಟಕ್ಕೆ 290 ಕ್ಕೆ ತಂದು ನಿಲ್ಲಿಸಿದರು. ಈ ಮೂಲಕ ಆಸ್ಟ್ರೇಲಿಯಾಗೆ 291 ರನ್​ಗಳ ಕಠಿಣ ಗುರಿ ನೀಡಿದೆ.

ಟೀಮ್ ಇಂಡಿಯಾ ಅಂಡರ್-19 ತಂಡವು ಇದುವರೆಗೆ 4 ಬಾರಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಮೊದಲ ಬಾರಿ 2000ರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಇನ್ನು 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ ನಾಲ್ಕು ಬಾರಿಯ ಚಾಂಪಿಯನ್‌ ಭಾರತ ತನ್ನ ಐದನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ. ಅಷ್ಟೇ ಅಲ್ಲದೆ ಈ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಫೈನಲ್​ ಪ್ರವೇಶಿಸಿದರೆ 6 ಬಾರಿ ಫೈನಲ್​ ಆಡಿದ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಲಿದೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(India U19 vs Australia U19: Super League Semi-Final)

ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು