AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಕೊಹ್ಲಿ ಬದಲು ಯಾರಿಗೆ ಸಿಗಲಿದೆ ಅವಕಾಶ? ಇಲ್ಲಿದೆ ಭಾರತ ಸಂಭಾವ್ಯ ತಂಡ

IND vs AFG: ಪಂದ್ಯಕ್ಕೆ ಒಂದು ದಿನ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಾಯಕ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಓಪನಿಂಗ್ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ವಿರಾಟ್ ಕೊಹ್ಲಿ ಆಡದಿದ್ದಲ್ಲಿ ಶುಭ್​ಮನ್ ಗಿಲ್‌ಗೆ ಮೂರನೇ ಕ್ರಮಾಂಕದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ.

IND vs AFG: ಕೊಹ್ಲಿ ಬದಲು ಯಾರಿಗೆ ಸಿಗಲಿದೆ ಅವಕಾಶ? ಇಲ್ಲಿದೆ ಭಾರತ ಸಂಭಾವ್ಯ ತಂಡ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jan 10, 2024 | 7:06 PM

Share

ಸುಮಾರು 14 ತಿಂಗಳ ನಂತರ ಕಿಂಗ್ ಕೊಹ್ಲಿಯನ್ನು (Virat Kohli) ಚುಟುಕು ಮಾದರಿಯಲ್ಲಿ ನೋಡಲು ಕಾತುರರಾಗಿದ್ದ ಟೀಂ ಇಂಡಿಯಾ ಅಭಿಮಾನಿಗಳಿಗೆ ಶಾಕ್ ಎದುರಾಗಿದೆ. ಪಂದ್ಯದ ಒಂದು ದಿನ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡವನ್ನು ಉದ್ದೇಶಿಸಿ ಮಾತನಾಡಿರುವ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid), ಕೊಹ್ಲಿ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ದ್ರಾವಿಡ್ ಆಡದಿರುವುದಕ್ಕೆ ಸ್ಪಷ್ಟ ಕಾರಣ ನೀಡದೆ ಕೌಟುಂಬಿಕ ಕಾರಣ ನೀಡಿ ಪರ್ತಕರ್ತರ ಪ್ರಶ್ನೆಗಳಿಂದ ಬಚಾವ್ ಆಗಿದ್ದಾರೆ. ಆದರೆ ಜನವರಿ 11 ರಂದು ಕೊಹ್ಲಿ ಪುತ್ರಿ ವಮಿಕಾ ಹುಟ್ಟುಹಬ್ಬ ಎಂಬುದು ಎಲ್ಲರಿಗೂ ಗೊತ್ತು. ಅದಕ್ಕಾಗಿಯೇ ಅವರು ಕುಟುಂಬದೊಂದಿಗೆ ಈ ಸಂಭ್ರಮವನ್ನು ಆಚರಿಸಲು ಬಯಸಿದ್ದು, ಮೊದಲ ಟಿ20 ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಅಂದಹಾಗೆ, ಈಗ ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಹಾಗಾದರೆ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಏನಿರಬಹುದು ಎಂಬುದನ್ನು ನೋಡುವುದಾದರೆ..

ಆರಂಭಿಕರು ಯಾರು?

ಪಂದ್ಯಕ್ಕೆ ಒಂದು ದಿನ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಾಯಕ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಓಪನಿಂಗ್ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ವಿರಾಟ್ ಕೊಹ್ಲಿ ಆಡದಿದ್ದಲ್ಲಿ ಶುಭ್​ಮನ್ ಗಿಲ್‌ಗೆ ಮೂರನೇ ಕ್ರಮಾಂಕದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ಅಲ್ಲದೆ ಶುಭಮನ್ ಗಿಲ್ ಮೂಲತಃ ಪಂಜಾಬ್‌ನವರಾಗಿರುವುದರಿಂದ ಅವರಿಗೆ ತಂಡದಲ್ಲಿ ಅವಕಾಶ ಸಿಗುವುದು ಖಚಿತ.

Breaking: ಮೊದಲ ಟಿ20 ಪಂದ್ಯಕ್ಕೆ ಕಿಂಗ್ ಕೊಹ್ಲಿ ಅಲಭ್ಯ! ಖಚಿತ ಪಡಿಸಿದ ದ್ರಾವಿಡ್

ಈ ಅಗ್ರ ಮೂರು ಬ್ಯಾಟ್ಸ್‌ಮನ್‌ಗಳ ನಂತರ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ನೋಡುವುದಾದರೆ.. ಸಂಜು ಸ್ಯಾಮ್ಸನ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಬಹುದು. ಜಿತೇಶ್ ಶರ್ಮಾ ಕೂಡ ತಂಡದಲ್ಲಿದ್ದರೂ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗುವ ನಿರೀಕ್ಷೆ ಇದೆ. ಇತ್ತೀಚೆಗಷ್ಟೇ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅದ್ಭುತ ಶತಕ ಸಿಡಿಸಿದ್ದರು. ಅಂದರೆ ಫಾರ್ಮ್‌ನಲ್ಲಿರುವ ಸಂಜುಗೆ ಮೊದಲ ಟಿ20 ಪಂದ್ಯದಲ್ಲಿ ಅವಕಾಶ ಸಿಗಬಹುದು.

ಶಿವಂ ದುಬೆಗೆ ಸಿಗುತ್ತಾ ಅವಕಾಶ?

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಶಿವಂ ದುಬೆಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರು ಆಲ್ ರೌಂಡರ್ ಆಗಿ ಆಡುವುದನ್ನು ಕಾಣಬಹುದು. ಬ್ಯಾಟಿಂಗ್ ಜೊತೆಗೆ ನಾಲ್ಕು ಓವರ್ ಬೌಲ್ ಮಾಡಬಲ್ಲ ಸಾಮಥ್ಯ್ರ ದುಬೆಗಿದೆ. ರಿಂಕು ಸಿಂಗ್ ಕೂಡ ಆಡುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ, ಕೊನೆಯ ಓವರ್‌ಗಳಲ್ಲಿ ತ್ವರಿತವಾಗಿ ರನ್ ಗಳಿಸುವ ವಿಷಯದಲ್ಲಿ ಅವರಿಗೆ ಯಾರು ಸರಿಸಾಟಿ ಇಲ್ಲ. ಇದಲ್ಲದೆ, ತಂಡದಲ್ಲಿ ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ರೂಪದಲ್ಲಿ ಇಬ್ಬರು ಸ್ಪಿನ್ನರ್‌ಗಳಿದ್ದಾರೆ. ಈ ಇಬ್ಬರು ಸ್ಪಿನ್ ಜೊತೆಗೆ ಬ್ಯಾಟಿಂಗ್ ಕೂಡ ಮಾಡಬಲ್ಲರು. ಹೀಗಾಗಿ ಈ ಇಬ್ಬರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಹಾಗೆಯೇ ತಂಡದಲ್ಲಿ ಕುಲ್ದೀಪ್ ಯಾದವ್ ಮತ್ತು ರವಿ ಬಿಷ್ಣೋಯ್ ಅವರಂತಹ ಸ್ಪೆಷಲಿಸ್ಟ್ ಸ್ಪಿನ್ನರ್‌ಗಳಿದ್ದಾರೆ. ಆದರೆ ಈ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ನೀಡಲು ಮುಂದಾದರೆ ರವಿ ಪರ ತಂಡದ ಒಲವಿರುವುದು ಖಚಿತ. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ರವಿ ಅದ್ಭುತ ಪ್ರದರ್ಶನ ನೀಡಿದ್ದರು. ಅದೇ ಸಮಯದಲ್ಲಿ ಅರ್ಷದೀಪ್ ಸಿಂಗ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಮೂವರು ವೇಗಿಗಳಾಗಿ ಆಡುವುದು ಬಹುತೇಕ ಖಚಿತವಾಗಿದೆ.

ಮೊದಲ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಟಿ20 ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋ ಪಟೇಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ