AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಭಾರತ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ

Afghanistan Squad India Tour: 2026ರ ಐಪಿಎಲ್ ನಂತರ ಭಾರತ ಆತಿಥ್ಯದಲ್ಲಿ ಟೀಂ ಇಂಡಿಯಾ ಮತ್ತು ಅಫ್ಘಾನಿಸ್ತಾನ ನಡುವೆ ಒಂದು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಬಿಸಿಸಿಐ ಈಗಾಗಲೇ ತಂಡಗಳನ್ನು ಪ್ರಕಟಿಸಿದ್ದು, ಇದೀಗ ಅಫ್ಘಾನಿಸ್ತಾನ ಕೂಡ ಹಶ್ಮತುಲ್ಲಾ ಶಾಹಿದಿ ನಾಯಕತ್ವದಲ್ಲಿ ತನ್ನ ಟೆಸ್ಟ್ ಮತ್ತು ಏಕದಿನ ತಂಡಗಳನ್ನು ಘೋಷಿಸಿದೆ. ರಶೀದ್ ಖಾನ್‌ಗೆ ಟೆಸ್ಟ್‌ನಿಂದ ವಿಶ್ರಾಂತಿ, ಕೆಲ ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಜೂನ್ 6ರಿಂದ ಸರಣಿ ಆರಂಭವಾಗಲಿದೆ.

IND vs AFG: ಭಾರತ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ
AfghanistanImage Credit source: ACB X
ಪೃಥ್ವಿಶಂಕರ
|

Updated on:May 26, 2026 | 10:57 PM

Share

2026 ರ ಐಪಿಎಲ್ (IPL 2026) ಮುಗಿದ ಬಳಿಕ ಟೀಂ ಇಂಡಿಯಾ ಹಾಗೂ ಅಫ್ಘಾನಿಸ್ತಾನದ (IND vs AFG) ನಡುವೆ ಒಂದು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಭಾರತದ ಆತಿಥ್ಯದಲ್ಲಿ ನಡೆಯಲಿರುವ ಈ ಸರಣಿಗೆ ಬಿಸಿಸಿಐ ಈಗಾಗಲೇ ತಂಡಗಳನ್ನು ಪ್ರಕಟಿಸಿದೆ. ಇದೀಗ ಐಪಿಎಲ್ ಪ್ಲೇಆಫ್‌ ನಡುವೆ ಅಫ್ಘಾನಿಸ್ತಾನ ಕೂಡ ತನ್ನ ತಂಡವನ್ನು ಪ್ರಕಟಿಸಿದೆ. ಹಶ್ಮತುಲ್ಲಾ ಶಾಹಿದಿ ನಾಯಕತ್ವದಲ್ಲಿ ಅಫ್ಘಾನಿಸ್ತಾನದ ಟೆಸ್ಟ್ ಮತ್ತು ಏಕದಿನ ತಂಡಗಳೆರಡನ್ನು ಪ್ರಕಟಿಸಲಾಗಿದೆ. ಟೆಸ್ಟ್ ಪಂದ್ಯಕ್ಕೆ ರಶೀದ್ ಖಾನ್ ಮತ್ತು ಇಬ್ರಾಹಿಂ ಜದ್ರಾನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ರಹಮಾನುಲ್ಲಾ ಜದ್ರಾನ್, ಬಿಲಾಲ್ ಸಮಿ ಮತ್ತು ನೆಂಗಿಯಾಲಿಯಾ ಖರೋಟೆ ಅವರನ್ನು ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಭಾರತ-ಅಫ್ಘಾನಿಸ್ತಾನ ಸರಣಿ ವೇಳಾಪಟ್ಟಿ

  • ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯವು ನ್ಯೂ ಚಂಡೀಗಢದ ನ್ಯೂ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯವು ಜೂನ್ 6 ರಿಂದ ಪ್ರಾರಂಭವಾಗಲಿದೆ.
  • ಮೊದಲ ಏಕದಿನ ಪಂದ್ಯ ಜೂನ್ 13 ರಂದು ಮಧ್ಯಾಹ್ನ 1.30 ಕ್ಕೆ ಧರ್ಮಶಾಲಾದಲ್ಲಿ ನಡೆಯಲಿದೆ.
  • ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
  • ಮೂರನೇ ಏಕದಿನ ಪಂದ್ಯ ಜೂನ್ 20 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಧ್ಯಾಹ್ನ 1.30 ರಿಂದ ಆರಂಭವಾಗಲಿದೆ.

ಮುಖಾಮುಖಿ ದಾಖಲೆ

ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಇಲ್ಲಿಯವರೆಗೆ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ಟೀಂ ಇಂಡಿಯಾ ಮೂರರಲ್ಲಿ ಗೆದ್ದಿದೆ. ಒಂದು ಪಂದ್ಯ ಟೈನಲ್ಲಿ ಕೊನೆಗೊಂಡಿದೆ. ಅಂದರೆ ಅಫ್ಘಾನಿಸ್ತಾನ ಇದುವರೆಗೆ ಭಾರತದ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಒಂದು ಟೆಸ್ಟ್ ಪಂದ್ಯ ನಡೆದಿದ್ದು, ಆ ಪಂದ್ಯವನ್ನು ಭಾರತ ಗೆದ್ದಿದೆ.

ಅಫ್ಘಾನಿಸ್ತಾನ ಟೆಸ್ಟ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಅಬ್ದುಲ್ ಮಲಿಕ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ರಹಮಾನುಲ್ಲಾ ಗುರ್ಬಾಜ್, ರಹಮಾನುಲ್ಲಾ ಝದ್ರಾನ್, ಅಫ್ಸರ್ ಝಜೈ (ವಿಕೆಟ್ ಕೀಪರ್), ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜೈ, ಶರಫುದಿನ್ ಅಶ್ರಫ್, ನಂಗ್ಯಾಲ್ ಖರೋಟೈ, ಖೈಸ್ ಅಹ್ಮದ್, ಬಿಲಾಲ್ ಸಮಿ, ಜಿಯಾ ಶರೀಫಿ, ಸಲೀಮ್ ಸಫಿ

ಅಫ್ಘಾನಿಸ್ತಾನ ಏಕದಿನ ತಂಡ: ಹಸ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ರಹಮತ್ ಷಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ನಂಗ್ಯಾಲ್ ಖರೋಟೈ, ಎಎಮ್ ಗಜನ್ಫರ್, ಜಿಯಾ ಯು ರೆಹಮಾನ್ ಶರೀಫಿ, ಫರೀದ್ ಮಲಿಕ್, ಬಿಲಾಲ್ ಸಾಮಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Tue, 26 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ