AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ದಾಂಡಿಗರ ಆರ್ಭಟ… 11 ದಾಖಲೆಗಳು ನಿರ್ಮಾಣ

India vs Afghanistan: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ 402 ರನ್​ಗಳಿಸಿ ಆಲೌಟ್ ಆಯಿತು. ಈ ಕಠಿಣ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 44.3 ಓವರ್​ಗಳಲ್ಲಿ 232 ರನ್​ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಟೀಮ್ ಇಂಡಿಯಾ 170 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಟೀಮ್ ಇಂಡಿಯಾ ದಾಂಡಿಗರ ಆರ್ಭಟ... 11 ದಾಖಲೆಗಳು ನಿರ್ಮಾಣ
Shubman Gill - Ishan KishanImage Credit source: BCCI
ಝಾಹಿರ್ ಯೂಸುಫ್
|

Updated on: Jun 18, 2026 | 7:27 AM

Share

ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಫ್ಘಾನಿಸ್ತಾನ್ ತಂಡವನ್ನು ಟೀಮ್ ಇಂಡಿಯಾ 170 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ 402 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 232 ರನ್​ಗಳಿಗೆ ಆಲೌಟ್ ಆಗಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಹಾಗೂ ಭಾರತೀಯ ಆಟಗಾರರು ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ…

  • ಅತ್ಯಧಿಕ ಮೊತ್ತ: ಭಾರತ ಗಳಿಸಿದ 402 ರನ್, ಆಫ್ಘಾನಿಸ್ತಾನ್ ವಿರುದ್ಧ ಯಾವುದೇ ತಂಡ ಗಳಿಸಿದ ಅತ್ಯಧಿಕ ಏಕದಿನ ಮೊತ್ತವಾಗಿದೆ.
  • 400+ ರನ್ ವಿಶ್ವ ದಾಖಲೆ: ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಹೆಚ್ಚು ಬಾರಿ 400ಕ್ಕೂ ಅಧಿಕ ರನ್ ಗಳಿಸಿದ ಜಾಗತಿಕ ದಾಖಲೆಯಲ್ಲಿ ಭಾರತ ಈಗ ಸೌತ್ ತಂಡವನ್ನು ಸರಿಗಟ್ಟಿದೆ. ಉಭಯ ತಂಡಗಳು 8 ಬಾರಿ 400+ ರನ್​ ಕಲೆಹಾಕಿದೆ.
  • ಹೀನಾಯ ಸೋಲು: 170 ರನ್‌ಗಳ ಈ ಸೋಲು ಏಕದಿನ ಇತಿಹಾಸದಲ್ಲೇ ಅಫ್ಘಾನಿಸ್ತಾನ್ ತಂಡ ಎರಡನೇ ಅತಿ ದೊಡ್ಡ ರನ್ ಅಂತರದ ಸೋಲಾಗಿದೆ. ಇದಕ್ಕೂ ಮುನ್ನ 2015ರಲ್ಲಿ ಆಸ್ಟ್ರೇಲಿಯಾ ವಿರುದ್ಧ 275 ರನ್‌ಗಳಿಗೆ ಸೋತು ಭಾರೀ ಮುಖಭಂಗ ಅನುಭವಿಸಿತ್ತು.

ಆಟಗಾರರ ದಾಖಲೆಗಳು:

  • ಶುಭ್​ಮನ್ ಗಿಲ್ (154) ದಾಖಲೆಗಳು:
  • 7,000 ರನ್‌: ಶುಭ್​​ಮನ್ ಗಿಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ (ಎಲ್ಲಾ ಮಾದರಿ ಸೇರಿ) 7,000 ರನ್‌ಗಳನ್ನು ಪೂರೈಸಿದ್ದಾರೆ.
  • ನಾಯಕನಾಗಿ ಮೊದಲ ಶತಕ: ಏಕದಿನ ಕ್ರಿಕೆಟ್‌ನಲ್ಲಿ ನಾಯಕನ ಜವಾಬ್ದಾರಿ ವಹಿಸಿಕೊಂಡ ನಂತರ ಗಿಲ್ ಬಾರಿಸಿದ ಮೊದಲ ಶತಕ ಇದಾಗಿದೆ (154 ರನ್).
  •  ವೇಗದ 150 ರನ್: ಕೇವಲ 108 ಎಸೆತಗಳಲ್ಲಿ 150 ರನ್ ಪೂರೈಸುವ ಮೂಲಕ, ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
  • ಇಶಾನ್ ಕಿಶನ್ (125) ದಾಖಲೆಗಳು:
  •  1,000 ಏಕದಿನ ರನ್: ಇಶಾನ್ ಕಿಶನ್ ಏಕದಿನ ಕ್ರಿಕೆಟ್​ನಲ್ಲಿ 1000 ರನ್​ಗಳನ್ನು ಪೂರೈಸಿದ್ದಾರೆ.
  • ನಾಲ್ಕನೇ ಭಾರತೀಯ: ಭಾರತದ ಪರ ಅತ್ಯಂತ ವೇಗವಾಗಿ 1,000 ಏಕದಿನ ರನ್ ಪೂರೈಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಇಶಾನ್ ಕಿಶನ್ ನಾಲ್ಕನೇ ಸ್ಥಾನ ಪಡೆದಿದ್ದಾರೆ.
  • ಶ್ರೇಯಸ್ ಅಯ್ಯರ್ (26) ದಾಖಲೆಗಳು:
  • 3,000 ರನ್‌: ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 3,000 ರನ್ ಪೂರೈಸಿದ ಎರಡನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಶ್ರೇಯಸ್ ಅಯ್ಯರ್ ಈ ಪಂದ್ಯದ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ.
  • ರೋಹಿತ್ ಶರ್ಮಾ (48) ದಾಖಲೆಗಳು:
  • 14,000 ರನ್: ಲಿಸ್ಟ್-ಎ ಕ್ರಿಕೆಟ್‌ನಲ್ಲಿ 14,000 ರನ್ ಪೂರೈಸಿದ ಐದನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ರೋಹಿತ್ ಶರ್ಮಾ ಈ ಪಂದ್ಯದ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ.
  • ಇತರ ದಾಖಲೆಗಳು:
  • ದಾಖಲೆಯ ಜೊತೆಯಾಟ: 3ನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಮತ್ತು ಇಶಾನ್ ಕಿಶನ್ ಜೋಡಿ 224 ರನ್​ಗಳಿಸಿದ್ದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ 3ನೇ ವಿಕೆಟ್‌ಗೆ ದಾಖಲಾದ ಮೂರನೇ ಅತ್ಯಧಿಕ ಮೊತ್ತದ ಜೊತೆಯಾಟವಾಗಿದೆ.

ಇದನ್ನೂ ಓದಿ: ಬರೋಬ್ಬರಿ 27 ಪಂದ್ಯಗಳು… ಟೀಮ್ ಇಂಡಿಯಾದ ವಿಶ್ವಕಪ್​ ಸಿದ್ಧತೆ ಶುರು!

ಒಟ್ಟಾರೆಯಾಗಿ ಹೇಳುವುದಾದರೆ, ಲಕ್ನೋದ ಏಕನಾ ಮೈದಾನದಲ್ಲಿ ನಡೆದ ಈ ಪಂದ್ಯವು ಕೇವಲ ಭಾರತ ತಂಡದ ಗೆಲುವಷ್ಟೇ ಅಲ್ಲದೆ, ದಾಖಲೆಗಳ ಮಹಾಪೂರಕ್ಕೇ ಸಾಕ್ಷಿಯಾಗಿದೆ.

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ