AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘನ್ ವಿರುದ್ಧ ಟಾಸ್ ಗೆದ್ದ ಭಾರತ; ಪ್ಲೇಯಿಂಗ್​ 11 ನಲ್ಲಿ 1 ಬದಲಾವಣೆ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ T20 ಪಂದ್ಯಕ್ಕೆ ಟಾಸ್ ಆಗಿದ್ದು, ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಮೊದಲ ಪಂದ್ಯ ಗೆದ್ದಿರುವ ಭಾರತ ಸರಣಿ ಗೆಲ್ಲಲು ಸಜ್ಜಾಗಿದೆ. ಅಫ್ಘಾನಿಸ್ತಾನ ಸರಣಿ ಜೀವಂತವಾಗಿಡಲು ಹೋರಾಡಲಿದೆ. ವರುಣ್ ಚಕ್ರವರ್ತಿ ಬದಲಿಗೆ ರವಿ ಬಿಷ್ಣೋಯ್ ಆಡುವ XI ನಲ್ಲಿ ಸ್ಥಾನ ಪಡೆದಿದ್ದಾರೆ. ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಅಫ್ಘನ್ ವಿರುದ್ಧ ಟಾಸ್ ಗೆದ್ದ ಭಾರತ; ಪ್ಲೇಯಿಂಗ್​ 11 ನಲ್ಲಿ 1 ಬದಲಾವಣೆ
ಭಾರತ Vs ಅಫ್ಘಾನಿಸ್ತಾನ
ಪೃಥ್ವಿಶಂಕರ
|

Updated on:Sep 15, 2026 | 7:18 PM

Share

ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇದೀಗ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಸರಣಿಯನ್ನು ತನ್ನದಾಗಿಸಿಕೊಳ್ಳಲು ಟೀಂ ಇಂಡಿಯಾ ಎದುರು ನೋಡುತ್ತಿದೆ ಏತನ್ಮಧ್ಯೆ, ಸರಣಿಯನ್ನು ಜೀವಂತವಾಗಿರಿಸುವ ಇರಾದೆಯೊಂದಿಗೆ ಅಫ್ಘಾನಿಸ್ತಾನ ಮೈದಾನಕ್ಕಿಳಿದಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್‌ ಮಾಡಲಿದೆ.

ಭಾರತ ತಂಡದಲ್ಲಿ 1 ಬದಲಾವಣೆ

ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಅಭಿಮಾನಿಗಳಿಗೆ ನಿರಾಶೆಯಾಗಿದ್ದು, ಎರಡನೇ ಪಂದ್ಯದಲ್ಲೂ ವೈಭವ್ ಸೂರ್ಯವಂಶಿಗೆ ಆಡುವ ಅವಕಾಶ ಸಿಕ್ಕಿಲ್ಲ. ಇದರರ್ಥ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಆರಂಭಿಕರಾಗಿ ಆಡಲಿದ್ದಾರೆ. ಆದರೆ ಈ ಮೊದಲ ವರದಿಯಾದಂತೆ ಗಾಯಗೊಂಡಿರುವ ಸ್ಪಿನ್ನರ್ ವರುಣ್ ಚಕ್ರವರ್ತಿ ಈ ಸರಣಿಯಿಂದಲೇ ಹೊರಬಿದ್ದಿದ್ದು, ಅವರ ಬದಲಿಗೆ ರವಿ ಬಿಷ್ಣೋಯಿಗೆ ತಂಡದಲ್ಲಿ ಆಡುವ ಅವಕಾಶ ಸಿಕ್ಕಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇತ್ತ ಅಫ್ಘಾನಿಸ್ತಾನ ಮೊದಲ ಟಿ20 ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.

ಹೆಡ್-ಟು-ಹೆಡ್ ದಾಖಲೆ

ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇದುವರೆಗೆ ಒಟ್ಟು 10 ಪಂದ್ಯಗಳು ನಡೆದಿವೆ. ಈ ಪಂದ್ಯಗಳಲ್ಲಿ ಟೀಂ ಇಂಡಿಯಾ 9 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರರ್ಥ ಅಫ್ಘಾನಿಸ್ತಾನ ಇನ್ನೂ ಒಂದೇ ಒಂದು ಪಂದ್ಯದಲ್ಲಿ ಭಾರತವನ್ನು ಸೋಲಿಸಿಲ್ಲ.

ಉಭಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ (ವರುಣ್ ಚಕ್ರವರ್ತಿ ಬದಲಿಗೆ), ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್ದೀಪ್ ಸಿಂಗ್.

ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್ ಮತ್ತು ಫಜಲ್ಹಕ್ ಫಾರೂಕಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Tue, 15 September 26

Follow Us
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ