AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಭಾರತ ತಂಡದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ

Team India: ಜನವರಿ 11 ರಿಂದ ಶುರುವಾಗಲಿರುವ ಈ ಸರಣಿಯ ಮೂಲಕ ಟೀಮ್ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ಗೆ ಮರಳುವ ಸಾಧ್ಯತೆಯಿದೆ. ಈ ಇಬ್ಬರು ಆಟಗಾರರು 2022 ರ ಬಳಿಕ ಭಾರತದ ಪರ ಯಾವುದೇ ಟಿ20 ಪಂದ್ಯಗಳನ್ನಾಡಿಲ್ಲ.

Team India: ಭಾರತ ತಂಡದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ
Team India
TV9 Web
| Edited By: |

Updated on: Jan 06, 2024 | 6:20 AM

Share

ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಮುಗಿದಿದೆ. 2 ಪಂದ್ಯಗಳ ಈ ಸರಣಿಯನ್ನು 1-1 ಅಂತರದಿಂದ ಸಮಗೊಳಿಸುವಲ್ಲಿ ಟೀಮ್ ಇಂಡಿಯಾ (Team India) ಯಶಸ್ವಿಯಾಗಿದೆ. ಇದೀಗ ಭಾರತ ತಂಡವು ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಸಜ್ಜಾಗಬೇಕಿದೆ. ಮೂರು ಪಂದ್ಯಗಳ ಈ ಸರಣಿಯು ಟಿ20 ವಿಶ್ವಕಪ್​ಗೂ ಮುನ್ನ ನಡೆಯುವ ಭಾರತದ ಕೊನೆಯ ಟಿ20 ಸರಣಿ ಎಂಬುದು ವಿಶೇಷ.

ಅಂದರೆ ಈ ಸರಣಿ ಬಳಿಕ ಟೀಮ್ ಇಂಡಿಯಾ ಯಾವುದೇ ಟಿ20 ಪಂದ್ಯಗಳನ್ನಾಡುತ್ತಿಲ್ಲ. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಈ ಸರಣಿಯ ಮೂಲಕ ಬಲಿಷ್ಠ ಬಳಗವನ್ನು ರೂಪಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

ದಿಗ್ಗಜರ ಕಂಬ್ಯಾಕ್:

ಜನವರಿ 11 ರಿಂದ ಶುರುವಾಗಲಿರುವ ಈ ಸರಣಿಯ ಮೂಲಕ ಟೀಮ್ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ಗೆ ಮರಳುವ ಸಾಧ್ಯತೆಯಿದೆ. ಈ ಇಬ್ಬರು ಆಟಗಾರರು 2022 ರ ಬಳಿಕ ಭಾರತದ ಪರ ಯಾವುದೇ ಟಿ20 ಪಂದ್ಯಗಳನ್ನಾಡಿಲ್ಲ.

ಇದೀಗ ಟಿ20 ವಿಶ್ವಕಪ್​ಗಾಗಿ ಇಬ್ಬರು ಆಟಗಾರರು ಮತ್ತೆ ಚುಟುಕು ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಹಾಗೆಯೇ ಕಳೆದ ಒಂದು ವರ್ಷದಿಂದ ಟಿ20 ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಫಿಟ್​ನೆಸ್ ಸಮಸ್ಯೆಯ ಕಾರಣ ಈ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇನ್ನು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ವೇಳೆ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್ ಅಫ್ಘಾನ್ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದಾರೆ.

ಭಾರತ-ಅಫ್ಘಾನಿಸ್ತಾನ್ ಟಿ20 ಸರಣಿ ವೇಳಾಪಟ್ಟಿ:

ಜನವರಿ 11: ಮೊದಲ ಟಿ20 ಪಂದ್ಯ (ಮೊಹಾಲಿ) ಜನವರಿ 14: ಎರಡನೇ ಟಿ20 ಪಂದ್ಯ (ಇಂದೋರ್) ಜನವರಿ 17: ಮೂರನೇ ಟಿ20 ಪಂದ್ಯ (ಬೆಂಗಳೂರು)

ಇದನ್ನೂ ಓದಿ: IPL 2024: RCB ತಂಡದ ನಾಯಕತ್ವದಲ್ಲಿ ಮತ್ತೆ ಬದಲಾವಣೆ..?

ಭಾರತ ಸಂಭಾವ್ಯ ಟಿ20 ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಂಕು ಸಿಂಗ್, ಕೆಎಲ್ ರಾಹುಲ್, ಜಿತೇಶ್ ಶರ್ಮಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ದೀಪಕ್ ಚಹರ್.

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ