AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ: ಉಭಯ ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ

India vs Australia, 1st Semi-Final: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 151 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 57 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿವೆ. ಇದೀಗ ಉಭಯ ತಂಡಗಳು ದುಬೈ ಸ್ಟೇಡಿಯಂನಲ್ಲಿ ಕಣಕ್ಕಿಳಿದಿವೆ.

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ: ಉಭಯ ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ
Ind Vs Aus
ಝಾಹಿರ್ ಯೂಸುಫ್
|

Updated on:Mar 04, 2025 | 2:21 PM

Share

ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಅಂದರೆ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿದ ಆಡುವ ಬಳಗವನ್ನೇ ಈ ಮ್ಯಾಚ್​ನಲ್ಲೂ ಮುಂದುವರೆಸಲಾಗಿದೆ.

ಅತ್ತ ಆಸ್ಟ್ರೇಲಿಯಾ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಮ್ಯಾಥ್ಯೂ ಶಾರ್ಟ್ ಬದಲಿಗೆ ಈ ಬಾರಿ ಆರಂಭಿಕನಾಗಿ ಕೂಪರ್ ಕೊನೊಲಿಯನ್ನು  ಕಣಕ್ಕಿಳಿಸಿದ್ದಾರೆ. ಅಲ್ಲದೆ ಸ್ಪೆನ್ಸರ್ ಜಾನ್ಸನ್ ಬದಲಿಗೆ ಸ್ಪಿನ್ನರ್ ತನ್ವೀರ್ ಸಂಘ ಅವರಿಗೆ ಚಾನ್ಸ್ ನೀಡಲಾಗಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಕೂಪರ್ ಕೊನೊಲಿ, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ಡ್ವಾರ್ಷಿಯಸ್, ನಾಥನ್ ಎಲ್ಲಿಸ್, ಆ್ಯಡಂ ಝಂಪಾ, ತನ್ವೀರ್ ಸಂಘ.

ಉಭಯ ತಂಡಗಳ ಮುಖಾಮುಖಿ:

ಏಕದಿನ ಕ್ರಿಕೆಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಒಟ್ಟು 151 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 57 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿವೆ. ಈ ಅಂಕಿ ಅಂಶಗಳ ಪ್ರಕಾರ ಆಸ್ಟ್ರೇಲಿಯಾ ತಂಡವೇ ಮೇಲುಗೈ ಹೊಂದಿದೆ.

ಆದರೆ ಈ ಬಾರಿ ಆಸ್ಟ್ರೇಲಿಯಾ ತಂಡದಲ್ಲಿ ಪ್ರಮುಖ ಆಟಗಾರರಾದ ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಝಲ್​ವುಡ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್​, ಮ್ಯಾಥ್ಯೂ ಶಾರ್ಟ್ ಹಾಗೂ ಮಿಚೆಲ್ ಮಾರ್ಷ್ ಇಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಬಲಿಷ್ಠತೆಯ ವಿಷಯದಲ್ಲಿ ಆಸೀಸ್ ಪಡೆಗಿಂತ ಟೀಮ್ ಇಂಡಿಯಾ ಮುಂದಿದೆ. ಹಾಗಾಗಿ ದುಬೈ ಪಿಚ್​ನಲ್ಲಿ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ, ಬೆನ್ ಡ್ವಾರ್ಷಿಯಸ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಕೂಪರ್ ಕೊನೊಲಿ, ಆ್ಯಡಂ ಝಂಪಾ.

ಇದನ್ನೂ ಓದಿ: IPL 2025: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್?

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

Published On - 2:06 pm, Tue, 4 March 25

Follow Us
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ