AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia: ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್: ಮೊದಲ ಪಂದ್ಯಕ್ಕೆ ಸ್ಟಾರ್ ಆಟಗಾರ ಅಲಭ್ಯ

India vs Australia 1st Test: ತಂಡದಲ್ಲಿರುವ ಮತ್ತೋರ್ವ ಆಟಗಾರ ಕ್ಯಾಮರೋನ್ ಗ್ರೀನ್ ಕೂಡ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಆಸ್ಟ್ರೇಲಿಯಾ ಮುಂದಿರುವ ಆಯ್ಕೆ ಸ್ಕಾಟ್ ಬೌಲ್ಯಾಂಡ್‌.

India vs Australia: ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್: ಮೊದಲ ಪಂದ್ಯಕ್ಕೆ ಸ್ಟಾರ್ ಆಟಗಾರ ಅಲಭ್ಯ
Australia Test Team
TV9 Web
| Edited By: |

Updated on: Feb 05, 2023 | 7:54 PM

Share

India vs Australia: ಫೆಬ್ರವರಿ 9 ರಿಂದ ಟೀಮ್ ಇಂಡಿಯಾ ವಿರುದ್ಧ ಶುರುವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಕಳೆದ ತಿಂಗಳು ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಹ್ಯಾಝಲ್​ವುಡ್​ ಅವರ ಎಡಗಾಲಿಗೆ ಗಾಯವಾಗಿತ್ತು. ಈ ಗಾಯವು ಇನ್ನೂ ಕೂಡ ಸಂಪೂರ್ಣವಾಗಿ ಗುಣವಾಗಿರದ ಕಾರಣ ನಾಗಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ತಂಡ ಅಭ್ಯಾಸ ಶಿಬಿರದಲ್ಲೂ ಜೋಶ್ ಹ್ಯಾಝಲ್​ವುಡ್ ಸಂಪೂರ್ಣವಾಗಿ ತೊಡಗಿಸಿಕೊಂಡಿರಲಿಲ್ಲ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರ ಕಾರಣ ವಿಶ್ರಾಂತಿ ಪಡೆದಿದ್ದರು. ಸದ್ಯ ಫಿಟ್​ನೆಸ್ ಸಮಸ್ಯೆಯಲ್ಲಿರುವ ಹ್ಯಾಝಲ್​ವುಡ್​ನನ್ನು ಮೊದಲ ಪಂದ್ಯದಲ್ಲಿ ಕಣಕ್ಕಿಳಿಸದಿರಲು ಆಸ್ಟ್ರೇಲಿಯಾ ತಂಡದ ಆಡಳಿತ ಮಂಡಳಿ ನಿರ್ಧರಿಸಿದೆ.

ಬದಲಿ ಆಟಗಾರ ಯಾರು?

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಜೋಶ್ ಹ್ಯಾಝಲ್​ವುಡ್ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ. ಅವರು ತಂಡದಿಂದ ಹೊರಗುಳಿದರೆ ಮತ್ತೋರ್ವ ಬೌಲರ್​ನನ್ನು ಕಣಕ್ಕಿಳಿಸಬೇಕಾಗುತ್ತದೆ. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ಏಕೆಂದರೆ ತಂಡದಲ್ಲಿರುವ ಮತ್ತೋರ್ವ ಆಟಗಾರ ಕ್ಯಾಮರೋನ್ ಗ್ರೀನ್ ಕೂಡ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಆಸ್ಟ್ರೇಲಿಯಾ ಮುಂದಿರುವ ಆಯ್ಕೆ ಸ್ಕಾಟ್ ಬೌಲ್ಯಾಂಡ್‌. ಆದರೆ ಬೌಲ್ಯಂಡ್ ಇದುವರೆಗೆ ವಿದೇಶದಲ್ಲಿ ಟೆಸ್ಟ್ ಪಂದ್ಯವನ್ನು ಆಡಿಲ್ಲ. ಇನ್ನು ಆಡಿರುವುದು ಕೇವಲ 6 ಟೆಸ್ಟ್​ ಪಂದ್ಯಗಳನ್ನು ಮಾತ್ರ. ಅಂದರೆ ಅನಾನುಭವಿ ಬೌಲರ್​ನನ್ನು ಕಣಕ್ಕಿಳಿಸಬೇಕಾದ ಅನಿವಾರ್ಯತೆ ಇದೀಗ ಆಸ್ಟ್ರೇಲಿಯಾ ತಂಡದ ಮುಂದಿದೆ.

ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.

ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ:

ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
  2. ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
  3. ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
  4. ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ