AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ: ಹಿಟ್​ಮ್ಯಾನ್ ಮುಡಿಗೆ ವಿಶೇಷ ದಾಖಲೆ

IND vs AUS 2nd T20I: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ದ್ವಿತೀಯ ಟಿ20 ಕದನ ರಣ ರೋಚಕವಾಗಿತ್ತು. ನಾಯಕನ ಆಟವಾಡಿದ ರೋಹಿತ್ ಶರ್ಮಾ ಕೊನೆಯವರೆಗೂ ನಿಂತು ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಇದರ ಜೊತೆಗೆ ಟಿ20 ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.

Rohit Sharma: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ: ಹಿಟ್​ಮ್ಯಾನ್ ಮುಡಿಗೆ ವಿಶೇಷ ದಾಖಲೆ
Rohit Sharma IND vs AUS 2nd T20I
TV9 Web
| Edited By: |

Updated on:Sep 24, 2022 | 8:32 AM

Share

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ದ್ವಿತೀಯ ಟಿ20 ಕದನ ರಣ ರೋಚಕವಾಗಿತ್ತು. ಮೈದಾನ ಒದ್ದೆಯಿದ್ದ ಪರಿಣಾಮ ತಡವಾಗಿ ಪ್ರಾರಂಭಗೊಂಡ ಪಂದ್ಯವನ್ನು 8 ಓವರ್​ಗೆ ಸೀಮಿತಗೊಳಿಸಲಾಯಿತು. ಇದರಲ್ಲಿ ಭಾರತ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ 1-1 ಅಂತರದಿಂದ ಸರಣಿ ಸಮಬಲ ಸಾಧಿಸಿದೆ. 91 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ (Team India) ಸ್ಫೋಟಕ ಬ್ಯಾಟಿಂಗ್ ನಡೆಸಿತು. ಅದರಲ್ಲೂ ನಾಯಕನ ಆಟವಾಡಿದ ರೋಹಿತ್ ಶರ್ಮಾ (Rohit Sharma) ಕೊನೆಯವರೆಗೂ ನಿಂತು ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಇದರ ಜೊತೆಗೆ ಟಿ20 ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.

ಕೇವಲ 20 ಎಸೆತಗಳಲ್ಲಿ 4 ಫೋರ್, 4 ಸಿಕ್ಸರ್ ಸಿಡಿಸಿದ ರೋಹಿತ್ ಅಜೇಯ 46 ರನ್ ಚಚ್ಚಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ನ್ಯೂಜಿಲೆಂಡ್‌ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಅವರ ವಿಶ್ವ ದಾಖಲೆಯನ್ನು ಪುಡಿ ಮಾಡಿದ್ದಾರೆ. ಟಿ20 ಅಂತರರಾಷ್ಟ್ರೀಯ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಪಟ್ಟಿಯಲ್ಲಿ ರೋಹಿತ್ ಹಾಗೂ ಗಪ್ಟಿಲ್ ಜಂಟಿ ಸ್ಥಾನ ಹಂಚಿಕೊಂಡಿದ್ದರು. ಇದೀಗ ರೋಹಿತ್ 176 ಸಿಕ್ಸರ್​ಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದರು.

ಸದ್ಯ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿದ ಪಟ್ಟಿಯಲ್ಲಿ ರೋಹಿತ್ ಮೊದಲಿಗರಾಗಿದ್ದಾರೆ. ಎರಡನೇ ಸ್ಥಾನದಲ್ಲಿ 172 ಸಿಕ್ಸರ್​ನೊಂದಿಗೆ ಮಾರ್ಟಿನ್ ಗಪ್ಟಿಲ್ ಅವರಿದ್ದಾರೆ. ಕ್ರಿಸ್ ಗೇಲ್ 79 ಪಂದ್ಯಗಳಲ್ಲಿ 124 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇತ್ತೀಚೆಗಷ್ಟೇ ನಿವೃತ್ತರಾದ ಇಂಗ್ಲೆಂಡ್‌ನ ಮಾಜಿ ನಾಯಕ ಇಯಾನ್ ಮಾರ್ಗನ್ (120 ಸಿಕ್ಸರ್) ಮತ್ತು ಆಸ್ಟ್ರೇಲಿಯದ ಟಿ20 ತಂಡದ ನಾಯಕ ಆ್ಯರನ್ ಫಿಂಚ್ (117) ಕೂಡ ಈ ಪಟ್ಟಿಯಲ್ಲಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ
Image
IND vs AUS: ರೋಹಿತ್ ಸಿಡಿಲಬ್ಬರದ ಬ್ಯಾಟಿಂಗ್‌; ನಿರ್ಣಾಯಕ ಪಂದ್ಯದಲ್ಲಿ ಆಸೀಸ್ ಮಣಿಸಿದ ಭಾರತ..!
Image
Ind vs Aus Playing XI: 48 ಎಸೆತಗಳ ಪಂದ್ಯ.. ಟಾಸ್ ಗೆದ್ದ ಭಾರತ; ಉಭಯ ತಂಡಗಳ ಪ್ಲೇಯಿಂಗ್ XI
Image
ಪಾಕ್ ಎದುರು ಸೋತು ಯಾವ ತಂಡವೂ ಮಾಡದ ಮುಜುಗರದ ದಾಖಲೆಗೆ ಸಾಕ್ಷಿಯಾದ ಇಂಗ್ಲೆಂಡ್
Image
India vs Australia, 2nd T20I Highlights: ರಣ ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ

ನಾಗ್ಪುರದಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 8 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 90 ರನ್‌ ಗಳಿಸಿತು. ತಂಡದ ಪರ ನಾಯಕ ಆರೋನ್‌ ಫಿಂಚ್‌ 15 ಎಸೆತಗಳಲ್ಲಿ 31 ರನ್‌ ಸಿಡಿಸಿದರೆ, ಮ್ಯಾಥ್ಯೂ ವೇಡ್‌ ಕೇವಲ 20 ಎಸೆತಗಳಲ್ಲಿ ಅಜೇಯ 43 ರನ್‌ ಚಚ್ಚಿದರು. ಭಾರತ ಅಕ್ಷರ್‌ ಪಟೇಲ್‌ ಎರಡು ಓವರ್‌ಗಳಿಗೆ ಕೇವಲ 13 ರನ್‌ ನೀಡಿ ಎರಡು ವಿಕೆಟ್‌ಗಳನ್ನು ಕಿತ್ತರು.

91 ರನ್​ಗಳ ಕಠಿಣ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭಿಕರಾದ ರೋಹಿತ್‌ ಶರ್ಮಾ ಹಾಗೂ ಕೆಎಲ್‌ ರಾಹುಲ್‌ 2.5 ಓವರ್‌ಗಳಿಗೆ 39 ರನ್ ಸಿಡಿಸುವ ಮೂಲಕ ಭರ್ಜರಿ ಆರಂಭ ತಂದುಕೊಟ್ಟರು. ಕೆ.ಎಲ್ ರಾಹುಲ್‌(10), ವಿರಾಟ್‌ ಕೊಹ್ಲಿ(11) ಹಾಗೂ ಸೂರ್ಯಕುಮಾರ್‌ ಯಾದವ್‌(0) ಅವರನ್ನು ಆಡಂ ಝಾಂಪ ಅವರು ಔಟ್‌ ಮಾಡಿದರು. ಒಂದು ತುದಿಯಲ್ಲಿ ಆರಂಭದಿಂದಲೂ ಸ್ಪೋಟಕ ಬ್ಯಾಟ್‌ ಮಾಡಿದ ನಾಯಕ ರೋಹಿತ್‌ ಶರ್ಮಾ, ಆಸೀಸ್‌ ಬೌಲರ್‌ಗಳಿಗೆ ಬೆವರಿಳಿಸಿದರು. ಕೊನೆಯ ಓವರ್‌ನಲ್ಲಿ 9 ರನ್‌ ಅಗತ್ಯವಿದ್ದ ವೇಳೆ ಮೊದಲ ಎರಡು ಎಸೆತಗಳಲ್ಲಿ ದಿನೇಶ್‌ ಕಾರ್ತಿಕ್ ಸಿಕ್ಸರ್‌ ಹಾಗೂ ಬೌಂಡರಿ ಸಿಡಿಸುವ ಮೂಲಕ ರೋಚಕ ಗೆಲುವು ತಂದುಕೊಟ್ಟರು.

Published On - 8:32 am, Sat, 24 September 22

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ