AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಿರುವನಂತಪುರಂನಲ್ಲಿ ಭಾರತದ ದಾಖಲೆ ಹೇಗಿದೆ? ಪಿಚ್ ಯಾರಿಗೆ ಹೆಚ್ಚು ಸಹಕಾರಿ?

India vs Australia, 2nd T20I, Greenfield Stadium Pitch Report: ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಉತ್ತಮ ದಾಖಲೆ ಹೊಂದಿದೆ. ಟೀಂ ಇಂಡಿಯಾ ಇಲ್ಲಿಯವರೆಗೆ ಈ ಮೈದಾನದಲ್ಲಿ ಒಟ್ಟು 3 ಟಿ20 ಪಂದ್ಯಗಳನ್ನು ಆಡಿದೆ. ಇದೀಗ ನಾಲ್ಕನೇ ಪಂದ್ಯಕ್ಕೆ ಭಾನುವಾರ ಮೈದಾನಕ್ಕಿಳಿಯಲಿದ್ದಾರೆ.

IND vs AUS: ತಿರುವನಂತಪುರಂನಲ್ಲಿ ಭಾರತದ ದಾಖಲೆ ಹೇಗಿದೆ? ಪಿಚ್ ಯಾರಿಗೆ ಹೆಚ್ಚು ಸಹಕಾರಿ?
ತಿರುವನಂತಪುರ ಪಿಚ್ ವರದಿ
ಪೃಥ್ವಿಶಂಕರ
|

Updated on: Nov 25, 2023 | 3:11 PM

Share

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಇನ್ನು ಪಂದ್ಯಕ್ಕೂ ಮುನ್ನ ತಿರುವನಂತಪುರಂನಲ್ಲಿ (Thiruvananthapuram) ಭಾರತದ ದಾಖಲೆ ಹೇಗಿದೆ ಎಂಬುದನ್ನು ನೋಡುವುದಾದರೆ.. ಇಲ್ಲಿನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India) ಉತ್ತಮ ದಾಖಲೆ ಹೊಂದಿದೆ. ಟೀಂ ಇಂಡಿಯಾ ಇಲ್ಲಿಯವರೆಗೆ ಈ ಮೈದಾನದಲ್ಲಿ ಒಟ್ಟು 3 ಟಿ20 ಪಂದ್ಯಗಳನ್ನು ಆಡಿದೆ. ಇದೀಗ ನಾಲ್ಕನೇ ಪಂದ್ಯಕ್ಕೆ ಭಾನುವಾರ ಮೈದಾನಕ್ಕಿಳಿಯಲಿದ್ದಾರೆ.

ಒಟ್ಟು 3 ಪಂದ್ಯಗಳನ್ನು ಆಡಿದೆ

ತಿರುವನಂತಪುರದಲ್ಲಿ ಭಾರತ ಇದುವರೆಗೆ ಒಟ್ಟು 3 ಪಂದ್ಯಗಳನ್ನು ಆಡಿದೆ. ಇದರಲ್ಲಿ 2 ಪಂದ್ಯ ಗೆದ್ದಿರುವ ಭಾರತ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಭಾರತ ತನ್ನ ಮೊದಲ ಟಿ20 ಪಂದ್ಯವನ್ನು 2017ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಇದೇ ಮೈದಾನದಲ್ಲಿ ಆಡಿತ್ತು. ಆ ಪಂದ್ಯದಲ್ಲಿ 6 ರನ್‌ಗಳಿಂದ ಜಯ ಸಾಧಿಸಿತು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಸೋಲನುಭವಿಸಬೇಕಾಯಿತು. ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಇಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳ ಜಯ ಸಾಧಿಸಿದೆ.

IND vs AUS: ಭಾರತ- ಆಸೀಸ್ 2ನೇ ಟಿ20 ಪಂದ್ಯ ಯಾವಾಗ, ಎಲ್ಲಿ ನಡೆಯಲ್ಲಿದೆ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಸೂರ್ಯ- ದುಬೆ ಅರ್ಧಶತಕ

ಈ ಮೈದಾನದಲ್ಲಿ ಭಾರತದ ಪರ ಶಿವಂ ದುಬೆ ಅರ್ಧಶತಕ ಸಿಡಿಸಿರುವುದು ಪ್ರಮುಖ ಸಂಗತಿ. ಸೂರ್ಯಕುಮಾರ್ ಯಾದವ್ ಕೂಡ ಇಲ್ಲಿ ಅರ್ಧಶತಕ ಬಾರಿಸಿದ್ದಾರೆ. ಸೂರ್ಯ 33 ಎಸೆತಗಳಲ್ಲಿ 50 ರನ್ ಬಾರಿಸಿದ್ದರೆ, ಶಿವಂ ದುಬೆ 30 ಎಸೆತಗಳಲ್ಲಿ 54 ರನ್ ಸಿಡಿಸಿದ್ದರು. ಈ ಇಬ್ಬರನ್ನು ಹೊರತುಪಡಿಸಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಕೂಡ ಇಲ್ಲಿ ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೀಂ ಇಂಡಿಯಾ ಪರ ಸೂರ್ಯ ಮತ್ತೊಮ್ಮೆ ಈ ಮೈದಾನದಲ್ಲಿ ತಮ್ಮ ಶಕ್ತಿ ಪ್ರದರ್ಶಿಸಲಿದ್ದಾರೆ.

ಪಿಚ್ ಯಾರಿಗೆ ಸಹಕಾರಿ?

ಈ ಕ್ರೀಡಾಂಗಣದ ಪಿಚ್​ನಲ್ಲಿ ಬೌಲರ್ ಮತ್ತು ಬ್ಯಾಟ್ಸ್‌ಮನ್ ಇಬ್ಬರೂ ಸಮಾನ ಸಹಾಯವನ್ನು ಪಡೆಯುತ್ತಾರೆ. ವೇಗದ ಬೌಲರ್ ಇಲ್ಲಿ ಉತ್ತಮ ಸ್ವಿಂಗ್ ಪಡೆದರೆ, ಮಧ್ಯಮ ಓವರ್‌ಗಳಲ್ಲಿ ಸ್ಪಿನ್ ಬೌಲರ್‌ಗಳು ಸಹ ಉತ್ತಮ ಸಹಾಯವನ್ನು ಪಡೆಯುತ್ತಾರೆ. ಹಾಗೆಯೇ ಪಿಚ್ ಅತ್ಯಂತ ಸಮತೋಲಿತ ಆಗಿರುವುದರಿಂದ ಬ್ಯಾಟ್​ಗೂ ಬಾಲ್ ಚೆನ್ನಾಗಿ ಬರುತ್ತದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂದು ಹೇಳುವುದು ಕಷ್ಟ. ಈ ಮೈದಾನದಲ್ಲಿ ಇದುವರೆಗೆ 3 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಒಂದು ಪಂದ್ಯವನ್ನು ಗೆದ್ದಿದ್ದರೆ, ಮೊದಲು ಬೌಲಿಂಗ್ ಮಾಡಿದ ತಂಡ 2 ಪಂದ್ಯಗಳನ್ನು ಗೆದ್ದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್