AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಿರುವನಂತಪುರಂನಲ್ಲಿ ಭಾರತದ ದಾಖಲೆ ಹೇಗಿದೆ? ಪಿಚ್ ಯಾರಿಗೆ ಹೆಚ್ಚು ಸಹಕಾರಿ?

India vs Australia, 2nd T20I, Greenfield Stadium Pitch Report: ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಉತ್ತಮ ದಾಖಲೆ ಹೊಂದಿದೆ. ಟೀಂ ಇಂಡಿಯಾ ಇಲ್ಲಿಯವರೆಗೆ ಈ ಮೈದಾನದಲ್ಲಿ ಒಟ್ಟು 3 ಟಿ20 ಪಂದ್ಯಗಳನ್ನು ಆಡಿದೆ. ಇದೀಗ ನಾಲ್ಕನೇ ಪಂದ್ಯಕ್ಕೆ ಭಾನುವಾರ ಮೈದಾನಕ್ಕಿಳಿಯಲಿದ್ದಾರೆ.

IND vs AUS: ತಿರುವನಂತಪುರಂನಲ್ಲಿ ಭಾರತದ ದಾಖಲೆ ಹೇಗಿದೆ? ಪಿಚ್ ಯಾರಿಗೆ ಹೆಚ್ಚು ಸಹಕಾರಿ?
ತಿರುವನಂತಪುರ ಪಿಚ್ ವರದಿ
ಪೃಥ್ವಿಶಂಕರ
|

Updated on: Nov 25, 2023 | 3:11 PM

Share

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಇನ್ನು ಪಂದ್ಯಕ್ಕೂ ಮುನ್ನ ತಿರುವನಂತಪುರಂನಲ್ಲಿ (Thiruvananthapuram) ಭಾರತದ ದಾಖಲೆ ಹೇಗಿದೆ ಎಂಬುದನ್ನು ನೋಡುವುದಾದರೆ.. ಇಲ್ಲಿನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India) ಉತ್ತಮ ದಾಖಲೆ ಹೊಂದಿದೆ. ಟೀಂ ಇಂಡಿಯಾ ಇಲ್ಲಿಯವರೆಗೆ ಈ ಮೈದಾನದಲ್ಲಿ ಒಟ್ಟು 3 ಟಿ20 ಪಂದ್ಯಗಳನ್ನು ಆಡಿದೆ. ಇದೀಗ ನಾಲ್ಕನೇ ಪಂದ್ಯಕ್ಕೆ ಭಾನುವಾರ ಮೈದಾನಕ್ಕಿಳಿಯಲಿದ್ದಾರೆ.

ಒಟ್ಟು 3 ಪಂದ್ಯಗಳನ್ನು ಆಡಿದೆ

ತಿರುವನಂತಪುರದಲ್ಲಿ ಭಾರತ ಇದುವರೆಗೆ ಒಟ್ಟು 3 ಪಂದ್ಯಗಳನ್ನು ಆಡಿದೆ. ಇದರಲ್ಲಿ 2 ಪಂದ್ಯ ಗೆದ್ದಿರುವ ಭಾರತ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಭಾರತ ತನ್ನ ಮೊದಲ ಟಿ20 ಪಂದ್ಯವನ್ನು 2017ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಇದೇ ಮೈದಾನದಲ್ಲಿ ಆಡಿತ್ತು. ಆ ಪಂದ್ಯದಲ್ಲಿ 6 ರನ್‌ಗಳಿಂದ ಜಯ ಸಾಧಿಸಿತು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಸೋಲನುಭವಿಸಬೇಕಾಯಿತು. ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಇಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳ ಜಯ ಸಾಧಿಸಿದೆ.

IND vs AUS: ಭಾರತ- ಆಸೀಸ್ 2ನೇ ಟಿ20 ಪಂದ್ಯ ಯಾವಾಗ, ಎಲ್ಲಿ ನಡೆಯಲ್ಲಿದೆ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಸೂರ್ಯ- ದುಬೆ ಅರ್ಧಶತಕ

ಈ ಮೈದಾನದಲ್ಲಿ ಭಾರತದ ಪರ ಶಿವಂ ದುಬೆ ಅರ್ಧಶತಕ ಸಿಡಿಸಿರುವುದು ಪ್ರಮುಖ ಸಂಗತಿ. ಸೂರ್ಯಕುಮಾರ್ ಯಾದವ್ ಕೂಡ ಇಲ್ಲಿ ಅರ್ಧಶತಕ ಬಾರಿಸಿದ್ದಾರೆ. ಸೂರ್ಯ 33 ಎಸೆತಗಳಲ್ಲಿ 50 ರನ್ ಬಾರಿಸಿದ್ದರೆ, ಶಿವಂ ದುಬೆ 30 ಎಸೆತಗಳಲ್ಲಿ 54 ರನ್ ಸಿಡಿಸಿದ್ದರು. ಈ ಇಬ್ಬರನ್ನು ಹೊರತುಪಡಿಸಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಕೂಡ ಇಲ್ಲಿ ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೀಂ ಇಂಡಿಯಾ ಪರ ಸೂರ್ಯ ಮತ್ತೊಮ್ಮೆ ಈ ಮೈದಾನದಲ್ಲಿ ತಮ್ಮ ಶಕ್ತಿ ಪ್ರದರ್ಶಿಸಲಿದ್ದಾರೆ.

ಪಿಚ್ ಯಾರಿಗೆ ಸಹಕಾರಿ?

ಈ ಕ್ರೀಡಾಂಗಣದ ಪಿಚ್​ನಲ್ಲಿ ಬೌಲರ್ ಮತ್ತು ಬ್ಯಾಟ್ಸ್‌ಮನ್ ಇಬ್ಬರೂ ಸಮಾನ ಸಹಾಯವನ್ನು ಪಡೆಯುತ್ತಾರೆ. ವೇಗದ ಬೌಲರ್ ಇಲ್ಲಿ ಉತ್ತಮ ಸ್ವಿಂಗ್ ಪಡೆದರೆ, ಮಧ್ಯಮ ಓವರ್‌ಗಳಲ್ಲಿ ಸ್ಪಿನ್ ಬೌಲರ್‌ಗಳು ಸಹ ಉತ್ತಮ ಸಹಾಯವನ್ನು ಪಡೆಯುತ್ತಾರೆ. ಹಾಗೆಯೇ ಪಿಚ್ ಅತ್ಯಂತ ಸಮತೋಲಿತ ಆಗಿರುವುದರಿಂದ ಬ್ಯಾಟ್​ಗೂ ಬಾಲ್ ಚೆನ್ನಾಗಿ ಬರುತ್ತದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂದು ಹೇಳುವುದು ಕಷ್ಟ. ಈ ಮೈದಾನದಲ್ಲಿ ಇದುವರೆಗೆ 3 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಒಂದು ಪಂದ್ಯವನ್ನು ಗೆದ್ದಿದ್ದರೆ, ಮೊದಲು ಬೌಲಿಂಗ್ ಮಾಡಿದ ತಂಡ 2 ಪಂದ್ಯಗಳನ್ನು ಗೆದ್ದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ