AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಮೂರನೇ ಪಂದ್ಯ ಸೋತರೂ ಸರಣಿ ಗೆದ್ದ ಟೀಮ್ ಇಂಡಿಯಾ

India vs Australia: ಅಂತಿಮ ಏಕದಿನ ಪಂದ್ಯದಲ್ಲಿ ಸೋತರೂ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದುಕೊಂಡಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 99 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ.

IND vs AUS: ಮೂರನೇ ಪಂದ್ಯ ಸೋತರೂ ಸರಣಿ ಗೆದ್ದ ಟೀಮ್ ಇಂಡಿಯಾ
India vs Australia
TV9 Web
| Edited By: |

Updated on: Sep 27, 2023 | 9:38 PM

Share

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಡೇವಿಡ್ ವಾರ್ನರ್ (56) ಹಾಗೂ ಮಿಚೆಲ್ ಮಾರ್ಷ್ (96) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಇತ್ತ ವಿಕೆಟ್ ಪಡೆಯಲು ಪರದಾಡಿದ ಟೀಮ್ ಇಂಡಿಯಾ ಬೌಲರ್​ಗಳು ದುಬಾರಿಯಾದರು. ಪರಿಣಾಮ 25 ಓವರ್​ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಮೊತ್ತವು 200ರ ಗಡಿದಾಟಿತು. ಆದರೆ 25 ಓವರ್​ಗಳ ಬಳಿಕ ಕಂಬ್ಯಾಕ್ ಮಾಡಿದ ಭಾರತೀಯ ಬೌಲರ್​ಗಳು ಬ್ಯಾಕ್ ಟು ಬ್ಯಾಕ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಸ್ಟೀವ್ ಸ್ಮಿತ್ (74) ರನ್ನು ಸಿರಾಜ್ ಔಟ್ ಮಾಡಿದರೆ, ಆ ಬಳಿಕ ಬಂದ ಅಲೆಕ್ಸ್ ಕ್ಯಾರಿ (11)ಗೆ ಬುಮ್ರಾ ಪೆವಿಲಿಯನ್ ಹಾದಿ ತೋರಿಸಿದರು.

ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ (5) ಹಾಗೂ ಕ್ಯಾಮರೋಗ್ ಗ್ರೀನ್ (9) ಬಂದ ವೇಗದಲ್ಲೇ ಹಿಂತಿರುಗಿದ್ದರು. ಈ ವೇಳೆ ಕ್ರೀಸ್ ಕಚ್ಚಿ ನಿಂತು ಇನಿಂಗ್ಸ್ ಕಟ್ಟಿದ ಮಾರ್ನಸ್ ಲಾಬುಶೇನ್ 72 ರನ್ ಬಾರಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು 7 ವಿಕೆಟ್ ನಷ್ಟಕ್ಕೆ 352 ರನ್ ಕಲೆಹಾಕಿತು.

353 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 74 ರನ್​ಗಳ ಜೊತೆಯಾಟವಾಡಿ ಸುಂದರ್ (18) ಔಟಾದರು.

ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 70 ರನ್​ಗಳ ಪಾಲುದಾರಿಕೆ ಪ್ರದರ್ಶಿಸಿದರು. ಅತ್ತ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ರೋಹಿತ್ ಶರ್ಮಾ 57 ಎಸೆತಗಳಲ್ಲಿ 6 ಸಿಕ್ಸ್​ಗಳೊಂದಿಗೆ 81 ರನ್ ಬಾರಿಸಿ ಔಟಾದರು. ಇದರ ಬೆನ್ನಲ್ಲೇ 61 ಎಸೆತಗಳಲ್ಲಿ 1 ಸಿಕ್ಸ್​ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಕೂಡ ವಿಕೆಟ್ ಒಪ್ಪಿಸಿದರು. ಈ ಎರಡು ವಿಕೆಟ್ ಸಿಗುತ್ತಿದ್ದಂತೆ ಆಸ್ಟ್ರೇಲಿಯಾ ಬೌಲರ್​ಗಳು ಟೀಮ್ ಇಂಡಿಯಾ ರನ್ ಗತಿಯನ್ನು ನಿಯಂತ್ರಿಸಿದರು.

ಅಷ್ಟೇ ಅಲ್ಲದೆ 26 ರನ್ ಬಾರಿಸಿದ್ದ ಕೆಎಲ್ ರಾಹುಲ್​ರನ್ನು ಔಟ್ ಮಾಡಿದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ 8 ರನ್​ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ 48 ರನ್​ಗಳಿಸಿದ್ದ ವೇಳೆ ಮ್ಯಾಕ್ಸ್​ವೆಲ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಶ್ರೇಯಸ್ ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ ಕುಲ್ದೀಪ್ ಯಾದವ್ (2) ಕೂಡ ಔಟಾದರು.

ಅಂತಿಮ 8 ಓವರ್​ಗಳಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 96 ರನ್​ಗಳ ಅವಶ್ಯಕತೆಯಿತ್ತು. ಕ್ರೀಸ್​ನಲ್ಲಿ ರವೀಂದ್ರ ಜಡೇಜಾ ಹಾಗೂ ಜಸ್​ಪ್ರೀತ್ ಬುಮ್ರಾ ಬ್ಯಾಟ್ ಬೀಸುತ್ತಿದ್ದರು. ಆದರೆ ಈ ಜೋಡಿ ಮೊದಲ 3 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 12 ರನ್​ಗಳು ಮಾತ್ರ. ಪರಿಣಾಮ ಅಂತಿಮ 5 ಓವರ್​ಗಳಲ್ಲಿ 84 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಜಸ್​ಪ್ರೀತ್ ಬುಮ್ರಾ (5) ಕ್ಯಾಚ್ ನೀಡಿ ನಿರ್ಗಮಿಸಿದರು. ಇನ್ನು ರವೀಂದ್ರ ಜಡೇಜಾ 35 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಟೀಮ್ ಇಂಡಿಯಾ 49.4 ಓವರ್​ಗಳಲ್ಲಿ 286 ರನ್​ಗಳಿಗೆ ಆಲೌಟ್ ಆಗುವ ಮೂಲಕ 66 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಸರಣಿ ಗೆದ್ದ ಟೀಮ್ ಇಂಡಿಯಾ:

ಅಂತಿಮ ಏಕದಿನ ಪಂದ್ಯದಲ್ಲಿ ಸೋತರೂ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದುಕೊಂಡಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 99 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಈ ಸೋಲಿನ ಹೊರತಾಗಿಯೂ ಟೀಮ್ ಇಂಡಿಯಾ 2-1 ಅಂತರದಿಂದ  ಸರಣಿಯನ್ನು ವಶಪಡಿಸಿಕೊಂಡಿದೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ:  ಏಕದಿನ ವಿಶ್ವಕಪ್​ಗೆ 10 ತಂಡಗಳು ಪ್ರಕಟ

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ತನ್ವೀರ್ ಸಂಘ, ಜೋಶ್ ಹ್ಯಾಝಲ್‌ವುಡ್.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ