AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಮೂರನೇ ಪಂದ್ಯ ಸೋತರೂ ಸರಣಿ ಗೆದ್ದ ಟೀಮ್ ಇಂಡಿಯಾ

India vs Australia: ಅಂತಿಮ ಏಕದಿನ ಪಂದ್ಯದಲ್ಲಿ ಸೋತರೂ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದುಕೊಂಡಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 99 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ.

IND vs AUS: ಮೂರನೇ ಪಂದ್ಯ ಸೋತರೂ ಸರಣಿ ಗೆದ್ದ ಟೀಮ್ ಇಂಡಿಯಾ
India vs Australia
TV9 Web
| Edited By: |

Updated on: Sep 27, 2023 | 9:38 PM

Share

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಡೇವಿಡ್ ವಾರ್ನರ್ (56) ಹಾಗೂ ಮಿಚೆಲ್ ಮಾರ್ಷ್ (96) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಇತ್ತ ವಿಕೆಟ್ ಪಡೆಯಲು ಪರದಾಡಿದ ಟೀಮ್ ಇಂಡಿಯಾ ಬೌಲರ್​ಗಳು ದುಬಾರಿಯಾದರು. ಪರಿಣಾಮ 25 ಓವರ್​ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಮೊತ್ತವು 200ರ ಗಡಿದಾಟಿತು. ಆದರೆ 25 ಓವರ್​ಗಳ ಬಳಿಕ ಕಂಬ್ಯಾಕ್ ಮಾಡಿದ ಭಾರತೀಯ ಬೌಲರ್​ಗಳು ಬ್ಯಾಕ್ ಟು ಬ್ಯಾಕ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಸ್ಟೀವ್ ಸ್ಮಿತ್ (74) ರನ್ನು ಸಿರಾಜ್ ಔಟ್ ಮಾಡಿದರೆ, ಆ ಬಳಿಕ ಬಂದ ಅಲೆಕ್ಸ್ ಕ್ಯಾರಿ (11)ಗೆ ಬುಮ್ರಾ ಪೆವಿಲಿಯನ್ ಹಾದಿ ತೋರಿಸಿದರು.

ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ (5) ಹಾಗೂ ಕ್ಯಾಮರೋಗ್ ಗ್ರೀನ್ (9) ಬಂದ ವೇಗದಲ್ಲೇ ಹಿಂತಿರುಗಿದ್ದರು. ಈ ವೇಳೆ ಕ್ರೀಸ್ ಕಚ್ಚಿ ನಿಂತು ಇನಿಂಗ್ಸ್ ಕಟ್ಟಿದ ಮಾರ್ನಸ್ ಲಾಬುಶೇನ್ 72 ರನ್ ಬಾರಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು 7 ವಿಕೆಟ್ ನಷ್ಟಕ್ಕೆ 352 ರನ್ ಕಲೆಹಾಕಿತು.

353 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 74 ರನ್​ಗಳ ಜೊತೆಯಾಟವಾಡಿ ಸುಂದರ್ (18) ಔಟಾದರು.

ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 70 ರನ್​ಗಳ ಪಾಲುದಾರಿಕೆ ಪ್ರದರ್ಶಿಸಿದರು. ಅತ್ತ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ರೋಹಿತ್ ಶರ್ಮಾ 57 ಎಸೆತಗಳಲ್ಲಿ 6 ಸಿಕ್ಸ್​ಗಳೊಂದಿಗೆ 81 ರನ್ ಬಾರಿಸಿ ಔಟಾದರು. ಇದರ ಬೆನ್ನಲ್ಲೇ 61 ಎಸೆತಗಳಲ್ಲಿ 1 ಸಿಕ್ಸ್​ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಕೂಡ ವಿಕೆಟ್ ಒಪ್ಪಿಸಿದರು. ಈ ಎರಡು ವಿಕೆಟ್ ಸಿಗುತ್ತಿದ್ದಂತೆ ಆಸ್ಟ್ರೇಲಿಯಾ ಬೌಲರ್​ಗಳು ಟೀಮ್ ಇಂಡಿಯಾ ರನ್ ಗತಿಯನ್ನು ನಿಯಂತ್ರಿಸಿದರು.

ಅಷ್ಟೇ ಅಲ್ಲದೆ 26 ರನ್ ಬಾರಿಸಿದ್ದ ಕೆಎಲ್ ರಾಹುಲ್​ರನ್ನು ಔಟ್ ಮಾಡಿದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ 8 ರನ್​ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ 48 ರನ್​ಗಳಿಸಿದ್ದ ವೇಳೆ ಮ್ಯಾಕ್ಸ್​ವೆಲ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಶ್ರೇಯಸ್ ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ ಕುಲ್ದೀಪ್ ಯಾದವ್ (2) ಕೂಡ ಔಟಾದರು.

ಅಂತಿಮ 8 ಓವರ್​ಗಳಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 96 ರನ್​ಗಳ ಅವಶ್ಯಕತೆಯಿತ್ತು. ಕ್ರೀಸ್​ನಲ್ಲಿ ರವೀಂದ್ರ ಜಡೇಜಾ ಹಾಗೂ ಜಸ್​ಪ್ರೀತ್ ಬುಮ್ರಾ ಬ್ಯಾಟ್ ಬೀಸುತ್ತಿದ್ದರು. ಆದರೆ ಈ ಜೋಡಿ ಮೊದಲ 3 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 12 ರನ್​ಗಳು ಮಾತ್ರ. ಪರಿಣಾಮ ಅಂತಿಮ 5 ಓವರ್​ಗಳಲ್ಲಿ 84 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಜಸ್​ಪ್ರೀತ್ ಬುಮ್ರಾ (5) ಕ್ಯಾಚ್ ನೀಡಿ ನಿರ್ಗಮಿಸಿದರು. ಇನ್ನು ರವೀಂದ್ರ ಜಡೇಜಾ 35 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಟೀಮ್ ಇಂಡಿಯಾ 49.4 ಓವರ್​ಗಳಲ್ಲಿ 286 ರನ್​ಗಳಿಗೆ ಆಲೌಟ್ ಆಗುವ ಮೂಲಕ 66 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಸರಣಿ ಗೆದ್ದ ಟೀಮ್ ಇಂಡಿಯಾ:

ಅಂತಿಮ ಏಕದಿನ ಪಂದ್ಯದಲ್ಲಿ ಸೋತರೂ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದುಕೊಂಡಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 99 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಈ ಸೋಲಿನ ಹೊರತಾಗಿಯೂ ಟೀಮ್ ಇಂಡಿಯಾ 2-1 ಅಂತರದಿಂದ  ಸರಣಿಯನ್ನು ವಶಪಡಿಸಿಕೊಂಡಿದೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ:  ಏಕದಿನ ವಿಶ್ವಕಪ್​ಗೆ 10 ತಂಡಗಳು ಪ್ರಕಟ

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ತನ್ವೀರ್ ಸಂಘ, ಜೋಶ್ ಹ್ಯಾಝಲ್‌ವುಡ್.

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!