AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಭಾರತ-ಆಸ್ಟ್ರೇಲಿಯಾ ತೃತೀಯ ಏಕದಿನ: ಕುತೂಹಲ ಮೂಡಿಸಿದೆ ದಿಗ್ಗಜರ ಕಮ್​ಬ್ಯಾಕ್ ಪಂದ್ಯ

India vs Australia 3rd ODI: ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯ ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದು, ಗೆದ್ದು ಪ್ರತಿಷ್ಠೆ ಉಳಿಸಿಕೊಳ್ಳುವ ಪ್ಲಾನ್​ನಲ್ಲಿ ಭಾರತ ವಿದ್ದರೆ ಅತ್ತ ಕಾಂಗರೂ ಪಡೆ ಮಾನ ಉಳಿಸಿಕೊಳ್ಳಲು ಕೊನೇ ಪಂದ್ಯ ಗೆಲ್ಲುವ ಯೋಜನೆಯಲ್ಲಿದೆ.

ಇಂದು ಭಾರತ-ಆಸ್ಟ್ರೇಲಿಯಾ ತೃತೀಯ ಏಕದಿನ: ಕುತೂಹಲ ಮೂಡಿಸಿದೆ ದಿಗ್ಗಜರ ಕಮ್​ಬ್ಯಾಕ್ ಪಂದ್ಯ
IND vs AUS 3rd ODI
Vinay Bhat
|

Updated on: Sep 27, 2023 | 6:05 AM

Share

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಇಂದು ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಈಗಾಗಲೇ 2-0 ಅಂತರದಿಂದ ವಶಪಡಿಸಿಕೊಂಡಿದೆ. ಹೀಗಿದ್ದರೂ ಟೀಮ್ ಇಂಡಿಯಾಕ್ಕಿದು ಔಪಚಾರಿಕ ಪಂದ್ಯವಲ್ಲ. ಐಸಿಸಿ ಏಕದಿನ ವಿಶ್ವಕಪ್ ದೃಷ್ಟಿಯಿಂದ ಭಾರತಕ್ಕೆ ಇದು ಮಹತ್ವದ ಪಂದ್ಯವಾಗಿದೆ. ಅಲ್ಲದೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದು, ಗೆದ್ದು ಪ್ರತಿಷ್ಠೆ ಉಳಿಸಬೇಕಿದೆ. ಅತ್ತ ಕಾಂಗರೂ ಪಡೆ ಮಾನ ಉಳಿಸಿಕೊಳ್ಳಲು ಕೊನೇ ಪಂದ್ಯ ಗೆಲ್ಲುವ ಪ್ಲಾನ್​ನಲ್ಲಿದೆ.

ಭಾರತ ತಂಡ ಬ್ಯಾಟಿಂಗ್- ಬೌಲಿಂಗ್​ನಲ್ಲಿ ಭರ್ಜರಿ ಫಾರ್ಮ್​ನಲ್ಲಿದೆ. ಶುಭ್​ಮನ್ ಗಿಲ್​ಗೆ ವಿಶ್ರಾಂತಿ ನೀಡಿರುವ ಪರಿಣಾಮ ನಾಯಕ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಶ್ರೇಯಸ್ ಅಯ್ಯರ್ ಮೂರನೇ ಕ್ರಮಾಂಕವನ್ನು ವಿರಾಟ್ ಕೊಹ್ಲಿಗೆ ಬಿಟ್ಟುಕೊಡಬೇಕು. ಹಾರ್ದಿಕ್ ಪಾಂಡ್ಯ ತಂಡ ಸೇರಿರುವ ಕಾರಣ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬೀಳಬಹುದು. ಶಾರ್ದೂಲ್ ಥಾಕೂರ್​ಗೆ ವಿಶ್ರಾಂತಿ ನೀಡಲಾಗಿದೆ. ಕುಲ್ದೀಪ್ ಯಾದವ್ ಇವರ ಜಾಗಕ್ಕೆ ಬರುವ ಸಂಭವವಿದೆ.

ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನಕ್ಕೆ ಮಳೆಯ ಕಾಟ?: ರಾಜ್ಕೋಟ್ ಹವಾಮಾನ ಹೀಗಿದೆ

ಇದನ್ನೂ ಓದಿ
Image
ರಾಜ್ಕೋಟ್​ನಲ್ಲಿ ರನ್ ಮಳೆ: ಸೌರಾಷ್ಟ್ರ ಸ್ಟೇಡಿಯಂ ಪಿಚ್ ರಿಪೋರ್ಟ್ ನೋಡಿ
Image
ವಿಶ್ವಕಪ್​ನಿಂದ ಅಕ್ಷರ್ ಪಟೇಲ್ ಹೊರಕ್ಕೆ?: ಬಿಸಿಸಿಐಯಿಂದ ಬಿಗ್ ಅಪ್ಡೇಟ್
Image
IND vs AUS ಮೂರನೇ ಏಕದಿನಕ್ಕೆ ಮಳೆಯ ಕಾಟ?: ರಾಜ್ಕೋಟ್ ಹವಾಮಾನ ಹೀಗಿದೆ
Image
ನಾಳೆ ತೃತೀಯ ಏಕದಿನ: ಇನ್ನೂ ತಂಡ ಸೇರಿಕೊಳ್ಳದ ರೋಹಿತ್ ಶರ್ಮಾ?

ಇತ್ತ ಕಾಂಗರೂ ಪಡೆ ಸರಣಿ ಕಳೆದುಕೊಂಡಿದೆ. ಮಾನ ಉಳಿಸಿಕೊಳ್ಳಲು ಕನಿಷ್ಠ ಇಂದಿನ ಪಂದ್ಯ ಗೆಲ್ಲಬೇಕಿದೆ. ತಂಡ ಉತ್ತಮ ಆರಂಭ ಪಡೆದುಕೊಳ್ಳುವಲ್ಲಿ ಎಡವುತ್ತಿದೆ. ಮಿಚೆಲ್ ಮಾರ್ಶ್ ಕಡೆಯಿಂದ ಉತ್ತಮ ಆಟ ಬರುತ್ತಿಲ್ಲ. ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ತಂಡಕ್ಕೆ ಇನ್ನಷ್ಟು ಆಸರೆಯಾಗಬೇಕಿದೆ. ಆಸ್ಟ್ರೇಲಿಯಾ ತಂಡದಲ್ಲಿ ಮಾರಕ ಬೌಲರ್​ಗಳಿದ್ದರೂ ಪರಿಣಾಮಕಾರಿ ಆಗಿ ಗೋಚರಿಸುತ್ತಿಲ್ಲ. ಪ್ಯಾಟ್ ಕಮಿನ್ಸ್, ಸ್ಟೊಯಿನಿಸ್, ಝಂಪಾ, ಅಬಾಟ್ ಮೇಲೆ ಹೆಚ್ಚಿನ ಒತ್ತಡವಿದೆ.

ಪಿಚ್ ವರದಿ:

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ ಸ್ನೇಹಿ ಆಗಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಇಲ್ಲಿ ದೊಡ್ಡ ಸ್ಕೋರ್ ಆಗುತ್ತದೆ. ಇಲ್ಲಿಯವರೆಗೆ ನಡೆದ ಮೂರು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಬ್ಯಾಟರ್​ಗಳಿಗೆ ಈ ಪಿಚ್ ಸ್ವರ್ಗ ಎಂದೇ ಹೇಳಬಹುದು. ಈ ಮೈದಾನವು ಇಂದೋರ್‌ಗಿಂತ ದೊಡ್ಡದಾಗಿದೆ, ಆದರೆ ಇಲ್ಲಿನ ಪಿಚ್ ಬ್ಯಾಟರ್‌ಗಳಿಗೆ ಸಂಪೂರ್ಣ ತಲೆಬಾಗುತ್ತದೆ. ಎರಡೂ ಬದಿಯಲ್ಲಿ ಬೌಂಡರಿಗಳು ಚಿಕ್ಕದಾಗಿರುವುದರಿಂದ ರನ್‌ಗಳು ಹೆಚ್ಚು ಬರುತ್ತದೆ.

ರಾಜ್ಕೋಟ್ ಹವಾಮಾನ ವರದಿ:

ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇಲ್ಲ. ಬುಧವಾರ (ಸೆಪ್ಟೆಂಬರ್ 27) ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮಳೆ ಬೀಳುವ ನಿರೀಕ್ಷೆ ಇದ್ದು, ಪಂದ್ಯದ ದಿನ ಮಳೆಯ ಸಾಧ್ಯತೆ ಕಮ್ಮಿ. ಗರಿಷ್ಠ ತಾಪಮಾನವು 34 C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ, ಆದರೆ ದಿನದ ಆಟದ ಕೊನೆಯಲ್ಲಿ 25 C ಗೆ ಕಡಿಮೆಯಾಗುತ್ತದೆ. ಬುಧವಾರ ಕೇವಲ 6 ಪ್ರತಿಶತದಷ್ಟು ಮಳೆ ಬೀಳುವ ಸಾಧ್ಯತೆ ಮಾತ್ರ ಇದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ