AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಚಕ್ಕನೆ ಜಿಗಿದು ಅತ್ಯದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಉಸ್ಮಾನ್ ಖ್ವಾಜಾ

India vs Australia 3rd Test: 88 ರನ್​​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ರೋಹಿತ್ ಶರ್ಮಾ (12) ಹಾಗೂ ಶುಭ್​ಮನ್ ಗಿಲ್ (5) ಬೇಗನೆ ನಿರ್ಗಮಿಸಿ ನಿರಾಸೆ ಮೂಡಿಸಿದರು.

VIDEO: ಚಕ್ಕನೆ ಜಿಗಿದು ಅತ್ಯದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಉಸ್ಮಾನ್ ಖ್ವಾಜಾ
Usman Khawaja
TV9 Web
| Edited By: |

Updated on:Mar 02, 2023 | 4:22 PM

Share

India vs Australia 3rd Test: ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ 3ನೇ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ (Team India) ಕೇವಲ 109 ರನ್​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ ಅನ್ನು 197 ರನ್​ಗಳಿಗೆ ಅಂತ್ಯಗೊಳಿಸಿತ್ತು. ಇದಾದ ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಮತ್ತೊಮ್ಮೆ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದೆ.

88 ರನ್​​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ರೋಹಿತ್ ಶರ್ಮಾ (12) ಹಾಗೂ ಶುಭ್​ಮನ್ ಗಿಲ್ (5) ಬೇಗನೆ ನಿರ್ಗಮಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನು 13 ರನ್​ಗಳಿಸಿ ವಿರಾಟ್ ಕೊಹ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು. ಆ ಬಳಿಕ ಬಂದ ರವೀಂದ್ರ ಜಡೇಜಾ 7 ರನ್​ಗಳಿಸಲಷ್ಟೇ ಶಕ್ತರಾದರು.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಕ್ರೀಸ್ ಕಚ್ಚಿ ನಿಲ್ಲುವ ಸೂಚನೆ ನೀಡಿದರು. ರಕ್ಷಣಾತ್ಮಕ ಆಟದೊಂದಿಗೆ 26 ರನ್​ ಬಾರಿಸಿದ ಅಯ್ಯರ್ ಅವರು ಉಸ್ಮಾನ್ ಖ್ವಾಜಾ ಅವರ ಅದ್ಭುತ ಫೀಲ್ಡಿಂಗ್ ಕಾರಣ

ಮಿಚೆಲ್ ಸ್ಟಾರ್ಕ್ ಎಸೆದ 38ನೇ ಓವರ್​ನ 2ನೇ ಎಸೆತವನ್ನು ಶ್ರೇಯಸ್ ಅಯ್ಯರ್ ಲೆಗ್​ ಸೈಡ್​ನತ್ತ ಫ್ಲಿಕ್ ಮಾಡಲು ಯತ್ನಿಸಿದ್ದರು. ಆದರೆ ಮುಂಭಾಗದಲ್ಲಿ ಫೀಲ್ಡಿಂಗ್​ನಲ್ಲಿ ಉಸ್ಮಾನ್ ಖ್ವಾಜಾ ತಕ್ಷಣವೇ ಎಡಭಾಗಕ್ಕೆ ಜಿಗಿದು ಕೆಳ ಹಂತದಲ್ಲಿದ್ದ ಚೆಂಡನ್ನು ಒಂದೇ ಕೈಯಲ್ಲಿ ಅದ್ಭುತವಾಗಿ ಹಿಡಿದರು. ಈ ಅದ್ಭುತ ಫೀಲ್ಡಿಂಗ್ ಕಾರಣ ಶ್ರೇಯಸ್ ಅಯ್ಯರ್ (26) ಹೊರ ನಡೆಯಬೇಕಾಯಿತು.

ಇದೀಗ ಉಸ್ಮಾನ್ ಖ್ವಾಜಾ ಅವರ ಈ ಅತ್ಯಾದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆಸೀಸ್ ಕ್ರಿಕೆಟಿಗನ ಅತ್ಯುತ್ತಮ ಡೈವಿಂಗ್ ಕ್ಯಾಚ್​ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭ್​ಮನ್ ಗಿಲ್ , ಚೇತೇಶ್ವರ ಪೂಜಾರ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ರವೀಂದ್ರ ಜಡೇಜಾ , ಶ್ರೀಕರ್ ಭರತ್ ( ವಿಕೆಟ್ ಕೀಪರ್ ) , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಉಮೇಶ್ ಯಾದವ್ , ಮೊಹಮ್ಮದ್ ಸಿರಾಜ್

ಇದನ್ನೂ ಓದಿ: Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ , ಟ್ರಾವಿಸ್ ಹೆಡ್ , ಮಾರ್ನಸ್ ಲ್ಯಾಬುಶೇನ್ , ಸ್ಟೀವ್ ಸ್ಮಿತ್ (ನಾಯಕ) , ಪೀಟರ್ ಹ್ಯಾಂಡ್ಸ್​ಕ್ಯಾಂಬ್ , ಕ್ಯಾಮರೋನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಟಾಡ್ ಮರ್ಫಿ , ಮ್ಯಾಥ್ಯೂ ಕುಹ್ನೆಮನ್.

Published On - 4:03 pm, Thu, 2 March 23

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ