AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ಲಾಭವೇನು? ಸೋತರೆ ನಷ್ಟವೇನು?

India vs Australia 4t Test: 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಅಥವಾ ಡ್ರಾ ಮಾಡಿಕೊಳ್ಳುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಈ ಮೂಲಕ ಸತತವಾಗಿ 4 ಬಾರಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದ ಹಿರಿಮೆಗೂ ಪಾತ್ರವಾಗಲಿದೆ.

IND vs AUS 4th Test: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ಲಾಭವೇನು? ಸೋತರೆ ನಷ್ಟವೇನು?
Team India
TV9 Web
| Edited By: |

Updated on: Mar 09, 2023 | 4:00 PM

Share

India vs Australia 4th Test: ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್​ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಶುರುವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲಲು ಉಭಯ ತಂಡಗಳು ಪಣತೊಟ್ಟಿದೆ. ಹೀಗಾಗಿಯೇ 4ನೇ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಈಗಾಗಲೇ 4 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇತ್ತ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು 2-2 ಅಂತರದಿಂದ ಅಂತ್ಯಗೊಳಿಸಲು ಆಸ್ಟ್ರೇಲಿಯಾ ತಂಡ ಕೂಡ ಪ್ಲ್ಯಾನ್ ರೂಪಿಸಿದೆ.

ಮತ್ತೊಂದೆಡೆ ಟೀಮ್ ಇಂಡಿಯಾ ಪಾಲಿಗೆ ಈ ಗೆಲುವು ಅನಿವಾರ್ಯ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪ್ರವೇಶವನ್ನು ಈ ಪಂದ್ಯದ ಫಲಿತಾಂಶ ನಿರ್ಧರಿಸಲಿದೆ. ಒಂದು ವೇಳೆ ಭಾರತ ತಂಡವು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಅತ್ತ ಶ್ರೀಲಂಕಾ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್​​​ಶಿಪ್ ಫೈನಲ್​ಗೇರುವ ಅವಕಾಶ ಹೆಚ್ಚಾಗಲಿದೆ.

ಹೀಗಾಗಿ ಅಹಮದಾಬಾದ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಇದಲ್ಲದೆ ಈ ಒಂದು ಗೆಲುವಿನೊಂದಿಗೆ ಟೆಸ್ಟ್ ತಂಡಗಳ ಶ್ರೇಯಾಂಕ ಪಟ್ಟಿಯಲ್ಲೂ ನಂಬರ್ 1 ಸ್ಥಾನಕ್ಕೇರಲಿದೆ. ಅದು ಕೂಡ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕುವ ಮೂಲಕ ಎಂಬುದೇ ಇಲ್ಲಿ ವಿಶೇಷ.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇನ್ನು 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಅಥವಾ ಡ್ರಾ ಮಾಡಿಕೊಳ್ಳುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಈ ಮೂಲಕ ಸತತವಾಗಿ 4 ಬಾರಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದ ಹಿರಿಮೆಗೂ ಪಾತ್ರವಾಗಲಿದೆ. ಈ ಎಲ್ಲಾ ಕಾರಣಗಳಿಂದ ಅಹಮದಾಬಾದ್ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಹತ್ವದೆನಿಸಿಕೊಂಡಿದೆ.

ಒಂದು ವೇಳೆ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದರೆ ಸರಣಿಯು 2-2 ಅಂತರದಿಂದ ಕೊನೆಗೊಳ್ಳಲಿದೆ. ಇದರ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೇರುವ ಶ್ರೀಲಂಕಾ ತಂಡದ ಕನಸು ಕೂಡ ಜೀವಂತವಾಗಿರಲಿದೆ. ಇಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯವನ್ನು ಸೋತರೆ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಸರಣಿ ಗೆಲ್ಲುವುದನ್ನು ಎದುರು ನೋಡಬೇಕು. ಅಂದರೆ ಇಲ್ಲಿ ಶ್ರೀಲಂಕಾ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​ ಕನಸು ಟೀಮ್ ಇಂಡಿಯಾದ ಫಲಿತಾಂಶದ ಮೇಲೆ ಅವಲಂಭಿತವಾಗಿದೆ.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಭಾರತ-ಆಸ್ಟ್ರೇಲಿಯಾ ನಡುವಣ ಕೊನೆಯ ಟೆಸ್ಟ್ ಪಂದ್ಯ ಡ್ರಾ ಆದರೆ?

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಡ್ರಾ ಆದರೂ ಟೀಮ್ ಇಂಡಿಯಾದ ಪಾಲಿಗೆ ಮುಳುವಾಗಲಿದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದರೂ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡದ ಗೆಲುವಿನ ಮೇಲೆ ಫೈನಲ್​ ಕನಸು ಆಧಾರಿತವಾಗಿರಲಿದೆ.

ಅಂದರೆ ಇಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಂಡರೆ ಅಥವಾ 2-1 ಅಂತರದಿಂದ ಗೆದ್ದುಕೊಂಡರೆ, ಟೀಮ್ ಇಂಡಿಯಾಗೆ ನೇರವಾಗಿ ಫೈನಲ್​ಗೇರಲು ಸಾಧ್ಯವಾಗುವುದಿಲ್ಲ. ಬದಲಾಗಿ ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು 2-0, 1-0 ಅಂತರದಿಂದ ಸೋಲಿಸಿದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಎಂಟ್ರಿ ಕೊಡಬಹುದು.

ಇತ್ತ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತು, ಅತ್ತ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ 2-0 ಅಂತರದಿಂದ ಟೆಸ್ಟ್ ಸರಣಿ ಗೆದ್ದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಅಹಮದಾಬಾದ್​ ಟೆಸ್ಟ್ ಒಂದಾರ್ಥದಲ್ಲಿ​ ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ