AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: ಟಾಸ್ ಗೆದ್ದ ಆಸ್ಟ್ರೇಲಿಯಾ: ಭಾರತದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ

India vs Australia 4th Test: ಭಾರತ ಈ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಅರ್ಹತೆ ಪಡೆದುಕೊಳ್ಳಲು ಗೆಲ್ಲಲೇ ಬೇಕಿದೆ. ಇತ್ತ ಸರಣಿಯಲ್ಲಿ 1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲುವ ಯೋಜನೆ ರೂಪಿಸಿದೆ.

IND vs AUS 4th Test: ಟಾಸ್ ಗೆದ್ದ ಆಸ್ಟ್ರೇಲಿಯಾ: ಭಾರತದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ
IND vs AUS 4th Test
Vinay Bhat
|

Updated on:Mar 09, 2023 | 10:26 AM

Share

ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ. ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ (Steve Smith) ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ಈ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಅರ್ಹತೆ ಪಡೆದುಕೊಳ್ಳಲು ಗೆಲ್ಲಲೇ ಬೇಕಿದೆ. ಇತ್ತ ಸರಣಿಯಲ್ಲಿ 1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲುವ ಯೋಜನೆ ರೂಪಿಸಿದೆ. ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿದ್ದಾರೆ.

ಅಂದುಕೊಂಡಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವಿಶ್ರಾಂತಿಯಲ್ಲಿದ್ದ ಮೊಹಮ್ಮದ್ ಶಮಿ ತಂಡಕ್ಕೆ ಮರಳಿದ್ದು, ಮೊಹಮ್ಮದ್ ಸಿರಾಜ್ ಹೊರಗುಳಿದಿದ್ದಾರೆ. ಉಳಿದಂತೆ ಗಿಲ್ ಹಾಗೂ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರೆ, ಪೂಜಾರ, ಕೊಹ್ಲಿ, ಶ್ರೇಯಸ್, ಶ್ರೀಕರ್ ಭರತ್, ಜಡೇಜಾ, ಅಶ್ವಿನ್, ಅಕ್ಷರ್, ಶಮಿ, ಉಮೇಶ್ ಯಾದವ್ ಸ್ಥಾನ ಪಡೆದುಕೊಂಡಿದ್ದಾರೆ.

ಇತ್ತ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ನಾಲ್ಕನೇ ಟೆಸ್ಟ್​ನಿಂದಲೂ ಹೊರಗುಳಿದಿದ್ದಾರೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್​ ಅವರು ನಾಯಕನಾಗಿ ಮುಂದುವರೆದಿದ್ದಾರೆ. ಟಾಡ್ ಮರ್ಫಿ, ನೇಥನ್ ಲಿಯಾನ್ ಹಾಗೂ ಮ್ಯಾಟ್ ಕುನೆಮನ್ ತಂಡದ ಪ್ರಮುಖ ಸ್ಪಿನ್ ಅಸ್ತ್ರವಾಗಿದೆ. ಬ್ಯಾಟಿಂಗ್​ನಲ್ಲಿ ಸ್ಮಿತ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ, ಉಸ್ಮಾನ್ ಖವಾಜಾ, ಪೀಟರ್ ಹ್ಯಾಂಡ್ಸ್‌ಕಂಬ್, ಕ್ಯಾಮರಾನ್ ಗ್ರೀನ್, ಮಾರ್ನಸ್ ಲಾಬುಷೇನ್ ಮಿಂಚಬೇಕಿದೆ.

ಇದನ್ನೂ ಓದಿ
Image
IND vs AUS 4th Test: ಇಂದಿನಿಂದ ಭಾರತ-ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್: ಟೀಮ್ ಇಂಡಿಯಾದಲ್ಲಿ ಏನು ಬದಲಾವಣೆ?
Image
India vs Australia 4th Test: ಇಬ್ಬರು ಇನ್, ಮತ್ತಿಬ್ಬರು ಔಟ್: ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಸಮಬಲ ಸಾಧಿಸಿದ ಅಶ್ವಿನ್-ಅ್ಯಂಡರ್ಸನ್
Image
GGT vs RCB, WPL 2023: ಆರ್​ಸಿಬಿಗೆ ವಿರೋಚಿತ ಸೋಲು

AB De Villier: ‘ಸಾರ್ವಕಾಲಿಕ ಶ್ರೇಷ್ಠ T20 ಆಟಗಾರ’ನನ್ನು ಹೆಸರಿಸಿದ ಎಬಿ ಡಿವಿಲಿಯರ್ಸ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್. ಭರತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮೇಶ್ ಯಾದವ್.

ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಷೇನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್‌ಕಂಬ್, ಕ್ಯಾಮರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಟ್ ಕುನೆಮನ್.

ಭಾರತ ಗೆಲ್ಲಲೇ ಬೇಕು:

ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪ್ರವೇಶಿಸ ಬೇಕಾದಲ್ಲಿ ಭಾರತ ಈ ಟೆಸ್ಟ್​ ಪಂದ್ಯದಲ್ಲಿ ಗೆಲ್ಲಬೇಕಿದೆ. ಇಲ್ಲದಿದ್ದಲ್ಲಿ ಶ್ರೀಲಂಕಾ ಫೈನಲ್​ಗೆ ಹೋಗುವ ಅವಕಾಶ ಮಾಡಿಕೊಳ್ಳುವ ಸಾಧ್ಯತೆ ಇದೆ. ಇಂದಿನಿಂದ ನ್ಯೂಜಿಲೆಂಡ್​ ಪ್ರವಾಸದಲ್ಲಿರುವ ಶ್ರೀಲಂಕಾಗೆ ಕೂಡ ಪಂದ್ಯ ಆರಂಭವಾಗಲಿದೆ. ಎರಡು ಟೆಸ್ಟ್​ ಪಂದ್ಯದ ಸರಣಿಯಲ್ಲಿ ಕಿವಿಸ್​ನ್ನು ತವರಿನಲ್ಲಿ ಕ್ಲೀನ್​ ಸ್ವೀಪ್​ ಮಾಡಿದರೆ ಲಂಕಾ WTC ಫೈನಲ್​ ಪ್ರವೇಶಿಸಲಿದೆ. ಹೀಗಾಗಿ ಭಾರತಕ್ಕೆ ಗೆದ್ದರಷ್ಟೆ ಉಳಿಗಾಲ. ಭಾರತ-ಆಸ್ಟ್ರೇಲಿಯಾ 105 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ ಕಾಂಗರೂ ಪಡೆ 44 ಮತ್ತು ಭಾರತ 32 ಪಂದ್ಯಗಳನ್ನು ಗೆದ್ದಿದೆ. 28 ಪಂದ್ಯ ಡ್ರಾ ಹಾಗೂ ಒಂದು ಪಂದ್ಯ ಟೈ ಆಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:10 am, Thu, 9 March 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?