AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಹೊತ್ತಾರೆ ಹೊತ್ತಿನಲ್ಲಿ ಶುರುವಾಗಲಿದೆ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್​

India vs Australia 4th Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಅಮೋಘ ಗೆಲುವು ದಾಖಲಿಸಿದೆ. ಇನ್ನು ದ್ವಿತೀಯ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್​ಗಳಿಂದ ಜಯಭೇರಿ ಬಾರಿಸಿತ್ತು. ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದ್ದು, ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗಿದೆ.

IND vs AUS: ಹೊತ್ತಾರೆ ಹೊತ್ತಿನಲ್ಲಿ ಶುರುವಾಗಲಿದೆ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್​
India vs Australia
ಝಾಹಿರ್ ಯೂಸುಫ್
|

Updated on: Dec 24, 2024 | 9:57 AM

Share

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ. ಈ ಪಂದ್ಯದ ಟಾಸ್ ಪ್ರಕ್ರಿಯೆ ಆಸ್ಟ್ರೇಲಿಯಾ ಸಮಯ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಅಂದರೆ ಭಾರತೀಯ ಕಾಲಮಾನ 4.30 ಕ್ಕೆ ಟಾಸ್ ಪ್ರಕ್ರಿಯೆ ಮುಗಿಯಲಿದೆ. ಇನ್ನು ಭಾರತದಲ್ಲಿ ಪಂದ್ಯವನ್ನು ಮುಂಜಾನೆ 5 ಗಂಟೆಯಿಂದ ಲೈವ್ ವೀಕ್ಷಿಸಬಹುದು.

ಬ್ರಿಸ್ಬೇನ್​ನಲ್ಲಿ ನಡೆದ ಮೂರನೇ ಪಂದ್ಯವು ಬೆಳಿಗ್ಗೆ 9.30 ಕ್ಕೆ (ಭಾರತದಲ್ಲಿ 5.30 ಕ್ಕೆ) ಆರಂಭವಾಗಿತ್ತು. ಆದರೀಗ ಮೆಲ್ಬೋರ್ನ್ ಟೆಸ್ಟ್ ಪಂದ್ಯವನ್ನು ಬೆಳಿಗ್ಗೆ 10.30 ಕ್ಕೆ (ಭಾರತದಲ್ಲಿ 5 ಗಂಟೆ) ಆರಂಭಿಸಲು ನಿರ್ಧರಿಸಲಾಗಿದೆ. ಅದರಂತೆ ಮೊದಲ ಸೆಷನ್ ಬೆಳಿಗ್ಗೆ 5 am IST ಗಂಟೆಯಿಂದ 7 am IST ಗಂಟೆಯವರೆಗೆ ನಡೆಯಲಿದೆ.

ಇನ್ನು ದ್ವಿತೀಯ ಸೆಷನ್ ಶುರುವಾಗುವುದು ಭಾರತೀಯ ಕಾಲಮಾನ 7.40 am ರಿಂದ,  9.40 am ವರೆಗೆ ಎರಡನೇ ಸೆಷನ್ ನಡೆಯಲಿದೆ. ಇದಾದ ಬಳಿಕ ಟೀ ಬ್ರೇಕ್ ಇರಲಿದೆ. ಆ ಬಳಿಕ 10 am ರಿಂದ 12 pm ರವರೆಗೆ ಮೂರನೇ ಸೆಷನ್ ಜರುಗಲಿದೆ. ಅಂದರೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಯಾಗುವಷ್ಟರಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಗಿಯಲಿದೆ.

ಬಾಕ್ಸಿಂಗ್ ಡೇ ಟೆಸ್ಟ್ ಸಮಯ:

  • ಟಾಸ್ ಪ್ರಕ್ರಿಯೆ – 4.30 am IST.
  • ಮೊದಲ ಸೆಷನ್ – 5 am to 7 am IST.
  • ಎರಡನೇ ಸೆಷನ್ – 7.40 am toಇ 9.40 am IST.
  • ಮೂರನೇ ಸೆಷನ್ – 10 am to 12 pm IST.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯವನ್ನು ಸ್ಟಾರ್​ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್​ ಸ್ಟಾರ್ ಆ್ಯಪ್ ಹಾಗೂ ವೆಬ್​ಸೈಟ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

ಇದನ್ನೂ ಓದಿ: ಟೀಮ್ ಇಂಡಿಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ರೋಹಿತ್ ಶರ್ಮಾ

ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಶಾನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಸ್ಯಾಮ್ ಕೊನ್​ಸ್ಟಾಸ್, ಮಾರ್ನಸ್ ಲಾನುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಜ್ಯೆ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ , ಬ್ಯೂ ವೆಬ್‌ಸ್ಟರ್​.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!