AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಪೂರ್ಣ ವೇಳಾಪಟ್ಟಿ, ಉಭಯ ತಂಡಗಳು, ಪಂದ್ಯ ಆರಂಭವಾಗುವ ಸಮಯ, ನೇರ ಪ್ರಸಾರದ ವಿವರಗಳು ಇಲ್ಲಿವೆ

IND vs AUS: ಅಕ್ಟೋಬರ್ 5ರಿಂದ ಭಾರತದಲ್ಲಿ ನಡೆಯೋ ಏಕದಿನ ವಿಶ್ವಕಪ್​ಗೂ ಮುನ್ನ, ಅಂದರೆ ಸೆಪ್ಟೆಂಬರ್ 22ರಿಂದ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ವಿಶ್ವಕಪ್​ ತಯಾರಿಗೆ ಉಭಯ ತಂಡಗಳಿಗೂ ಈ ಸರಣಿ ಅಂತ್ಯತ ಮಹತ್ವದ್ದಾಗಿದೆ.

IND vs AUS: ಪೂರ್ಣ ವೇಳಾಪಟ್ಟಿ, ಉಭಯ ತಂಡಗಳು, ಪಂದ್ಯ ಆರಂಭವಾಗುವ ಸಮಯ, ನೇರ ಪ್ರಸಾರದ ವಿವರಗಳು ಇಲ್ಲಿವೆ
ಭಾರತ- ಆಸ್ಟ್ರೇಲಿಯಾImage Credit source: insidesport
Follow us
ಪೃಥ್ವಿಶಂಕರ
|

Updated on:Sep 19, 2023 | 11:41 AM

ಏಷ್ಯಾಕಪ್ (Asia Cup 2023)​ ಚಾಂಪಿಯನ್ಸ್​ ಟೀಮ್ ಇಂಡಿಯಾ, ಆಸ್ಟ್ರೇಲಿಯಾ (India vs Australia) ವಿರುದ್ಧದ ಏಕದಿನ ಸರಣಿಗೆ ಸಿದ್ಧವಾಗಿದೆ. ಕಾಂಗರೂ ಪಡೆ ವಿರುದ್ಧದ ಏಕದಿನ ಸರಣಿಗಾಗಿ ಬಿಸಿಸಿಐ, ಈಗಾಗಲೇ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 5ರಿಂದ ಭಾರತದಲ್ಲಿ ನಡೆಯೋ ಏಕದಿನ ವಿಶ್ವಕಪ್​ಗೂ (ODI World Cup 2023) ಮುನ್ನ, ಅಂದರೆ ಸೆಪ್ಟೆಂಬರ್ 22ರಿಂದ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ವಿಶ್ವಕಪ್​ ತಯಾರಿಗೆ ಉಭಯ ತಂಡಗಳಿಗೂ ಈ ಸರಣಿ ಅಂತ್ಯತ ಮಹತ್ವದ್ದಾಗಿದೆ. ಏಕೆಂದರೆ ಎರಡೂ ತಂಡಗಳಲ್ಲೂ ಇಂಜುರಿಯಿಂದ ಚೇತರಿಸಿಕೊಂಡು ಬಂದಿರುವ ಆಟಗಾರರ ದಂಡೆ ಇದೆ. ಹೀಗಾಗಿ ವಿಶ್ವಕಪ್​ಗೆ ಬಲಿಷ್ಠ ಪಡೆಯನ್ನು ಸಿದ್ದಗೊಳಿಸಿಕೊಳ್ಳಲು ಈ ಸರಣಿ ಸಹಾಯಕವಾಗಲಿದೆ.

ಪೂರ್ಣ ವೇಳಾಪಟ್ಟಿ

  • ಮೊದಲನೇ ಏಕದಿನ ಪಂದ್ಯ- ಸೆಪ್ಟೆಂಬರ್ 22 (ಬಿಂದ್ರಾ ಸ್ಟೇಡಿಯಂ, ಮೊಹಾಲಿ)
  • ಎರಡನೇ ಏಕದಿನ ಪಂದ್ಯ- ಸೆಪ್ಟೆಂಬರ್ 24 (ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ, ಇಂದೋರ್)
  • ಮೂರನೇ ಏಕದಿನ ಪಂದ್ಯ- ಸೆಪ್ಟೆಂಬರ್ 27 (ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ರಾಜ್‌ಕೋಟ್)

IND vs AUS: ಭಾರತ- ಆಸ್ಟ್ರೇಲಿಯಾ ಕಾಳಗದಲ್ಲಿ ಯಾವ ತಂಡ ಮೇಲುಗೈ ಸಾಧಿಸಿದೆ ಗೊತ್ತಾ?

ಉಭಯ ತಂಡಗಳು

ಭಾರತ

ಮೊದಲ ಎರಡು ಪಂದ್ಯಗಳಿಗೆ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್.

ಮೂರನೇ ಏಕದಿನ ಪಂದ್ಯಕ್ಕೆ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ (ಫಿಟ್‌ ಆದರೆ) ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ

ಲೈವ್ ಸ್ಟ್ರೀಮಿಂಗ್ ಮತ್ತು ಟೆಲಿಕಾಸ್ಟ್ ವಿವರ

  • ಎಲ್ಲಾ ಮೂರು ಏಕದಿನ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುತ್ತವೆ.
  • ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳು ಇಂಗ್ಲಿಷ್‌ನಲ್ಲಿ Sports18 ಚಾನೆಲ್‌ನಲ್ಲಿ ನೇರ ಪ್ರಸಾರವವಾಗಲಿವೆ. ಹಾಗೆಯೇ Viacom18 ನೆಟ್‌ವರ್ಕ್‌ನ ಇತರ ನಾಲ್ಕು ಚಾನಲ್‌ಗಳು ವಿವಿಧ ಭಾಷೆಗಳಲ್ಲಿ ಪಂದ್ಯಗಳನ್ನು ಪ್ರಸಾರ ಮಾಡುತ್ತವೆ.
  • ಈ ಸರಣಿಯು ಉಚಿತ-ಪ್ರಸಾರ ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿಯೂ ಪ್ರಸಾರವಾಗಲಿದೆ.
  • ಎಲ್ಲಾ ಪಂದ್ಯಗಳ ಲೈವ್ ಸ್ಟ್ರೀಮಿಂಗ್ JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತವಾಗಿ ಲಭ್ಯವಿರುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:40 am, Tue, 19 September 23

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?