AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತ vs ಬಾಂಗ್ಲಾದೇಶ್ ಮೊದಲ ಟೆಸ್ಟ್: ಮೂರು ಸೆಷನ್, 60 ನಿಮಿಷ ಬ್ರೇಕ್

India vs Bangladesh 1st Test: India vs Bangladesh Test: ಭಾರತ-ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಇಲ್ಲಿ ಮೊದಲ ಟೆಸ್ಟ್ ಪಂದ್ಯವು ಚೆನ್ನೈನಲ್ಲಿ ನಡೆದರೆ, ಎರಡನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27 ರಿಂದ ಕಾನ್ಪುರದಲ್ಲಿ ಆರಂಭವಾಗಲಿದೆ.

IND vs BAN: ಭಾರತ vs ಬಾಂಗ್ಲಾದೇಶ್ ಮೊದಲ ಟೆಸ್ಟ್: ಮೂರು ಸೆಷನ್, 60 ನಿಮಿಷ ಬ್ರೇಕ್
India vs Bangladesh
ಝಾಹಿರ್ ಯೂಸುಫ್
|

Updated on:Sep 18, 2024 | 8:33 AM

Share

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ನಾಳೆಯಿಂದ (ಸೆ.19) ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಜರುಗಲಿದೆ. ಬೆಳಿಗ್ಗೆ 9.30 ರಿಂದ ಶುರುವಾಗಲಿರುವ ಈ ಪಂದ್ಯದ ಮೊದಲ ಸೆಷನ್ ಮುಗಿಯೋದು 11.30 ಕ್ಕೆ. ಭೋಜನಾ ವಿರಾಮದ ಬಳಿಕ 12.10 ರಿಂದ ಎರಡನೇ ಸೆಷನ್ ಆರಂಭವಾಗಲಿದೆ.

ಮಧ್ಯಾಹ್ನ 12.10 ರಿಂದ 2.10ರವರೆಗೆ ದ್ವಿತೀಯ ಸೆಷನ್ ನಡೆಯಲಿದ್ದು, ಆ ಬಳಿಕ 20 ನಿಮಿಷಗಳ ಟ್ರೀ ಬ್ರೇಕ್ ನೀಡಲಾಗುತ್ತದೆ. 2.30 ರಿಂದ ಆರಂಭವಾಗಲಿರುವ ಮೂರನೇ ಸೆಷನ್ 4.30ರವರೆಗೆ ಮುಂದುವರೆಯಲಿದೆ. ಇನ್ನು ಈ ಮೂರು ಸೆಷನ್​ಗಳಲ್ಲಿ ಒಟ್ಟು 90 ಓವರ್​ಗಳನ್ನು ಆಡಲಾಗುತ್ತದೆ. ಅಂದರೆ 7 ಗಂಟೆಗಳ ಮೊದಲ ದಿನದಾಟದಲ್ಲಿ 60 ನಿಮಿಷಗಳ ಬ್ರೇಕ್ ಇರಲಿದೆ.

ಸೆಷನ್ ಟೈಮಿಂಗ್ಸ್​:

  • ಮೊದಲ ಸೆಷನ್ – 9.30am ರಿಂದ 11.30am.
  • ದ್ವಿತೀಯ ಸೆಷನ್  – 12.10pm ರಿಂದ 2.10pm.
  • ತೃತೀಯ ಸೆಷನ್ – 2.30pm ರಿಂದ 4.30pm.

ಯಾರು ಬಲಿಷ್ಠ?

ಭಾರತ ಮತ್ತು ಬಾಂಗ್ಲಾದೇಶ್ ಟೆಸ್ಟ್​​ನಲ್ಲಿ ಕೇವಲ 13 ಪಂದ್ಯಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅತ್ತ ಬಾಂಗ್ಲಾದೇಶ್ ತಂಡವು ಒಮ್ಮೆಯೂ ಭಾರತದ ವಿರುದ್ಧ ಟೆಸ್ಟ್ ಪಂದ್ಯ ಗೆದ್ದಿಲ್ಲ. ಇದಾಗ್ಯೂ 2 ಪಂದ್ಯಗಳಲ್ಲಿ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅಂಕಿ ಅಂಶಗಳ ಪ್ರಕಾರ ಭಾರತ ತಂಡವೇ ಮೇಲುಗೈ ಹೊಂದಿದೆ. ಅದರಲ್ಲೂ ತವರಿನಲ್ಲಿ ಸತತ 17 ಟೆಸ್ಟ್ ಸರಣಿಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈ ಬಾರಿ ಸಹ ಸರಣಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ಉಭಯ ತಂಡಗಳು:

ಬಾಂಗ್ಲಾದೇಶ್ ಟೆಸ್ಟ್ ತಂಡ: ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮಹಮ್ಮದುಲ್ ಹಸನ್ ಜಾಯ್, ಝಾಕಿರ್ ಹಸನ್, ಶದ್ಮಾನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ಕುಮಾರ್ ದಾಸ್, ಮೆಹಿದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹಿದ್ ರಾಣಾ, ಹಸನ್ ಮಹಮ್ಮದ್, ತಸ್ಕಿನ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜಾಕರ್ ಅಲಿ.

ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

Published On - 7:32 am, Wed, 18 September 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ