AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಟಾಸ್ ಗೆದ್ದ ಬಾಂಗ್ಲಾದೇಶ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

India vs Bangladesh, 1st Test: ಭಾರತ ಮತ್ತು ಬಾಂಗ್ಲಾದೇಶ್ ಟೆಸ್ಟ್ ಕ್ರಿಕೆಟ್​ನಲ್ಲಿ ಒಟ್ಟು 13 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆದರೆ ಬಾಂಗ್ಲಾದೇಶ್ ತಂಡವು ಭಾರತದ ವಿರುದ್ಧ ಈವರೆಗೆ ಗೆಲುವು ಕಂಡಿಲ್ಲ. ಇದಾಗ್ಯೂ ಎರಡು ಪಂದ್ಯಗಳಲ್ಲಿ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಈ ಸರಣಿಯಲ್ಲೂ ಬಾಂಗ್ಲಾ ತಂಡದಿಂದ ರೋಚಕ ಪೈಪೋಟಿ ನಿರೀಕ್ಷಿಸಬಹುದು.

IND vs BAN: ಟಾಸ್ ಗೆದ್ದ ಬಾಂಗ್ಲಾದೇಶ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
Team India
ಝಾಹಿರ್ ಯೂಸುಫ್
|

Updated on:Sep 19, 2024 | 9:12 AM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ಆರಂಭಿಸಲಿದೆ. ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡವು ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಿದೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಶುಭ್​ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಆಡಿದರೆ, ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ 5ನೇ ಮತ್ತು 6ನೇ ಕ್ರಮಾಂಕಗಳಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಜೊತೆ ಆಕಾಶ್ ದೀಪ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  1. ಯಶಸ್ವಿ ಜೈಸ್ವಾಲ್
  2. ರೋಹಿತ್ ಶರ್ಮಾ (ನಾಯಕ)
  3. ಶುಭ್​ಮನ್ ಗಿಲ್
  4. ವಿರಾಟ್ ಕೊಹ್ಲಿ
  5. ಕೆಎಲ್ ರಾಹುಲ್
  6. ರಿಷಭ್ ಪಂತ್ (ವಿಕೆಟ್ ಕೀಪರ್)
  7. ರವೀಂದ್ರ ಜಡೇಜಾ
  8. ರವಿಚಂದ್ರನ್ ಅಶ್ವಿನ್
  9. ಜಸ್​ಪ್ರೀತ್ ಬುಮ್ರಾ
  10. ಮೊಹಮ್ಮದ್ ಸಿರಾಜ್
  11. ಆಕಾಶ್ ದೀಪ್

ಸರ್ಫರಾಝ್ ಖಾನ್, ಧ್ರುವ್ ಜುರೇಲ್, ಕುಲ್ದೀಪ್ ಯಾದವ್, ಯಶ್ ದಯಾಳ್ ಹಾಗೂ ಅಕ್ಷರ್ ಪಟೇಲ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿಲ್ಲ.

ಇದನ್ನೂ ಓದಿ: Travis Head: ಪವರ್​​ಪ್ಲೇನಲ್ಲಿ ಪವರ್​ಫುಲ್ ದಾಖಲೆ ಬರೆದ ಟ್ರಾವಿಸ್ ಹೆಡ್

ಇನ್ನು ಬಾಂಗ್ಲಾದೇಶ್ ತಂಡ ಕೂಡ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಇಲ್ಲೂ ಕೂಡ ಮುಂದುವರೆಸಲಾಗಿದ್ದು, ಈ ಮೂಲಕ ಮೊದಲ ಪಂದ್ಯದಲ್ಲೇ ಜಯ ಸಾಧಿಸುವ ವಿಶ್ವಾಸದಲ್ಲಿದೆ. ಅದರಂತೆ ಬಾಂಗ್ಲಾದೇಶ್ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  1. ಶಾದ್ಮನ್ ಇಸ್ಲಾಂ
  2. ಝಾಕಿರ್ ಹಸನ್
  3. ನಜ್ಮುಲ್ ಹೊಸೈನ್ ಶಾಂತೊ (ನಾಯಕ)
  4. ಮೊಮಿನುಲ್ ಹಕ್
  5. ಮುಶ್ಫಿಕರ್ ರಹೀಮ್
  6. ಶಕೀಬ್ ಅಲ್ ಹಸನ್
  7. ಲಿಟ್ಟನ್ ದಾಸ್ (ವಿಕೆಟ್ ಕೀಪರ್)
  8. ಮೆಹಿದಿ ಹಸನ್ ಮಿರಾಝ್
  9. ತಸ್ಕಿನ್ ಅಹ್ಮದ್
  10. ಹಸನ್ ಮಹಮೂದ್
  11. ನಹಿದ್ ರಾಣಾ.

ಬಾಂಗ್ಲಾದೇಶ್ ಟೆಸ್ಟ್ ತಂಡ:

 ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮಹಮ್ಮದುಲ್ ಹಸನ್ ಜಾಯ್, ಝಾಕಿರ್ ಹಸನ್, ಶದ್ಮಾನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ಕುಮಾರ್ ದಾಸ್, ಮೆಹಿದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹಿದ್ ರಾಣಾ, ಹಸನ್ ಮಹಮ್ಮದ್, ತಸ್ಕಿನ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜಾಕರ್ ಅಲಿ.

ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

Published On - 9:06 am, Thu, 19 September 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ