AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ನಾಲ್ಕನೇ ದಿನದಾಟದಲ್ಲಿ ಶುರುವಾದ ಭಾರತ-ಬಾಂಗ್ಲಾ ಪಂದ್ಯ

India vs Bangladesh,: India vs Bangladesh 2nd Test: ಕಾನ್ಪುರದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ್ ತಂಡವು ಬ್ಯಾಟಿಂಗ್ ಮುಂದುವರೆಸಿದೆ.

IND vs BAN: ನಾಲ್ಕನೇ ದಿನದಾಟದಲ್ಲಿ ಶುರುವಾದ ಭಾರತ-ಬಾಂಗ್ಲಾ ಪಂದ್ಯ
Team India
TV9 Web
| Edited By: |

Updated on:Sep 30, 2024 | 9:35 AM

Share

ಕಾನ್ಪುರದ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಶುರುವಾಗಿದೆ. ಶುಕ್ರವಾರ ಆರಂಭವಾಗಿದ್ದ ಈ ಪಂದ್ಯದ ಎರಡು ದಿನದಾಟಗಳು ಸಂಪೂರ್ಣ ಮಳೆಗೆ ಅಹುತಿಯಾಗಿತ್ತು. ಇದೀಗ ನಾಲ್ಕನೇ ದಿನದಾಟದೊಂದಿಗೆ ಪಂದ್ಯವು ಮುಂದುವರೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು 35 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಕಲೆಹಾಕಿತು. ಈ ವೇಳೆ ಕಾರ್ಮೋಡ ಆವರಿಸಿದ್ದರಿಂದ ಮೊದಲ ದಿನದಾಟವನ್ನು ಸ್ಥಗಿತಗೊಳಿಸಲಾಗಿತ್ತು.

ಇನ್ನು 2ನೇ ದಿನದಾಟವು ಸಂಪೂರ್ಣವಾಗಿ ಮಳೆಗೆ ಅಹುತಿಯಾಗಿತ್ತು. ಭಾನುವಾರ ನಡೆಯಬೇಕಿದ್ದ ಮೂರನೇ ದಿನದಾಟವು ಒದ್ದೆ ಮೈದಾನದ ಕಾರಣದಿಂದ ರದ್ದುಗೊಳಿಸಲಾಯಿತು. ಇದೀಗ ಪಂದ್ಯವು ನಾಲ್ಕನೇ ದಿನದಾಟಕ್ಕೆ ಕಾಲಿಟ್ಟಿದ್ದು, ಹೀಗಾಗಿ ಈ ಮ್ಯಾಚ್​ ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಟೀಮ್ ಇಂಡಿಯಾಗೆ ಟ್ರೋಫಿ:

ಕಾನ್ಪುರ್ ಟೆಸ್ಟ್ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೆ ಟೀಮ್ ಇಂಡಿಯಾ ಸರಣಿ ಜಯಿಸಲಿದೆ. ಏಕೆಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯವು ಡ್ರಾ ಆದರೆ ಭಾರತ ತಂಡವು 1-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

ಹೀಗಾಗಿ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಫಲಿತಾಂಶವು ಭಾರತ ತಂಡದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ. ಇದಾಗ್ಯೂ ಈ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಬಹುದಿತ್ತು. ಆದರೀಗ 2 ದಿನದಾಟಗಳು ಮಳೆಗೆ ಅಹುತಿಯಾಗಿರುವ ಕಾರಣ ಈ ಪಂದ್ಯವು ಡ್ರಾ ನಲ್ಲಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ

ಬಾಂಗ್ಲಾದೇಶ್ ಪ್ಲೇಯಿಂಗ್​ 11: ಶಾದ್ಮಾನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

Published On - 9:34 am, Mon, 30 September 24

Follow Us
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್