AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ನಾಲ್ಕನೇ ದಿನದಾಟದಲ್ಲಿ ಶುರುವಾದ ಭಾರತ-ಬಾಂಗ್ಲಾ ಪಂದ್ಯ

India vs Bangladesh,: India vs Bangladesh 2nd Test: ಕಾನ್ಪುರದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ್ ತಂಡವು ಬ್ಯಾಟಿಂಗ್ ಮುಂದುವರೆಸಿದೆ.

IND vs BAN: ನಾಲ್ಕನೇ ದಿನದಾಟದಲ್ಲಿ ಶುರುವಾದ ಭಾರತ-ಬಾಂಗ್ಲಾ ಪಂದ್ಯ
Team India
TV9 Web
| Updated By: ಝಾಹಿರ್ ಯೂಸುಫ್|

Updated on:Sep 30, 2024 | 9:35 AM

Share

ಕಾನ್ಪುರದ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಶುರುವಾಗಿದೆ. ಶುಕ್ರವಾರ ಆರಂಭವಾಗಿದ್ದ ಈ ಪಂದ್ಯದ ಎರಡು ದಿನದಾಟಗಳು ಸಂಪೂರ್ಣ ಮಳೆಗೆ ಅಹುತಿಯಾಗಿತ್ತು. ಇದೀಗ ನಾಲ್ಕನೇ ದಿನದಾಟದೊಂದಿಗೆ ಪಂದ್ಯವು ಮುಂದುವರೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು 35 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಕಲೆಹಾಕಿತು. ಈ ವೇಳೆ ಕಾರ್ಮೋಡ ಆವರಿಸಿದ್ದರಿಂದ ಮೊದಲ ದಿನದಾಟವನ್ನು ಸ್ಥಗಿತಗೊಳಿಸಲಾಗಿತ್ತು.

ಇನ್ನು 2ನೇ ದಿನದಾಟವು ಸಂಪೂರ್ಣವಾಗಿ ಮಳೆಗೆ ಅಹುತಿಯಾಗಿತ್ತು. ಭಾನುವಾರ ನಡೆಯಬೇಕಿದ್ದ ಮೂರನೇ ದಿನದಾಟವು ಒದ್ದೆ ಮೈದಾನದ ಕಾರಣದಿಂದ ರದ್ದುಗೊಳಿಸಲಾಯಿತು. ಇದೀಗ ಪಂದ್ಯವು ನಾಲ್ಕನೇ ದಿನದಾಟಕ್ಕೆ ಕಾಲಿಟ್ಟಿದ್ದು, ಹೀಗಾಗಿ ಈ ಮ್ಯಾಚ್​ ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಟೀಮ್ ಇಂಡಿಯಾಗೆ ಟ್ರೋಫಿ:

ಕಾನ್ಪುರ್ ಟೆಸ್ಟ್ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೆ ಟೀಮ್ ಇಂಡಿಯಾ ಸರಣಿ ಜಯಿಸಲಿದೆ. ಏಕೆಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯವು ಡ್ರಾ ಆದರೆ ಭಾರತ ತಂಡವು 1-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

ಹೀಗಾಗಿ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಫಲಿತಾಂಶವು ಭಾರತ ತಂಡದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ. ಇದಾಗ್ಯೂ ಈ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಬಹುದಿತ್ತು. ಆದರೀಗ 2 ದಿನದಾಟಗಳು ಮಳೆಗೆ ಅಹುತಿಯಾಗಿರುವ ಕಾರಣ ಈ ಪಂದ್ಯವು ಡ್ರಾ ನಲ್ಲಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ

ಬಾಂಗ್ಲಾದೇಶ್ ಪ್ಲೇಯಿಂಗ್​ 11: ಶಾದ್ಮಾನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

Published On - 9:34 am, Mon, 30 September 24

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?