AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಪ್ರತಿಭಟನೆಯ ಭಯ; ಭಾರತ- ಬಾಂಗ್ಲಾ ನಡುವಿನ 3ನೇ ಏಕದಿನ ಪಂದ್ಯ ಸ್ಥಳಾಂತರ..!

IND vs BAN: ಬಾಂಗ್ಲಾದೇಶ ಮತ್ತು ಭಾರತ ನಡುವಿನ ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳು ಢಾಕಾದಲ್ಲಿ ನಡೆಯಬೇಕಿತ್ತು. ಆದರೆ ಈಗ ಕೊನೆಯ ಪಂದ್ಯ ಚಿತ್ತಗಾಂಗ್‌ನಲ್ಲಿ ನಡೆಯಲಿದೆ.

IND vs BAN: ಪ್ರತಿಭಟನೆಯ ಭಯ; ಭಾರತ- ಬಾಂಗ್ಲಾ ನಡುವಿನ 3ನೇ ಏಕದಿನ ಪಂದ್ಯ ಸ್ಥಳಾಂತರ..!
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on:Nov 24, 2022 | 10:05 AM

Share

ಸದ್ಯ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸದಲ್ಲಿದ್ದು, ಈಗಾಗಲೇ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಶುಕ್ರವಾರದಿಂದ ಏಕದಿನ ಸರಣಿಯನ್ನು ಆಡಬೇಕಿದೆ. ಈ ಪ್ರವಾಸದ ನಂತರ ಮುಂದಿನ ತಿಂಗಳು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಆಡಬೇಕಿದೆ. ಬಾಂಗ್ಲಾದೇಶ ಪ್ರವಾಸಕ್ಕೂ ಮುನ್ನವೇ ದೊಡ್ಡ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ವಾಸ್ತವವಾಗಿ , ಭಾರತ ಮತ್ತು ಬಾಂಗ್ಲಾದೇಶ ( India and Bangladesh ) ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ದೊಡ್ಡ ಬದಲಾವಣೆಯಾಗಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಏಕದಿನ ಪಂದ್ಯ ಢಾಕಾದಲ್ಲಿ ನಡೆಯಬೇಕಿತ್ತು ಆದರೆ ಈಗ ಈ ಪಂದ್ಯ ಚಿತ್ತಗಾಂಗ್‌ನಲ್ಲಿ ನಡೆಯಲಿದೆ. ಭಾರತ ತಂಡ ಡಿಸೆಂಬರ್ 4 ರಿಂದ ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಯನ್ನು ಆಡಬೇಕಿದೆ. ಮೂರನೇ ಏಕದಿನ ಪಂದ್ಯ ಡಿಸೆಂಬರ್ 10 ರಂದು ಢಾಕಾದಲ್ಲಿ ನಡೆಯಬೇಕಿತ್ತು. ಆದರೆ ಬಾಂಗ್ಲಾದೇಶದ ನ್ಯಾಶನಲಿಸ್ಟ್ ಪಾರ್ಟಿ ಅದೇ ದಿನ ಪ್ರತಿಭಟನೆ ನಡೆಸುವ ತಯಾರಿ ಮಾಡಿಕೊಂಡಿದ್ದು, ಅದೇ ದಿನ ರ್ಯಾಲಿಯನ್ನು ಸಹ ಆಯೋಜಿಸಲಿದೆ. ಹೀಗಾಗಿ ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಪಂದ್ಯದ ಸ್ಥಳವನ್ನು ಬದಲಾಯಿಸಿದೆ.

ಇದನ್ನೂ ಓದಿ: India vs New Zealand: ಏಕದಿನ ಟ್ರೋಫಿ ಅನಾವರಣಗೊಳಿಸಿದ ಧವನ್-ವಿಲಿಯಮ್ಸನ್: ಮೊದಲ ಪಂದ್ಯ ಯಾವಾಗ?

ಮೊದಲ ಮೂರು ಏಕದಿನ ಪಂದ್ಯಗಳು ಢಾಕಾದಲ್ಲಿ ನಡೆಯಬೇಕಿತ್ತು.

ಬಾಂಗ್ಲಾದೇಶ ಮತ್ತು ಭಾರತ ನಡುವಿನ ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳು ಢಾಕಾದಲ್ಲಿ ನಡೆಯಬೇಕಿತ್ತು. ಆದರೆ ಈಗ ಕೊನೆಯ ಪಂದ್ಯ ಚಿತ್ತಗಾಂಗ್‌ನಲ್ಲಿ ನಡೆಯಲಿದೆ. ಇದಲ್ಲದೇ ಈ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನೂ ಆಯೋಜಿಸಲಾಗುವುದು. ಸರಣಿಯ ಎರಡನೇ ಟೆಸ್ಟ್ ಪಂದ್ಯ ಢಾಕಾದಲ್ಲಿ ನಡೆಯಲಿದೆ. ಡಿಸೆಂಬರ್ 14 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.

ಏಕದಿನ ಸರಣಿಗಾಗಿ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್‌ ಕೀಪರ್), ಇಶಾನ್ ಕಿಶನ್, ಶಾಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.

ಟೆಸ್ಟ್ ಸರಣಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ರವೀಂದ್ರ ಜಡೇಜಾ (ಆಡುವುದು ಅನುಮಾನ), ರವಿಚಂದ್ರನ್ ಅಶ್ವಿನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:58 am, Thu, 24 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ