AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಇಂದಿನಿಂದ ಶುರು

Champions trophy 2025: ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ಚಾಲನೆ ದೊರೆತಿದೆ. ಕರಾಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ನ್ಯೂಝಿಲೆಂಡ್ ತಂಡ ಶುಭಾರಂಭ ಮಾಡಿದೆ. ಇದೀಗ 2ನೇ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಇಂದಿನಿಂದ ಶುರು
Team India
ಝಾಹಿರ್ ಯೂಸುಫ್
|

Updated on: Feb 20, 2025 | 7:18 AM

Share

ಭಾರತ ತಂಡದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಇಂದಿನಿಂದ ಆರಂಭವಾಗಲಿದೆ. ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಲೀಗ್ ಹಂತದ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ. ಇದಾಗ್ಯೂ ಬಾಂಗ್ಲಾದೇಶ್ ತಂಡವನ್ನು ಹಗುರವಾಗಿ ಪರಿಗಣಿಸುವಂತಿಲ್ಲ.

ಏಕೆಂದರೆ ಟೀಮ್ ಇಂಡಿಯಾ ದುಬೈನಲ್ಲಿ ಏಕದಿನ ಪಂದ್ಯವಾಡಿ ವರ್ಷಗಳೇ ಕಳೆದಿವೆ. ಅದರಲ್ಲೂ ಅಲ್ಲಿನ ಪಂದ್ಯಗಳಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುತ್ತದೆ. ಹೀಗಾಗಿ ಭಾರತ ಮತ್ತು ಬಾಂಗ್ಲಾದೇಶ್ ನಡುವಿನ ಪಂದ್ಯದಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.

ಮುಖಾಮುಖಿ ದಾಖಲೆ:

ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಒಟ್ಟು 41 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 32 ಬಾರಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಮ್ಯಾಚ್ ಕಾರಣಾಂತರಗಳಿಂದ ರದ್ದಾಗಿತ್ತು.

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 2 ಗಂಟೆಗೆ ನಡೆಯಲಿದೆ.

ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ?

ಈ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್ ಆ್ಯಪ್ ಹಾಗೂ ವೆಬ್ ಸೈಟ್‌ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಇದನ್ನೂ ಓದಿ: Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ 13 ಆಟಗಾರರು ಔಟ್

ಬಾಂಗ್ಲಾದೇಶ್: ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಸೌಮ್ಯ ಸರ್ಕಾರ್, ತಂಝಿದ್ ಹಸನ್, ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಎಂಡಿ ಮಹ್ಮದ್ ಉಲ್ಲಾ, ಜೇಕರ್ ಅಲಿ ಅನಿಕ್, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ತಸ್ಕಿನ್ ಅಹ್ಮದ್, ಪರ್ವೆಜ್ ನಸ್ಸಾನ್, ತಸ್ಕಿನ್ ಎ. ಸಾಕಿಬ್, ನಹಿದ್ ರಾಣಾ.

Follow Us
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ