AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಅರ್ಷದೀಪ್ ಇನ್, ಬುಮ್ರಾ ಔಟ್..? ಬಾಂಗ್ಲಾ ವಿರುದ್ಧ ಹೇಗಿರಲಿದೆ ಪ್ಲೇಯಿಂಗ್ 11?

India vs Bangladesh Playing XI: ಸೆಪ್ಟೆಂಬರ್ 24 ರಂದು ನಡೆಯುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸೂಪರ್ 4 ಪಂದ್ಯಕ್ಕಾಗಿ ಭಾರತ ತಂಡದ ಸಂಭಾವ್ಯ ಆಡುವ XI ಬಗ್ಗೆ ಚರ್ಚಿಸಲಾಗಿದೆ. ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ, ಇದರಿಂದ ಅರ್ಷದೀಪ್ ಸಿಂಗ್ ಅವರಿಗೆ ಅವಕಾಶ ದೊರೆಯಬಹುದು. ಬುಮ್ರಾ ಅವರ ದುಬಾರಿ ಬೌಲಿಂಗ್ ಮತ್ತು ವಿಕೆಟ್ ಪಡೆಯದಿರುವುದು ಇದಕ್ಕೆ ಕಾರಣ. ಉಳಿದ ತಂಡದಲ್ಲಿ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷಿಸಲಾಗುತ್ತಿಲ್ಲ.

Asia Cup 2025: ಅರ್ಷದೀಪ್ ಇನ್, ಬುಮ್ರಾ ಔಟ್..? ಬಾಂಗ್ಲಾ ವಿರುದ್ಧ ಹೇಗಿರಲಿದೆ ಪ್ಲೇಯಿಂಗ್ 11?
Team India
ಪೃಥ್ವಿಶಂಕರ
|

Updated on: Sep 23, 2025 | 10:24 PM

Share

ಸೆಪ್ಟೆಂಬರ್ 24 ರಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ಸೂಪರ್ 4 ಸುತ್ತಿನ ಎರಡನೇ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ 11 ಹೇಗಿರಲಿದೆ? ತಂಡದಲ್ಲಿ ಯಾವುದೇ ಬದಲಾವಣೆಗಳಾಗುತ್ತವೆಯೇ ? ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಭಾರತ ತಂಡದ ಪ್ಲೇಯಿಂಗ್ 11 ಬಗ್ಗೆ ಯಾವುದೇ ಸುದ್ದಿ ಹೊರಬಿದ್ದಿಲ್ಲವಾದರೂ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಬಹುದು ಎಂದು ವರದಿಯಾಗಿದೆ. ಏಕೆಂದರೆ ಟೀಂ ಇಂಡಿಯಾ ಸೆಪ್ಟೆಂಬರ್ 24, ಸೆಪ್ಟೆಂಬರ್ 26 ರಂದು ಸೂಪರ್ 4 ಸುತ್ತಿವ ಪಂದ್ಯಗಳನ್ನು ಆಡಬೇಕು. ಆ ನಂತರ ಸೆಪ್ಟೆಂಬರ್ 28 ರಂದು ಫೈನಲ್ ಪಂದ್ಯವನ್ನು ಆಡಬೇಕು. ಇದರರ್ಥ ಟೀಂ ಇಂಡಿಯಾ ಆರು ದಿನಗಳಲ್ಲಿ ಮೂರು ಪಂದ್ಯಗಳನ್ನು ಆಡಬೇಕಾಗಿರುವುದರಿಂದ ಬುಮ್ರಾಗೆ ವಿಶ್ರಾಂತಿ ನೀಡಬಹುದು. ಇದಕ್ಕೆ ಪೂರಕವಾಗಿ ಜಸ್ಪ್ರೀತ್ ಬುಮ್ರಾ ಪಾಕಿಸ್ತಾನದ ವಿರುದ್ಧ ತುಂಬಾ ದುಬಾರಿಯಾಗಿದ್ದರು. ಅಲ್ಲದೆ ವಿಕೆಟ್ ಕೂಡ ಪಡೆಯಲಿಲ್ಲ, ಆದ್ದರಿಂದ ಅವರಿಗೆ ವಿಶ್ರಾಂತಿ ನೀಡಬಹುದು.

ಬುಮ್ರಾ ಆಡದಿದ್ದರೆ, ಅರ್ಷ್‌ದೀಪ್​ಗೆ ಅವಕಾಶ?

ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ಆಡದಿದ್ದರೆ , ಅರ್ಷ್‌ದೀಪ್ ಸಿಂಗ್​ಗೆ ಅವಕಾಶ ಸಿಗುವುದು ಖಚಿತ. ಈ ಟೂರ್ನಿಯಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದ ಅರ್ಷ್‌ದೀಪ್ ಓಮನ್ ವಿರುದ್ಧ ಒಂದು ವಿಕೆಟ್ ಕೂಡ ಪಡೆದಿದ್ದರು. ಈಗ ಅವರಿಗೆ ಬಾಂಗ್ಲಾದೇಶ ವಿರುದ್ಧ ಅವಕಾಶ ಸಿಗುತ್ತದೆಯೇ ಎಂದು ಕಾದು ನೋಡಬೇಕಾಗಿದೆ. ಇದಕ್ಕೆ ಪೂರಕವಾಗಿ ಬಾಂಗ್ಲಾ ತಂಡದ ವಿರುದ್ಧದ ಕಳೆದ ಟಿ20 ಸರಣಿಯಲ್ಲಿ ಅವರು ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಹೀಗಾಗಿ ಅವರಿಗೆ ಅವಕಾಶ ಸಿಕ್ಕರೂ ಸಿಗಬಹುದು. ಉಳಿದಂತೆ ಬುಮ್ರಾಗೆ ವಿಶ್ರಾಂತಿ ನೀಡಿರುವುದನ್ನು ಹೊರತುಪಡಿಸಿ, ತಂಡದಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ ದಾಖಲೆ

ಬಾಂಗ್ಲಾದೇಶ ವಿರುದ್ಧ ಭಾರತ ಅದ್ಭುತ ದಾಖಲೆಯನ್ನು ಹೊಂದಿದೆ. ಎರಡೂ ತಂಡಗಳು 17 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಭಾರತ 16 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ಕೇವಲ ಒಂದು ಪಂದ್ಯವನ್ನು ಗೆದ್ದಿದೆ.

ಭಾರತದ ಸಂಭಾವ್ಯ ಆಡುವ XI: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು