Rishabh Pant: ಶತಕದ ಅಂಚಿನಲ್ಲಿ ಎಡವಿದ ಪಂತ್: ರಿಷಭ್-ಅಯ್ಯರ್ 159 ರನ್ಸ್ ಜೊತೆಯಾಟ ಅಂತ್ಯ

India vs Bangladesh 2nd Test: 100 ರನ್​ಗೂ ಮೊದಲೇ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತಕ್ಕೆ ಪಂತ್ ಹಾಗೂ ಶ್ರೇಯಸ್ ಅಯ್ಯರ್ (Shreyas Iyer) 159 ರನ್​ಗಳ ಜೊತೆಯಾಟ ಆಡಿ ತಂಡಕ್ಕೆ ಆಧಾರವಾಗಿ ನಿಂತರು.

Rishabh Pant: ಶತಕದ ಅಂಚಿನಲ್ಲಿ ಎಡವಿದ ಪಂತ್: ರಿಷಭ್-ಅಯ್ಯರ್ 159 ರನ್ಸ್ ಜೊತೆಯಾಟ ಅಂತ್ಯ
Rishabh Pant
Follow us
| Updated By: Vinay Bhat

Updated on:Dec 23, 2022 | 2:43 PM

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ (India vs Bangladesh) ಟಾಪ್ ಆರ್ಡರ್ ಕುಸಿತ ಕಂಡರೂ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಅವರ ಸ್ಫೋಟಕ ಆಟದ ನೆರವಿನಿಂದ ಚೇತರಿಕೆ ಕಂಡಿದೆ. 100 ರನ್​ಗೂ ಮೊದಲೇ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತಕ್ಕೆ ಪಂತ್ ಹಾಗೂ ಶ್ರೇಯಸ್ ಅಯ್ಯರ್ (Shreyas Iyer) 159 ರನ್​ಗಳ ಜೊತೆಯಾಟ ಆಡಿ ತಂಡಕ್ಕೆ ಆಧಾರವಾಗಿ ನಿಂತರು. ಮೊದಲ ದಿನವೇ ಬಾಂಗ್ಲಾ ಪಡೆಯನ್ನು 227 ರನ್​ಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಶುರು ಮಾಡಿದ್ದ ಟೀಮ್ ಇಂಡಿಯಾ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 8 ಓವರ್​ಗಳಿಗೆ 19 ರನ್ ಗಳಿಸಿತ್ತು.

ಎರಡನೇ ದಿನವಾದ ಇಂದು ಬ್ಯಾಟಿಂಗ್ ಮುಂದುವರೆಸಿದ ಟೀಮ್ ಇಂಡಿಯಾ ಪುನಃ ಆರಂಭಿಕ ವೈಫಲ್ಯ ಅನುಭವಿಸಿತು. ತಂಡದ ಮೊತ್ತ 27 ಆಗುವಷ್ಟರಲ್ಲಿ ಕಳಪೆ ಫಾರ್ಮ್​ನಲ್ಲಿರುವ ಕೆಎಲ್ ರಾಹುಲ್ 10 ರನ್​​ಗೆ (45 ಎಸೆತ) ಔಟಾದರು. ಇದರ ಬೆನ್ನಲ್ಲೇ 39 ಎಸೆತಗಳಲ್ಲಿ 20 ರನ್ ಗಳಿಸಿ ಶುಭ್​ಮನ್ ಗಿಲ್ ಕೂಡ ನಿರ್ಗಮಿಸಿದರು. ಈ ಸಂದರ್ಭ ಒಂದಾದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ತಂಡವನ್ನು ಮೇಲೆತ್ತುವ ಪ್ರಯತ್ನ ನಡೆಸಿದರು.

IPL 2023 Mini Auction Live: ಐಪಿಎಲ್ ಮಿನಿ ಹರಾಜು; ಯಾರಾಗ್ತಾರೆ ಕೋಟಿ ವೀರ?

ಇದನ್ನೂ ಓದಿ
Image
Yuzvendra Chahal: ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ: ಇನ್​ಸ್ಟಾದಲ್ಲಿ ವಿಶ್ ಮಾಡಿದ್ದು ಹೇಗೆ ನೋಡಿ
Image
IND vs BAN 2nd Test: ರಾಹುಲ್ ಮತ್ತೊಮ್ಮೆ ವೈಫಲ್ಯ: 100 ರನ್​ಗು ಮೊದಲೇ 4 ವಿಕೆಟ್ ಕಳೆದುಕೊಂಡ ಭಾರತ
Image
IPL Auction Tie Break Rule: ಐಪಿಎಲ್ ಹರಾಜಿನಲ್ಲಿದೆ ಟೈ-ಬ್ರೇಕ್ ರೂಲ್?: ಏನಿದು ನಿಯಮ?, ಇಲ್ಲಿದೆ ಪೂರ್ಣ ಮಾಹಿತಿ
Image
IPL 2023 Mini Auction Live: ಇಂದು ಐಪಿಎಲ್ ಮಿನಿ ಹರಾಜು: ಎಷ್ಟು ಗಂಟೆಗೆ?, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಆದರೆ, ಈ ಜೋಡಿ 34 ರನ್​ಗಳ ಜೊತೆಯಾಟ ಆಡಿತಷ್ಟೆ. ಪೂಜಾರ 55 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರೆ, ಊಟದ ವಿರಾಮದ ಬಳಿಕ ವಿರಾಟ್ ಕೊಹ್ಲಿ 73 ಎಸೆತಗಳಲ್ಲಿ 24 ರನ್​ಗೆ ಬ್ಯಾಟ್ ಕೆಳಗಿಟ್ಟರು. ಈ ಸಂದರ್ಭ 5ನೇ ವಿಕೆಟ್​ಗೆ ಜೊತೆಯಾದ ರಿಷಭ್ ಪಂತ್ ಹಾಗೂ ಶ್ರೇಯಸ್ ಅಯ್ಯರ್ ತಂಡಕ್ಕೆ ಆಧಾರವಾದರು. ಪಂತ್ ತಮ್ಮದೇ ಶೈಲಿಯ ಸ್ಫೋಟಕ ಆಟದ ಮೊರೆಹೋದರೆ, ಅಯ್ಯರ್ ಇವರಿಗೆ ಉತ್ತಮ ಸಾಥ್ ನೀಡಿದರು.

49 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಪಂತ್ ಶತಕದ ಅಂಚಿನಲ್ಲಿ ಎಡವಿದರು. 105 ಎಸೆತಗಳಲ್ಲಿ 7 ಫೋರ್, 5 ಭರ್ಜರಿ ಸಿಕ್ಸರ್​ನೊಂದಿಗೆ 93 ರನ್ ಸಿಡಿಸಿ ಔಟಾದರು. ಇತ್ತ ಅಯ್ಯರ್ ಅರ್ಧಶತಕ ಬಾರಿಸಿದ್ದು ಟೀಮ್ ಇಂಡಿಯಾ ಅಲ್ಪ ಮುನ್ನಡೆ ಸಾಧಿಸಿದೆ.

ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್:

ಎರಡನೇ ಟೆಸ್ಟ್​ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್​ ಗೆದ್ದು ಮೊದಲ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿತ್ತು. ಆದರೆ, ಬಾಂಗ್ಲಾದ ಆರಂಭವು ಉತ್ತಮವಾಗಿರಲಿಲ್ಲ. ಮೊಮಿನುಲ್ ಹಕ್ (84) ಹೊರತುಪಡಿಸಿದರೆ ಯಾವ ಆಟಗಾರರು ಬ್ಯಾಟ್​ ಬೀಸಲು ಸಾಧ್ಯವಾಗಲಿಲ್ಲ. ಹೀಗಾಗಿ 73.5 ಓವರ್‌ಗಳಲ್ಲಿ ಬಾಂಗ್ಲಾ 227 ರನ್‌ಗಳಿಗೆ ಸರ್ವಪತನ ಕಂಡಿತು. ನಜ್ಮುಲ್‌ ಹುಸೇನ್ ಶಾಂಟೊ (25), ಜಾಕಿರ್‌ ಹಸನ್‌(15), ಶಕಿಬ್‌ ಅಲ್‌ ಹಸನ್‌ (16), ಮುಷ್ಫಿಕರ್‌ ರಹೀಮ್‌ (26) ಹಾಗೂ ಲಿಟನ್‌ ದಾಸ್‌ (15) ಬ್ಯಾಟಿಂಗ್‌ನಲ್ಲಿ ನಿರಾಶೆ ಮೂಡಿಸಿದರು. 130 ರನ್‌ಗಳವರೆಗೆ ಕೇವಲ 4 ವಿಕೆಟ್ ಕಳೆದುಕೊಂಡಿದ್ದ ಬಾಂಗ್ಲಾ ತಂಡವು ನಂತರ ನಿಂರತರವಾಗಿ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಲೇ ಸಾಗಿ ಆಲೌಟ್ ಆಯಿತು.

ಭಾರತ ತಂಡದ ಪರ ಶಿಸ್ತಿನ ದಾಳಿ ನಡೆಸಿದ ಉಮೇಶ್ ಯಾದವ್ 15 ಓವರ್​ಗಳನ್ನು ಎಸೆದು 4 ಮೇಡನ್​ ಓವರ್​ಗಳೊಂದಿಗೆ ಕೇವಲ 25 ರನ್‌ ನೀಡಿ 4 ವಿಕೆಟ್ ಕಬಳಿಸಿದರು. ಇವರ ಜೊತೆಗೆ ರವಿಚಂದ್ರನ್ ಅಶ್ವಿನ್ 71 ರನ್ ನೀಡಿ 4 ವಿಕೆಟ್ ಪಡೆದರು. 12 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್‌ಗೆ ಮರಳಿದ ಜಯದೇವ್ ಉನಾದ್ಕತ್ 2 ವಿಕೆಟ್ ಕಬಳಿಸಿದರು. ಎರಡನೇ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಒಂದು ಬದಲಾವಣೆ ತರಲಾಯಿತು. ಕಳೆದ ಪಂದ್ಯದಲ್ಲಿ 8 ವಿಕೆಟ್‌ ಕಬಳಿಸಿದ್ದ ಕುಲ್ದೀಪ್‌ ಯಾದವ್ ಅವರ ಬದಲು ಜಯದೇವ್‌ ಉನಾದ್ಕಟ್‌ಗೆ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಅವಕಾಶ ನೀಡಲಾಯಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Fri, 23 December 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ