AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಏಷ್ಯನ್ ಗೇಮ್ಸ್​ನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಕ್ರಿಕೆಟ್ ತಂಡ: ಒಂದು ಪದಕ ಖಚಿತ

Team India enters Asian Games Mens T20I 2023 Final: ಏಷ್ಯನ್ ಗೇಮ್ಸ್ ಪುರುಷರ ಮೊದಲ ಟಿ20 ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಫೈನಲ್ ತಲುಪಿದೆ. ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಮಿಂಚಿದ ಭಾರತ 9 ವಿಕೆಟ್​ಗಳ ಅಮೋಘ ಗೆಲುವು ಕಂಡಿತು. ಈ ಮೂಲಕ ಏಷ್ಯನ್ ಗೇಮ್ಸ್​ನಲ್ಲಿ ಭಾರತ ಚಿನ್ನ ಅಥವಾ ಬೆಳ್ಳಿ ಪದಕವನ್ನು ಖಚಿತ ಪಡಿಸಿಕೊಂಡಿದೆ.

IND vs BAN: ಏಷ್ಯನ್ ಗೇಮ್ಸ್​ನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಕ್ರಿಕೆಟ್ ತಂಡ: ಒಂದು ಪದಕ ಖಚಿತ
Team India Asian Games
Vinay Bhat
|

Updated on:Oct 06, 2023 | 9:22 AM

Share

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ (Asian Games) ಕ್ರೀಡಾಕೂಟದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ಕ್ರಿಕೆಟ್ ತಂಡ ಫೈನಲ್​ಗೆ ಪ್ರವೇಶ ಪಡೆದಿದೆ. ಇಂದು ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ನಡೆದ ಪುರುಷರ ಮೊದಲ ಟಿ20 ಸೆಮಿಫೈನಲ್ ಪಂದ್ಯದಲ್ಲಿ ಸೈಫ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಫೈನಲ್ ತಲುಪಿತು. ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಮಿಂಚಿದ ಭಾರತ 9 ವಿಕೆಟ್​ಗಳ ಅಮೋಘ ಗೆಲುವು ಕಂಡಿತು. ಈ ಮೂಲಕ ಏಷ್ಯನ್ ಗೇಮ್ಸ್​ನಲ್ಲಿ ಭಾರತ ಚಿನ್ನ ಅಥವಾ ಬೆಳ್ಳಿ ಪದಕವನ್ನು ಖಚಿತ ಪಡಿಸಿಕೊಂಡಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​ಗೆ ಇಳಿದ ಬಾಂಗ್ಲಾ 50 ರನ್​ಗು ಮೊದಲೇ 5 ವಿಕೆಟ್ ಕಳೆದುಕೊಂಡಿತು. ಮೊಹಮ್ಮದುಲ್ ಹಸನ್ 5, ನಾಯಕ ಸೈಫ್ ಹಸನ್ 1 ರನ್ ಗಳಿಸಿದರೆ ಜಾಕಿರ್ ಹಸನ್ ಸೊನ್ನೆ ಸುತ್ತಿದರು. ಪರ್ವೇಜ್ ಹೊಸೈನ್ ಎಮನ್ 23 ರನ್​ಗಳ ಕೊಡುಗೆ ನೀಡಿದರು. ಜೇಕರ್ ಅಲಿ 14 ರನ್ ಗಳಿಸಿದರು. ಉಳಿದ ಬ್ಯಾಟರ್​ಗಳೆಲ್ಲ ಬಂದಷ್ಟೆ ವೇಗದಲ್ಲಿ ಪೆವಿಲಿಯನ್ ಸೇರಿಕೊಂಡರು. ಬಾಂಗ್ಲಾ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 96 ರನ್​ಗಳಿಸಿತಷ್ಟೆ. ಭಾರತ ಪರ ಸಾಯಿ ಕಿಶೋರ್ 3 ವಿಕೆಟ್ ಕಿತ್ತರೆ, ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರು.

PAK vs NED ICC WC Match Preview: ವಿಶ್ವಕಪ್​ನಲ್ಲಿಂದು ಪಾಕಿಸ್ತಾನ-ನೆದರ್ಲೆಂಡ್ಸ್ ಮುಖಾಮುಖಿ: ಬಾಬರ್ ಪಡೆಯ ಮೇಲೆ ಎಲ್ಲರ ಕಣ್ಣು

ಇದನ್ನೂ ಓದಿ
Image
ಶುಭ್​ಮನ್ ಗಿಲ್​ಗೆ ಡೆಂಗ್ಯೂ ಸೋಂಕು ದೃಢ: ಭಾರತಕ್ಕೆ ದೊಡ್ಡ ಆಘಾತ
Image
ಭಾರತದ ಬೌಲಿಂಗ್ ದಾಳಿಗೆ ಬಾಂಗ್ಲಾ ತತ್ತರ: ರುತುರಾಜ್ ಪಡೆಗೆ ಸುಲಭ ಟಾರ್ಗೆಟ್
Image
ಟೀಮ್ ಇಂಡಿಯಾ ಟ್ರೈನಿಂಗ್ ಸೆಷನ್​ನಿಂದ ಬಯಲಾಯಿತು ದೊಡ್ಡ ಸುದ್ದಿ
Image
ವಿಶ್ವಕಪ್​ನಲ್ಲಿಂದು ಪಾಕಿಸ್ತಾನ-ನೆದರ್ಲೆಂಡ್ಸ್ ಮುಖಾಮುಖಿ

ಸುಲಭ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ ಮೊದಲ ಓವರ್​ನಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು. ಕಳೆದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ಅಬ್ಬರಿಸಿದ್ದ ಜೈಸ್ವಾಲ್ ಈ ಬಾರಿ ಸೊನ್ನೆ ಸುತ್ತಿದರು. ಆದರೆ, ಎರಡನೇ ವಿಕೆಟ್​ಗೆ ಜೊತೆಯಾದ ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ತಿಲಕ್ ವರ್ಮಾ ಬೊಂಬಾಟ್ ಬ್ಯಾಟಿಂಗ್ ನಡೆಸಿ ಗೆಲುವು ತಂದುಕೊಟ್ಟರು. 9 ಓವರ್​ಗಳಲ್ಲೇ ಭಾರತ 1 ವಿಕೆಟ್ ನಷ್ಟಕ್ಕೆ 97 ರನ್ ಬಾರಿಸಿ ಜಯ ಸಾದಿಸಿತು. ತಿಲಕ್ ಕೇವಲ 26 ಎಸೆತಗಳಲ್ಲಿ 2 ಫೋರ್, 6 ಸಿಕ್ಸರ್​ನೊಂದಿಗೆ ಅಜೇಯ 55 ರನ್ ಚಚ್ಚಿದರೆ, ಗಾಯಕ್ವಾಡ್ ಅಜೇಯ 40 ರನ್ ಗಳಿಸಿದರು.

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿತ್ತು. ಆವೇಶ್ ಖಾನ್ ಬದಲು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದರು. ಈ ಮೂಲಕ ಶಹ್ಬಾಜ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. 1 ವಿಕೆಟ್ ಕೂಡ ಪಡೆದುಕೊಂಡರು. ಈ ಪಂದ್ಯದಲ್ಲಿ ಸೋತ ಬಾಂಗ್ಲಾದೇಶ ತಂಡ ಸೆಮಿ ಫೈನಲ್-2 ನಲ್ಲಿ ಸೋತ ತಂಡದ ವಿರುದ್ಧ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:18 am, Fri, 6 October 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್