AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs CAN: ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್

T20 World Cup 2024: ಭಾರತ ಮತ್ತು ಕೆನಡಾ ನಡುವಣ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಒಂದು ವೇಳೆ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ ಓವರ್​ಗಳ ಕಡಿತದೊಂದಿಗೆ ಪಂದ್ಯ ಆಯೋಜಿಸಬಹುದು. ಇನ್ನು ಫಲಿತಾಂಶ ನಿರ್ಧರಿಸಬೇಕಿದ್ದರೆ ಕನಿಷ್ಠ 5 ಓವರ್​ಗಳ ಪಂದ್ಯ ನಡೆಯಬೇಕು.

IND vs CAN: ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್
IND vs CAN
ಝಾಹಿರ್ ಯೂಸುಫ್
|

Updated on: Jun 15, 2024 | 7:59 AM

Share

T20 World Cup 2024: ಟಿ20 ವಿಶ್ವಕಪ್​ನ 33ನೇ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಫ್ಲೋರಿಡಾದ ಸೆಂಟ್ರಲ್ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ನಲ್ಲಿ ಇಂದು (ಜೂ.15) ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ಫ್ಲೋರಿಡಾದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಅಕ್ಯುವೆದರ್ ಹವಾಮಾನ ವರದಿ ಪ್ರಕಾರ, ಈ ಪಂದ್ಯದ ಸಮಯದಲ್ಲಿ 35%-45% ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಇಂದು ಫ್ಲೋರಿಡಾದ ಸುತ್ತ ಮುತ್ತ 50% ಗುಡುಗು ಸಹಿತ ಮಳೆಯಾಗಲಿದೆ. ಮಧ್ಯಾಹ್ನದ ಸಮಯದಲ್ಲಿ ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಶೇ.80 ರಷ್ಟು ತೇವಾಂಶವು ಹೊಂದಿರಲಿದೆ ಎಂದು ತಿಳಿಸಿದೆ.

ಗೂಗಲ್ ಹವಾಮಾನ ವರದಿಯು ಬೆಳಿಗ್ಗೆ ಶೇ.30 ರಷ್ಟು ಮಳೆಯಾಗುವ ಸಾಧ್ಯತೆಯನ್ನು ಸೂಚಿಸುತ್ತದೆ. ಇದು ಪಂದ್ಯದ ಉದ್ದಕ್ಕೂ ಸ್ಥಿರವಾಗಿರಲಿದೆ. ಅಂದರೆ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡುವುದು ಖಚಿತ ಎಂದೇ ಹೇಳಬಹುದು.

ಯುಎಸ್​​ಎ-ಐರ್ಲೆಂಡ್ ಪಂದ್ಯ ರದ್ದು:

ಫ್ಲೋರಿಡಾದ ಸೆಂಟ್ರಲ್ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ನಲ್ಲಿ ಶುಕ್ರವಾರ ನಡೆಯಬೇಕಿದ್ದ ಯುಎಸ್​ಎ ಮತ್ತು ಐರ್ಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದೇ ಮೈದಾನದಲ್ಲೇ ಭಾರತ ತಂಡವು ಕೆನಡಾ ವಿರುದ್ಧ ಕಣಕ್ಕಿಳಿಯಬೇಕಿದೆ. ಹೀಗಾಗಿ ಇಂದು ಸಹ ಪಂದ್ಯ ನಡೆಯುವುದು ಅನುಮಾನ ಎಂದೇ ಹೇಳಬಹುದು.

ಭಾರತಕ್ಕೆ ನೋ ಪ್ಲಾಬ್ಲಂ:

ಟೀಮ್ ಇಂಡಿಯಾ ಲೀಗ್ ಹಂತದಲ್ಲಿ ಆಡಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದ್ದು, ಈ ಮೂಲಕ ಒಟ್ಟು 6 ಅಂಕಗಳನ್ನು ಕಲೆಹಾಕಿದೆ. ಈ ಆರು ಅಂಕಗಳೊಂದಿಗೆ ಈಗಾಗಲೇ ಸೂಪರ್-8 ಹಂತಕ್ಕೇರಿದೆ. ಹೀಗಾಗಿ ಕೆನಡಾ ವಿರುದ್ಧದ ಇಂದಿನ ಪಂದ್ಯವು ರದ್ದಾದರೂ ಭಾರತ ತಂಡಕ್ಕೆ ಯಾವುದೇ ತೊಂದರೆಯಿಲ್ಲ.

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಕೆನಡಾ ನಡುವಣ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಒಂದು ವೇಳೆ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ ಓವರ್​ಗಳ ಕಡಿತದೊಂದಿಗೆ ಪಂದ್ಯ ಆಯೋಜಿಸಬಹುದು. ಇನ್ನು ಫಲಿತಾಂಶ ನಿರ್ಧರಿಸಬೇಕಿದ್ದರೆ ಕನಿಷ್ಠ 5 ಓವರ್​ಗಳ ಪಂದ್ಯ ನಡೆಯಬೇಕು. ಈ ಐದು ಓವರ್​ಗಳ ಪಂದ್ಯ ಆಯೋಜನೆ ಕೂಡ ಸಾಧ್ಯವಿಲ್ಲ ಎಂದು ಕಂಡು ಬಂದರೆ ಮಾತ್ರ ಮ್ಯಾಚ್ ಅನ್ನು ಕ್ಯಾನ್ಸಲ್ ಮಾಡಲಾಗುತ್ತದೆ. ಅಲ್ಲದೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕಗಳನ್ನು ಹಂಚಲಾಗುತ್ತದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ನಿಂದ ಗಂಟು ಮೂಟೆ ಕಟ್ಟಿದ ಪಾಕಿಸ್ತಾನ್

ಕೆನಡಾ ತಂಡ: ಆರೋನ್ ಜಾನ್ಸನ್, ನವನೀತ್ ಧಲಿವಾಲ್, ಪರ್ಗತ್ ಸಿಂಗ್, ನಿಕೋಲಸ್ ಕಿರ್ಟನ್, ಶ್ರೇಯಸ್ ಮೋವಾ (ವಿಕೆಟ್ ಕೀಪರ್), ರವೀಂದ್ರಪಾಲ್ ಸಿಂಗ್, ಸಾದ್ ಬಿನ್ ಜಾಫರ್ (ನಾಯಕ), ಕಲೀಂ ಸನಾ, ದಿಲ್ಲನ್ ಹೇಲಿಗರ್, ಜುನೈದ್ ಸಿದ್ದಿಕಿ, ಜೆರೆಮಿ ಗಾರ್ಡನ್, ರಯಾನ್ ಪಠಾಣ್, ರಿಖಿಲ್ ಡಿ. ರಾಗವ್ ಜೋಶಿ, ದಿಲ್‌ಪ್ರೀತ್ ಬಾಜ್ವಾ.

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!