AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಇದು ನಾಚಿಕೆಗೇಡು – ಭಾರತ ಇಂಗ್ಲೆಂಡ್ ಮೊದಲ ಟೆಸ್ಟ್​ ಡ್ರಾಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ

ನಾವು ಆಟದ ಮೇಲೆ ಹಿಡಿತ ಸಾಧಿಸಿದ್ದೇವು. ಅಂದುಕೊಂಡಂತೆ ಉತ್ತಮ ಮುನ್ನಡೆ ಪಡೆದು ಅಂತಿಮ ದಿನದಲ್ಲಿ ಗೆಲುವು ಸಾಧಿಸುವ ನಂಬಿಕೆಯಿತ್ತು. ಆದರೆ, ಪಂದ್ಯ ಮುಗಿಸಲು ಆಗಲಿಲ್ಲ ಎಂಬುದು ನಾಚೆಕೆಗೇಡಿನ ಸಂಗತಿ -

India vs England: ಇದು ನಾಚಿಕೆಗೇಡು – ಭಾರತ ಇಂಗ್ಲೆಂಡ್ ಮೊದಲ ಟೆಸ್ಟ್​ ಡ್ರಾಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ
Virat Kohli
TV9 Web
| Edited By: |

Updated on:Aug 09, 2021 | 8:30 AM

Share

ಸಾಕಷ್ಟು ಕುತೂಹಲ ಕೆರಳಿಸಿದ್ದ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೊದಲ ಟೆಸ್ಟ್ ಪಂದ್ಯ ಯಾವುದೇ ಫಲಿತಾಂಶ ಕಾಣದೆ ಡ್ರಾನಲ್ಲಿ ಕೊನೆಗೊಳಿಸಬೇಕಾಗಿ ಬಂತು. ಅಂತಿಮ ಐದನೇ ದಿನ ಬೆಂಬಿಡದೆ ಕಾಡಿದ ಮಳೆರಾಯ ಆಟಗಾರರನ್ನು ಮೈದಾನಕ್ಕಿಳಿಯಲು ಅವಕಾಶವನ್ನೇ ನೀಡಲಿಲ್ಲ. ಸುಲಭವಾಗಿ ಗೆಲುವು ಸಾಧಿಸಬಹುದಾಗಿದ್ದ ಟೀಮ್ ಇಂಡಿಯಾಕ್ಕೆ ನಿರಾಸೆಯಾಯಿತು. ಈ ಬಗ್ಗೆ ಭಾರತದ ನಾಯಕ ವಿರಾಟ್ ಕೊಹ್ಲಿ (Virat Kohli) ಬೇಸರ ಹೊರಹಾಕಿದ್ದಾರೆ.

ಮೊದಲ ಟೆಸ್ಟ್ ಡ್ರಾ ಎಂದು ಘೋಷಣೆಯಾದ ಬಳಿಕ ಮಾತಾನಡಿದ ವಿರಾಟ್ ಕೊಹ್ಲಿ, “ನಾವು ಪಂದ್ಯದ ಮೂರು ಮತ್ತು ನಾಲ್ಕನೇ ದಿನಗಳಲ್ಲಿ ಮಳೆಯ ನಿರೀಕ್ಷೆಯಲ್ಲಿದ್ದೆವು. ಆದರೆ ಅದು ಐದನೇ ದಿನದಂದು ಮಳೆ ಬರುತ್ತದೆಂಬ ಊಹೆಯೂ ಇರಲಿಲ್ಲ. ಇದು ನಾಚಿಕೆಗೇಡಿನ ಸಂಗತಿ” ಎಂದು ಕೊಹ್ಲಿ ಹೇಳಿದ್ದಾರೆ.

“ನಾವು ಆಟದ ಮೇಲೆ ಹಿಡಿತ ಸಾಧಿಸಿದ್ದೇವು. ಅಂದುಕೊಂಡಂತೆ ಉತ್ತಮ ಮುನ್ನಡೆ ಪಡೆದು ಅಂತಿಮ ದಿನದಲ್ಲಿ ಗೆಲುವು ಸಾಧಿಸುವ ನಂಬಿಕೆಯಿತ್ತು. ಆದರೆ, ಪಂದ್ಯ ಮುಗಿಸಲು ಆಗಲಿಲ್ಲ ಎಂಬುದು ನಾಚೆಕೆಗೇಡಿನ ಸಂಗತಿ. ನಾಲ್ಕನೇ ದಿನದಾಟ ಮುಗಿಯುವ ಹೊತ್ತಿಗೆ ತಂಡದ ಮೊತ್ತ 50ರ ಗಡಿ ದಾಟಬೇಕು ಎಂಬುದು ನಮ್ಮ ಪ್ಲಾನ್ ಆಗಿತ್ತು. ಅವಕಾಶ ಸಿಕ್ಕಾಗ ಬೌಂಡರಿ ಬಾರಿಸಿ ಅದರಲ್ಲಿ ಯಶಸ್ವಿಯಾದೆವು.”

“ಲೋವರ್ ಆರ್ಡರ್​ನಲ್ಲಿ ಬ್ಯಾಟಿಂಗ್ ಮಾಡುವವರು ಸಾಕಷ್ಟು ಶ್ರಮ ವಹಿಸಿದರು. ಪಂದ್ಯ ಆರಂಭಕ್ಕೂ ಮುನ್ನ ಪ್ರತಿದಿನ ಅವರು ನೆಟ್​ನಲ್ಲಿ ಸಾಕಷ್ಟು ಅಭ್ಯಾಸ ನಡೆಸುತ್ತಿದ್ದರು. ಅದಕ್ಕೆ ಪ್ರತಿಫಲವಾಗಿ 95 ರನ್​ಗಳ ಮುನ್ನಡೆಯನ್ನೂ ನಾವು ಸಾಧಿಸಿದೆವು. ಬ್ಯಾಟ್ಸ್​ಮನ್​ಗಳ ಪ್ರದರ್ಶನ ನನಗೆ ತೃಪ್ತಿ ತಂದಿದೆ” ಎಂದು ಕೊಹ್ಲಿ ಹೇಳಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 65.4 ಓವರ್​ನಲ್ಲಿ 183 ರನ್​ಗೆ ಆಲೌಟ್ ಆಯಿತು. ಭಾರತ ಕೆ. ಎಲ್ ರಾಹುಲ್ ಅವರ 84 ಹಾಗೂ ರವೀಂದ್ರ ಜಡೇಜಾ ಅವರ 56 ರನ್​ಗಳ ನೆರವಿನಿಂದ 278 ರನ್ ಬಾರಿಸಿತು. 95 ರನ್​ಗಳ ಹಿನ್ನಡಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್​ಗೆ ನಾಯಕ ರೂಟ್ ಶತಕ ಸಿಡಿಸಿ ಮತ್ತೆ ತಂಡಕ್ಕೆ ಆಸರೆಯಾದರು. 172 ಎಸೆತಗಳಲ್ಲಿ 109 ರನ್ ಗಳಿಸಿದ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಇಂಗ್ಲೆಂಡ್ 303 ರನ್ ಗಳಿಸಿ ಭಾರತಕ್ಕೆ 209 ರನ್​ಗಳ ಟಾರ್ಗೆಟ್ ನೀಡಿತು.

ಈ ಗುರಿ ಬೆನ್ನಟ್ಟಿದ ಭಾರತ ನಾಲ್ಕನೆ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 52 ರನ್ ಗಳಿಸಿತ್ತು. ರೋಹಿತ್ ಶರ್ಮಾ ಹಾಗೂ ಚೇತೇಶ್ವರ್ ಪೂಜಾರ ತಲಾ 12 ರನ್ ಗಳಿಸಿ ಅಂತಿಮ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಭಾರತದ ಗೆಲುವಿಗೆ 157 ರನ್​ಗಳ ಅವಶ್ಯಕತೆಯಿತ್ತು. ಆದರೆ, ಎಡಬಿಡದೆ ಸುರಿದ ಮಳೆಯು ಮೊದಲ ಟೆಸ್ಟ್ ನಲ್ಲಿ ಭಾರತದ ಕೈಯಿಂದ ಗೆಲುವನ್ನು ಕಸಿದುಕೊಂಡಿತು. ಒಂದೂ ಎಸೆತ ಕಾಣದೆ ರದ್ದಾದ ಕಾರಣ ಉಭಯ ತಂಡಗಳು ತಲಾ 4 ಅಂಕವನ್ನು ಹಂಚಿಕೊಂಡಿವೆ. ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 12ಕ್ಕೆ ಆರಂಭವಾಗಲಿದ್ದು ಆಗಸ್ಟ್ 16ರ ವರೆಗೆ ನಡೆಯಲಿದೆ.

India vs England: ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್​ ಯಾವಾಗ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಮಾಹಿತಿ

ಒಲಿಂಪಿಕ್ಸ್​ನಲ್ಲಿ ಶೂನ್ಯ ಸಾಧನೆ; ಬದುಕು ನೀಡಿದ ತನ್ನ ದೇಶವನ್ನೇ ಗೇಲಿ ಮಾಡಿದ ಪಾಕಿಸ್ತಾನದ ಮಾಧ್ಯಮಗಳು! ಹಳೆಯ ವಿಡಿಯೋ ಈಗ ವೈರಲ್

(India vs England 2021 Its a shame Team India Captain Virat Kohli after Trent Bridge draw)

Published On - 8:29 am, Mon, 9 August 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?