AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ರೂಟ್ ಅಜೇಯ 99 ರನ್; 2ನೇ ಏಕದಿನ ಗೆದ್ದ ಇಂಗ್ಲೆಂಡ್

England Beats India in 2nd ODI: ಕಾರ್ಡಿಫ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 4 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ಜೋ ರೂಟ್ ಅವರ ಅಜೇಯ 99 ರನ್ ಇಂಗ್ಲೆಂಡ್‌ಗೆ ವಿಜಯ ತಂದುಕೊಟ್ಟಿತು. ಭಾರತ 233 ರನ್ ಗಳಿಸಿತ್ತು, ಆದರೆ ಇಂಗ್ಲೆಂಡ್ ಇದನ್ನು ಯಶಸ್ವಿಯಾಗಿ ಬೆನ್ನಟ್ಟಿತು. ಈ ಗೆಲುವಿನೊಂದಿಗೆ, ಮೂರು ಪಂದ್ಯಗಳ ಸರಣಿಯು ಈಗ 1-1 ಸಮಬಲದಲ್ಲಿದೆ.

IND vs ENG: ರೂಟ್ ಅಜೇಯ 99 ರನ್; 2ನೇ ಏಕದಿನ ಗೆದ್ದ ಇಂಗ್ಲೆಂಡ್
Joe Root
ಪೃಥ್ವಿಶಂಕರ
|

Updated on:Jul 17, 2026 | 1:38 AM

Share

ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ (India vs England ODI) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ಗೆಲುವು ಸಾಧಿಸಿದೆ. ಇಂಗ್ಲೆಂಡ್‌ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಜೋ ರೂಟ್ ಅಜೇಯ 99 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪೂರ್ಣ 50 ಓವರ್​ಗಳನ್ನು ಆಡಲು ಸಾಧ್ಯವಾಗದೆ 44 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 233 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ 6 ವಿಕೆಟ್‌ಗಳನ್ನು ಕಳೆದುಕೊಂಡು ಗೆಲುವಿನ ದಡ ಮುಟ್ಟಿತು. ಈ ಗೆಲುವಿನ ಮೂಲಕ ಇಂಗ್ಲೆಂಡ್‌ ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.

ಕೊಹ್ಲಿ- ಶ್ರೇಯಸ್ ಅರ್ಧಶತಕ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ರೋಹಿತ್ ಶರ್ಮಾ ಮತ್ತು ನಾಯಕ ಶುಭಮನ್ ಗಿಲ್ ಮೊದಲ ವಿಕೆಟ್‌ಗೆ 44 ರನ್‌ಗಳ ಜೊತೆಯಾಟ ನೀಡಿದರು. ಶುಭ್ಮ​ನ್ ಗಿಲ್ 31 ರನ್‌ಗಳಿಗೆ ಔಟಾದರೆ, ರೋಹಿತ್ ಶರ್ಮಾ ಕೂಡ ವಿಶೇಷವಾದದ್ದೇನೂ ಮಾಡಲು ಸಾಧ್ಯವಾಗಲಿಲ್ಲ. ರೋಹಿತ್ ಶರ್ಮಾ 47 ಎಸೆತಗಳಲ್ಲಿ 26 ರನ್‌ಗಳಿಗೆ ಔಟಾದರು. ಎರಡನೇ ವಿಕೆಟ್‌ಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 60 ರನ್‌ಗಳ ಜೊತೆಯಾಟವಾಡಿದರು. ಕೆಎಲ್ ರಾಹುಲ್ ಬದಲಿಗೆ ಬಂದ ಇಶಾನ್ ಕಿಶನ್ ಅವರ ಇನ್ನಿಂಗ್ಸ್ ಕೇವಲ 1 ರನ್‌ಗೆ ಕೊನೆಗೊಂಡಿತು. ಅದಾದ ನಂತರ, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ತಂಡದ ಇನ್ನಿಂಗ್ಸ್ ಕಟ್ಟಿದರು. ಇವರಿಬ್ಬರು ನಾಲ್ಕನೇ ವಿಕೆಟ್‌ಗೆ 67 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಆದರೆ ವಿರಾಟ್ ಕೊಹ್ಲಿ ಔಟಾಗುವುದರ ಜೊತೆಗೆ ತಂಡದ ಬ್ಯಾಟಿಂಗ್ ಕುಸಿಯಲು ಪ್ರಾರಂಭಿಸಿತು.

ಅದರಲ್ಲೂ ಕಳೆದ ಪಂದ್ಯದಲ್ಲಿ ಮಿಂಚಿದ್ದ ಆಲ್‌ರೌಂಡರ್ ಈ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದರು. ಕಳೆದ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ 5 ಎಸೆತಗಳಲ್ಲಿ 2 ರನ್​ಗಳಿಸಿ ಔಟಾದರೆ, ಅಕ್ಷರ್ ಪಟೇಲ್ ಅವರ ಇನ್ನಿಂಗ್ಸ್ ಕೂಡ 1 ರನ್​ಗೆ ಅಂತ್ಯವಾಯಿತು. ಆ ಬಳಿಕ ಬಂದ ಶಿವಂ ದುಬೆಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಗುರ್ನೂರ್ ಬ್ರಾರ್ 7 ರನ್ ಗಳಿಸಿ ಟೆಂಟ್‌ಗೆ ಮರಳಿದರೆ, ಪ್ರಸಿದ್ಧ್ ಕೃಷ್ಣಗೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಆದರೆ ಜಸ್ಪ್ರೀತ್ ಬುಮ್ರಾ 13 ಎಸೆತಗಳಲ್ಲಿ ಅಜೇಯ 20 ರನ್ ಗಳಿಸುವ ಮೂಲಕ ತಂಡದ ಸ್ಕೋರ್ ಹೆಚ್ಚಿಸಿದರು.

ಇಂಗ್ಲೆಂಡ್​ಗೆ ಆರಂಭಿಕ ಆಘಾತ

ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್​ಗೆ ಉತ್ತಮ ಆರಂಭ ಸಿಗಲಿಲ್ಲ. ಖಾತೆ ತೆರೆಯುವುದಕ್ಕೂ ಮುನ್ನವೇ ಆರಂಭಿಕ ಡಕೆಟ್​ ಮೊದಲ ಎಸೆತದಲ್ಲೇ ಔಟಾದರು. ಬೆಥೆಲ್ ಅವರ ಇನ್ನಿಂಗ್ಸ್ ಕೂಡ 4 ರನ್​​ಗಳಿಗೆ ಅಂತ್ಯವಾಯಿತು. ನಾಯಕ ಬ್ರೂಕ್ ಕೂಡ 16 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಕರನ್ 26 ರನ್​ಗಳ ಇನ್ನಿಂಗ್ಸ್ ಆಡುವುದರ ಜೊತೆಗೆ ರೂಟ್​ಗೆ ಸಾಥ್ ನೀಡಿದರು. ಇದಾದ ಬಳಿಕ ಜೊತೆಯಾದ ವಿಲ್ ಜ್ಯಾಕ್ಸ್ ಹಾಗೂ ರೂಟ್ ತಂಡವನ್ನು ಸಂಕಷ್ಟದಿಂದ ಹೊರತಂದರು. ಇವರಿಬ್ಬರ ನಡುವೆ ಅರ್ಧಶತಕದ ಜೊತೆಯಾಟವೂ ಮೂಡಿಬಂತು.

IND vs ENG: ಕೈಕೊಟ್ಟ ಆಲ್‌ರೌಂಡರ್​ಗಳು; ಅಲ್ಪ ಮೊತ್ತಕ್ಕೆ ಕುಸಿದ ಟೀಂ ಇಂಡಿಯಾ

ರೂಟ್ ಅಜೇಯ 99 ರನ್

ಜ್ಯಾಕ್ಸ್ 30 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, 8ನೇ ಕ್ರಮಾಂಕದಲ್ಲಿ ಬಂದ ಗಸ್ ಅಟ್ಕಿನ್ಸನ್, ರೂಟ್ ಜೊತೆಗೂಡಿ ತಂಡಕ್ಕೆ ಜಯ ತಂದುಕೊಟ್ಟರು. ಅಂತಿಮವಾಗಿ ರೂಟ್ 133 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇಯ 99 ರನ್ ಬಾರಿಸಿ ಕೇವಲ 1 ರನ್ನಿಂದ ಶತಕ ವಂಚಿತರಾದರು. ಇತ್ತ ಟೀಂ ಇಂಡಿಯಾ ಪರ ಬ್ರಾರ್ 2 ವಿಕೆಟ್ ಪಡೆದರೆ ಉಳಿದವರೆಲ್ಲರಿಗೂ ತಲಾ ಒಂದೊಂದು ವಿಕೆಟ್ ಸಿಕ್ಕವು. ಆದಾಗ್ಯೂ ಯಾರಿಗೂ ಇಂಗ್ಲೆಂಡ್ ಗೆಲುವನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:34 am, Fri, 17 July 26

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?