India vs England 2nd T20 Playing 11: ಭಾರತ ಮೊದಲು ಬ್ಯಾಟಿಂಗ್; 4 ಬದಲಾವಣೆ, ಯಾರಿಗೆಲ್ಲ ಛಾನ್ಸ್?

India vs England 2nd T20 Playing 11: ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟೀಂ ಇಂಡಿಯಾದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಲಾಗಿದ್ದು, ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ತಂಡಕ್ಕೆ ಮರಳುತ್ತಿದ್ದಾರೆ.

India vs England 2nd T20 Playing 11: ಭಾರತ ಮೊದಲು ಬ್ಯಾಟಿಂಗ್; 4 ಬದಲಾವಣೆ, ಯಾರಿಗೆಲ್ಲ ಛಾನ್ಸ್?
IND vs ENG 1st T20I
Follow us
| Updated By: ಪೃಥ್ವಿಶಂಕರ

Updated on:Jul 09, 2022 | 6:55 PM

ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್‌ನಲ್ಲಿ ಟಿ20 ಸರಣಿ ಗೆಲ್ಲುವ ತವಕದಲ್ಲಿದೆ. ಟೀಂ ಇಂಡಿಯಾಗೆ ಎಡ್ಜ್‌ಬಾಸ್ಟನ್ ಟಿ20 ಪಂದ್ಯ ಗೆಲ್ಲಲೇಬೇಕಾಗಿದೆ. ಭಾರತ ಮತ್ತು ಇಂಗ್ಲೆಂಡ್ ( India and England) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ. ಮೊದಲ ಪಂದ್ಯ ಗೆದ್ದಿದ್ದ ಟೀಂ ಇಂಡಿಯಾ ಇದೀಗ ಈ ಪಂದ್ಯದೊಂದಿಗೆ ಸರಣಿ ಗೆಲ್ಲುವ ಅವಕಾಶ ಪಡೆದುಕೊಂಡಿದೆ. ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟೀಂ ಇಂಡಿಯಾದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಲಾಗಿದ್ದು, ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ( Virat Kohli and Rishabh Pant) ತಂಡಕ್ಕೆ ಮರಳುತ್ತಿದ್ದಾರೆ.

ಉತ್ತಮ ಪ್ರದರ್ಶನದ ಹೊರತಾಗಿಯೂ ಹೂಡಾ ಔಟ್

ಕಳೆದ ಕೆಲವು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ದೀಪಕ್ ಹೂಡಾ ಈ ಪಂದ್ಯದಿಂದ ಹೊರಗುಳಿಯಬೇಕಾಯಿತು. ಏಕೆಂದರೆ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಹೂಡಾ ಹೊರತಾಗಿ ಇಶಾನ್ ಕಿಶನ್ ಕೂಡ ಹೊರಗೆ ಕುಳಿತುಕೊಳ್ಳಬೇಕಾಗಿ ಬಂದಿದೆ.

ಇದನ್ನೂ ಓದಿ
Image
Sri Lanka Protests: ಪ್ರತಿಭಟನೆಗೆ ಧುಮುಕಿದ ಲಂಕಾ ಕ್ರಿಕೆಟಿಗ ಜಯಸೂರ್ಯ; ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ
Image
ವಿಶ್ರಾಂತಿ, ವಿಶ್ರಾಂತಿ, ವಿಶ್ರಾಂತಿ… ಉಫ್! ವಿಂಡೀಸ್ ಬಳಿಕ ಮತ್ತೊಂದು ಸರಣಿಗೆ ರೋಹಿತ್, ಕೊಹ್ಲಿ, ಬುಮ್ರಾ ಅಲಭ್ಯ

ಬೌಲಿಂಗ್​ನಲ್ಲಿ ಈ ಬದಲಾವಣೆ

ಮೊದಲ ಪಂದ್ಯದಿಂದ ಹೊರಗುಳಿದಿದ್ದ ಕೊಹ್ಲಿ ಮತ್ತು ಪಂತ್ ಹೊರತುಪಡಿಸಿ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಈ ಪಂದ್ಯದಲ್ಲಿ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಮತ್ತು ಅದೇ ಸಂಭವಿಸಿದೆ. ಅಕ್ಷರ್ ಪಟೇಲ್ ಬದಲಿಗೆ ಜಡೇಜಾ ಅವರನ್ನು ಸೇರಿಸಿಕೊಳ್ಳಲಾಗಿದ್ದು, ಕಳೆದ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಯುವ ವೇಗಿ ಅರ್ಷದೀಪ್ ಸಿಂಗ್ ಕೂಡ ಹೊರಗುಳಿಯಬೇಕಾಯಿತು.

ನಾವು ಇಂಗ್ಲೆಂಡ್ ಬಗ್ಗೆ ಮಾತನಾಡುವುದಾದರೆ, ಕಳೆದ ಪಂದ್ಯದಲ್ಲಿ ನಿಷ್ಪರಿಣಾಮಕಾರಿಯಾಗಿದ್ದ ರೀಸ್ ಟೋಪ್ಲಿ ಮತ್ತು ಟಿಮಲ್ ಮಿಲ್ಸ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಸ್ಥಾನದಲ್ಲಿ 34 ವರ್ಷದ ರಿಚರ್ಡ್ ಗ್ಲೀಸನ್ ಮತ್ತು ಆಲ್ ರೌಂಡರ್ ಡೇವಿಡ್ ವಿಲ್ಲಿ ತಂಡಕ್ಕೆ ಬಂದಿದ್ದಾರೆ.

ಉಭಯ ತಂಡಗಳು ಹೀಗಿವೆ

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್

ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್ (ನಾಯಕ), ಡೇವಿಡ್ ಮಲನ್, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕರನ್, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ರಿಚರ್ಡ್ ಗ್ಲೀಸನ್, ಮ್ಯಾಥ್ಯೂ ಪಾರ್ಕಿನ್ಸನ್

Published On - 6:40 pm, Sat, 9 July 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ