AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟಾಸ್ ಗೆದ್ದ ಭಾರತ: ವೈಭವ್ ಸೂರ್ಯವಂಶಿ ಪಾದಾರ್ಪಣೆ

India vs England 2nd T20I: ಭಾರತ ಮತ್ತು ಇಂಗ್ಲೆಂಡ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 18 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಇಂಗ್ಲೆಂಡ್ ಗೆದ್ದಿರುವುದು ಕೇವಲ 12 ಪಂದ್ಯಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಉಭಯ ತಂಡಗಳು 32ನೇ ಬಾರಿ ಮುಖಾಮುಖಿಯಾಗಿದೆ.

IND vs ENG: ಟಾಸ್ ಗೆದ್ದ ಭಾರತ: ವೈಭವ್ ಸೂರ್ಯವಂಶಿ ಪಾದಾರ್ಪಣೆ
Team India
ಝಾಹಿರ್ ಯೂಸುಫ್
|

Updated on: Jul 04, 2026 | 6:34 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟಿ20 ಪಂದ್ಯ ಶುರುವಾಗಿದೆ. ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅದರಂತೆ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ.

ವೈಭವ್ ಎಂಟ್ರಿ:

ಈ ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ ಭಾರತದ ಪರ ಅಂತಾರಾಷ್ಟ್ರೀಯ ಪಂದ್ಯವಾಡಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಇತ್ತ ವೈಭವ್​ ಸೂರ್ಯವಂಶಿ ಅವಕಾಶ ಸಿಕ್ಕ ಕಾರಣ, ಸಂಜು ಸ್ಯಾಮ್ಸನ್ ಅವರನ್ನು ಆಡುವ ಬಳದಿಂದ ಕೈ ಬಿಡಲಾಗಿದೆ.

ಇಂಗ್ಲೆಂಡ್ (ಪ್ಲೇಯಿಂಗ್ XI): ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಜೋಶ್ ಟಂಗ್.

ಸಮಬಲದಲ್ಲಿರುವ ಸರಣಿ:

ಐದು ಮ್ಯಾಚ್​ಗಳ ಈ ಸರಣಿಯ ಮೊದಲ ಪಂದ್ಯವು ರದ್ದಾಗಿರುವ ಕಾರಣ ಸರಣಿ ಈಗ 0-0 ಅಂತರದಿಂದ ಸಮಬಲದಲ್ಲಿದೆ. ಅಂದರೆ ಈ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ ಎರಡು ಗೆಲುವು ದಾಖಲಿಸಿದರೆ ಸಾಕು. ಹೀಗಾಗಿ ಉಭಯ ತಂಡಗಳು ದ್ವಿತೀಯ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಇಂಗ್ಲೆಂಡ್ ನಡುವಣ ದ್ವಿತೀಯ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋಹಾಟ್‌ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

  • ನೇರ ಪ್ರಸಾರ (ಟಿವಿ): ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ.
  • ಲೈವ್ ಸ್ಟ್ರೀಮಿಂಗ್ (ಡಿಜಿಟಲ್): ಜಿಯೋಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

ಇದನ್ನೂ ಓದಿ: ದಿಗ್ಗಜರೊಂದಿಗೆ ಹೋಲಿಸಿ, ವೈಭವ್​ಗೆ ಕಿವಿಮಾತು ಹೇಳಿದ ಕಪಿಲ್ ದೇವ್!

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್, ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

Follow Us
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ