AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್​ ಮೇಲೆ ಪ್ರೇಕ್ಷಕರಿಂದ ಬಾಟಲ್ ಕಾರ್ಕ್ ದಾಳಿ: ತಿರುಗಿಸಿ ಹೊಡಿ ಎಂದ ಕಿಂಗ್ ಕೊಹ್ಲಿ

India vs England 2nd Test: ಈ ಹಿಂದೆ ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳೆ ಮೊಹಮ್ಮದ್ ಸಿರಾಜ್ ಹಾಗೂ ವಾಷಿಂಗ್ಟನ್ ಸುಂದರ್ ಅವರು ಆಸೀಸ್ ಪ್ರೇಕ್ಷಕರ ಜನಾಂಗೀಯ ನಿಂದನೆಗೆ ಗುರಿಯಾಗಿದ್ದರು.

KL Rahul: ಕೆಎಲ್ ರಾಹುಲ್​ ಮೇಲೆ ಪ್ರೇಕ್ಷಕರಿಂದ ಬಾಟಲ್ ಕಾರ್ಕ್ ದಾಳಿ: ತಿರುಗಿಸಿ ಹೊಡಿ ಎಂದ ಕಿಂಗ್ ಕೊಹ್ಲಿ
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 14, 2021 | 7:31 PM

ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ (India vs England 2nd Test) ನಡುವಣ 2ನೇ ಟೆಸ್ಟ್ ಪಂದ್ಯದ ವೇಳೆ ಅಹಿತಕರ ಘಟನೆ ನಡೆದಿದೆ. ಪಂದ್ಯದ ಮೂರನೇ ದಿನದಾಟದ ವೇಳೆ ಪ್ರೇಕ್ಷಕರು ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ (KL Rahul) ಅವರ ಮೇಲೆ ಶಾಂಪೇನ್ ಮುಚ್ಚಳ ಹಾಗೂ ಇನ್ನಿತರ ವಸ್ತುಗಳನ್ನು ಎಸೆದಿದ್ದಾರೆ. ರಾಹುಲ್​ ಬೌಂಡರಿ ಲೈನ್ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಇದೀಗ ಇಂಗ್ಲೆಂಡ್ ಪ್ರೇಕ್ಷಕರು ಟೀಮ್ ಇಂಡಿಯಾ ಆಟಗಾರನ ಮೇಲೆ ಎಸೆದ ಬಾಟಲ್ ಕಾರ್ಕ್ (ಶಾಂಪೇನ್ ಬಾಟಲ್ ಮುಚ್ಚಳ)​ ಹಾಗೂ ಇನ್ನಿತರ ವಸ್ತುಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪಂದ್ಯದ 69ನೇ ಓವರ್‌ನಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ಮತ್ತು ಜಾನಿ ಬೈರ್‌ಸ್ಟೊ ಬ್ಯಾಟಿಂಗ್ ಮಾಡುತ್ತಿದ್ದ ಈ ಘಟನೆ ಸಂಭವಿಸಿದೆ. ಈ ವೇಳೆ ಮೊಹಮ್ಮದ್ ಶಮಿ ಬೌಲಿಂಗ್ ಮಾಡುತ್ತಿದ್ದರು. ಅತ್ತ ಬೌಂಡರಿ ಲೈನ್​ನಲ್ಲಿ ರಾಹುಲ್ ಫೀಲ್ಡಿಂಗ್​ನಲ್ಲಿದ್ದರು. ಈ ವೇಳೆ ಪ್ರೇಕ್ಷಕರ ಸ್ಟ್ಯಾಂಡ್‌ನಿಂದ ಇಂಗ್ಲೆಂಡ್​ ಪ್ರೇಕ್ಷಕರು ರಾಹುಲ್ ಮೇಲೆ ಶಾಂಪೇನ್ ಕಾರ್ಕ್ಸ್ ಎಸೆದರು. ಆರಂಭದಲ್ಲಿ ರಾಹುಲ್ ಅದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಸತತವಾಗಿ ದಾಳಿಯಾಗುತ್ತಿದ್ದಂತೆ ಟೀಮ್ ಇಂಡಿಯಾ ಇತರೆ ಆಟಗಾರರು ಈ ದಾಳಿಯನ್ನು ಗಮನಿಸಿದರು.

ಅದರಲ್ಲೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ತಿರುಗಿ ಹೊಡೆಯುವಂತೆ ಕೆಎಲ್ ರಾಹುಲ್​ಗೆ ಸನ್ನೆ ಮಾಡುತ್ತಿರುವುದು ಕಂಡು ಬಂತು. ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಫೀಲ್ಡ್ ಅಂಪೈರ್​ಗಳಾದ ಮೈಕೆಲ್ ಗೌಗ್ ಮತ್ತು ರಿಚರ್ಡ್ ಇಲ್ಲಿಂಗ್‌ವರ್ತ್ ಅವರಿಗೆ ದೂರ ನೀಡಿದರು.

ಇದೀಗ ಇಂಗ್ಲೆಂಡ್ ಪ್ರೇಕ್ಷಕರ ದುರ್ವತನೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಕೆಎಲ್ ರಾಹುಲ್ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ 129 ರನ್​ ಬಾರಿಸಿರುವುದೇ ಇಂಗ್ಲೆಂಡ್ ಅಭಿಮಾನಿಗಳ ಹತಾಶೆಗೆ ಕಾರಣ ಎನ್ನಲಾಗುತ್ತಿದೆ. ಈ ಹಿಂದೆ ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳೆ ಮೊಹಮ್ಮದ್ ಸಿರಾಜ್ ಹಾಗೂ ವಾಷಿಂಗ್ಟನ್ ಸುಂದರ್ ಅವರು ಆಸೀಸ್ ಪ್ರೇಕ್ಷಕರ ಜನಾಂಗೀಯ ನಿಂದನೆಗೆ ಗುರಿಯಾಗಿದ್ದರು. ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾ ಆಟಗಾರರು ಪ್ರೇಕ್ಷಕರ ದುರ್ವತನೆಗೆ ಗುರಿಯಾಗಿದ್ದಾರೆ. ಒಟ್ಟಿನಲ್ಲಿ ಜಂಟಲ್​ಮ್ಯಾನ್ ಗೇಮ್ ಎನಿಸಿಕೊಂಡಿರುವ ಕ್ರಿಕೆಟ್ ಅಂಗಳದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಮಾತ್ರ ಖೇದಕರ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್: ಟೀಮ್ ಇಂಡಿಯಾ- ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ – ರೋರಿ ಬರ್ನ್ಸ್, ಡೊಮ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್, ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್, ಮೊಯೀನ್ ಅಲಿ, ಸ್ಯಾಮ್ ಕರನ್, ಓಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಅಂಡರ್ಸನ್

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

ಇದನ್ನೂ ಓದಿ: ಇವರ ಬ್ಯಾಟಿಂಗ್ ಮುಂದೆ, ಗೇಲ್-ಎಬಿಡಿ-ಸೆಹ್ವಾಗ್ ಏನೂ ಅಲ್ಲ: ವಿಶ್ವದ ಅತೀ ವೇಗದ ಶತಕದ ಸರದಾರ

ಇದನ್ನೂ ಓದಿ: Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

(India vs England 2nd Test: Bottle corks hurled at KL Rahul by crowd at Lord’s)

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ