AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಇಂಗ್ಲೆಂಡ್ 3ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

India vs England 3rd T20I: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ ಮಳೆಯ ಕಾರಣ ರದ್ದಾಗಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದೆ. ಇದೀಗ ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ಟೀಮ್ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಜಯ ಸಾಧಿಸಲೇಬೇಕು.

ಭಾರತ vs ಇಂಗ್ಲೆಂಡ್ 3ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
Ind Vs EngImage Credit source: BCCI
ಝಾಹಿರ್ ಯೂಸುಫ್
|

Updated on:Jul 08, 2026 | 1:45 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯ ಮೊದಲೆರಡು ಪಂದ್ಯಗಳು ಮುಗಿವೆ. ಐದು ಮ್ಯಾಚ್​ಗಳ ಈ ಸರಣಿಯ ಮೊದಲ ಪಂದ್ಯವು ಮಳೆಗೆ ಆಹುತಿಯಾಗಿತ್ತು. ಇನ್ನು ಮ್ಯಾಂಚೆಸ್ಟರ್​ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ನಾಟಿಂಗ್​ಹ್ಯಾಮ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

  • ಭಾರತ ಮತ್ತು ಇಂಗ್ಲೆಂಡ್​ ನಡುವಣ 3ನೇ ಟಿ20 ಪಂದ್ಯ ಮಂಗಳವಾ (ಜು.7) ನಡೆಯಲಿದೆ.
  • ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ 3ನೇ ಟಿ20 ಪಂದ್ಯ ಜರುಗಲಿದೆ.
  • ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 10:00 ಗಂಟೆಗೆ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋಹಾಟ್‌ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

  • ನೇರ ಪ್ರಸಾರ (ಟಿವಿ): ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ.
  • ಲೈವ್ ಸ್ಟ್ರೀಮಿಂಗ್ (ಡಿಜಿಟಲ್): ಜಿಯೋಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್.

ಟ್ರೆಂಟ್ ಬ್ರಿಡ್ಜ್ ಪಿಚ್​:

ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿನ ಪಿಚ್​ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ನೀಡುತ್ತದೆ. ಹೀಗಾಗಿ ಈ ಪಂದ್ಯದಲ್ಲೂ ರನ್ ಮಳೆ ಹರಿಯುವ ನಿರೀಕ್ಷೆಯಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯವು ರಾತ್ರಿ 10 ಗಂಟೆಗೆ ಆರಂಭವಾಗುವುದರಿಂದ ಕ್ರಿಕೆಟ್ ಪ್ರೇಮಿಗಳಿಗೆ ತಡರಾತ್ರಿಯವರೆಗೆ ಭರ್ಜರಿ ಮನರಂಜನೆ ಸಿಗುವುದು ಖಚಿತ.

ಉಭಯ ತಂಡಗಳು:

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್, ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಅಪ್ಪಳಿಸಿದ ತಂದೆಯ ನಿಧನದ ಸುದ್ದಿ..!

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Published On - 2:55 pm, Sun, 5 July 26

Follow Us
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ