AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಇಂಗ್ಲೆಂಡ್ 4ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

India vs England 3rd T20I: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ ಮಳೆಯ ಕಾರಣ ರದ್ದಾಗಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಹಾಗೂ ತೃತೀಯ ಮ್ಯಾಚ್​ನಲ್ಲಿ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದೆ. ಇದೀಗ ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ಟೀಮ್ ಇಂಡಿಯಾ ಕೊನೆಯ ಎರಡು ಟಿ20 ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

ಭಾರತ vs ಇಂಗ್ಲೆಂಡ್ 4ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
IND vs ENGImage Credit source: BCCI
ಝಾಹಿರ್ ಯೂಸುಫ್
|

Updated on: Jul 08, 2026 | 2:18 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೂರು ಮ್ಯಾಚ್​ಗಳು ಮುಗಿದಿದೆ. ಈ ಸರಣಿಯ ಮೊದಲ ಪಂದ್ಯವು ಮಳೆಗೆ ಆಹುತಿಯಾದರೆ, ದ್ವಿತೀಯ ಮತ್ತು ತೃತೀಯ ಪಂದ್ಯಗಳನ್ನು ಇಂಗ್ಲೆಂಡ್ ತಂಡ ಗೆದ್ದುಕೊಂಡಿದೆ. ಈ ಗೆಲುವುಗಳೊಂದಿಗೆ ಆಂಗ್ಲರ ಪಡೆ 5 ಮ್ಯಾಚ್​ಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇತ್ತ ಈ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ ಟೀಮ್ ಇಂಡಿಯಾ ಮುಂದಿನ ಎರಡು ಪಂದ್ಯಗಳಲ್ಲೂ ಜಯ ಸಾಧಿಸಲೇಬೇಕು.

ಅದರಲ್ಲೂ ಟೀಮ್ ಇಂಡಿಯಾ ಪಾಲಿಗೆ ನಾಲ್ಕನೇ ಮ್ಯಾಚ್ ನಿರ್ನಾಯಕ. ಜುಲೈ 9 ರಂದು ನಡೆಯಲಿರುವ ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

  • ಭಾರತ ಮತ್ತು ಇಂಗ್ಲೆಂಡ್​ ನಡುವಣ 4ನೇ ಟಿ20 ಪಂದ್ಯ ಗುರುವಾರ (ಜು.9) ನಡೆಯಲಿದೆ.
  • ಬ್ರಿಸ್ಟಲ್​ನ ಸೀಟ್ ಯುನಿಕ್ ಸ್ಟೇಡಿಯಂ ನಲ್ಲಿ ಈ ಮ್ಯಾಚ್ ಜರುಗಲಿದೆ.
  • ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 10:00 ಗಂಟೆಗೆ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋಹಾಟ್‌ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

  • ನೇರ ಪ್ರಸಾರ (ಟಿವಿ): ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ.
  • ಲೈವ್ ಸ್ಟ್ರೀಮಿಂಗ್ (ಡಿಜಿಟಲ್): ಜಿಯೋಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್.

ಬ್ರಿಸ್ಟಲ್​ ಪಿಚ್ ರಿಪೋರ್ಟ್:

ಬ್ರಿಸ್ಟಲ್‌ನ ಸೀಟ್ ಯುನಿಕ್ ಸ್ಟೇಡಿಯಂ ಪಿಚ್ ಪ್ರಮುಖವಾಗಿ ಬ್ಯಾಟಿಂಗ್‌ಗೆ ಸಹಕಾರಿ. ಈ ಮೈದಾನದ ಪಿಚ್ ಸಾಮಾನ್ಯವಾಗಿ ಫ್ಲಾಟ್ ಆಗಿರುತ್ತದೆ. ಅಂದರೆ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟರ್‌ಗಳು ಸುಲಭವಾಗಿ ದೊಡ್ಡ ಸಿಕ್ಸರ್ ಮತ್ತು ಬೌಂಡರಿಗಳನ್ನು ಬಾರಿಸಬಹುದು.

ಹಾಗೆಯೇ ಪಂದ್ಯದ ಆರಂಭಿಕ ಓವರ್‌ಗಳಲ್ಲಿ ಹೊಸ ಚೆಂಡಿನಲ್ಲಿ ವೇಗದ ಬೌಲರ್‌ಗಳಿಗೆ ಉತ್ತಮ ಬೌನ್ಸ್ ಮತ್ತು ಸ್ವಿಂಗ್ ಸಿಗುವ ಸಾಧ್ಯತೆ ಇರುತ್ತದೆ.

ಇನ್ನು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಇಲ್ಲಿನ ಸಣ್ಣ ಬೌಂಡರಿಗಳು ಮತ್ತು ಫ್ಲಾಟ್ ಪಿಚ್‌ನಿಂದಾಗಿ ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಸಾಕಷ್ಟು ಕಷ್ಟಪಡಬೇಕಾಗುತ್ತದೆ. ಹೀಗಾಗಿ ನಾಲ್ಕನೇ ಮ್ಯಾಚ್​ನಲ್ಲೂ ರನ್​ ಮಳೆಯನ್ನು ನಿರೀಕ್ಷಿಸಬಹುದು.

ಉಭಯ ತಂಡಗಳು:

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್, ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

ಇದನ್ನೂ ಓದಿ: ಅರ್ಜೆಂಟೀನಾ ಪರ ‘ಆಡುತ್ತಿರುವ’ ರೆಫರಿ… ಗಂಭೀರ ಆರೋಪ!

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!