AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಇಂದಿನಿಂದ ಭಾರತ-ಇಂಗ್ಲೆಂಡ್ 4ನೇ ಟೆಸ್ಟ್: ಎಲ್ಲಿ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಸಂಪೂರ್ಣ ಮಾಹಿತಿ

ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ಉಪ ನಾಯಕ ಅಜಿಂಕ್ಯಾ ರಹಾನೆ ತಮ್ಮ ಘನತೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಇಶಾಂತ್ ಶರ್ಮಾ ಬೌಲಿಂಗ್ ಕೂಡ ಸದ್ದು ಮಾಡುತ್ತಿಲ್ಲ. ರವಿಚಂದ್ರನ್ ಅಶ್ವಿನ್ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂಬ ಕೂಗು ಜೋರಾಗಿದೆ.

India vs England: ಇಂದಿನಿಂದ ಭಾರತ-ಇಂಗ್ಲೆಂಡ್ 4ನೇ ಟೆಸ್ಟ್: ಎಲ್ಲಿ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಸಂಪೂರ್ಣ ಮಾಹಿತಿ
India vs England
TV9 Web
| Edited By: |

Updated on:Sep 02, 2021 | 7:23 AM

Share

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಬಹುನಿರೀಕ್ಷಿತ ನಾಲ್ಕನೇ ಟೆಸ್ಟ್ (4th Test) ಪಂದ್ಯ ಇಂದಿನಿಂದ ಆರಂಭವಾಗಿಲಿದೆ. ಮೂರನೇ ಟೆಸ್ಟ್​ನಲ್ಲಿ 78 ರನ್​ಗೆ ಕುಸಿದು ಹೀನಾಯ ಸೋಲು ಕಂಡಿರುವ ಟೀಮ್ ಇಂಡಿಯಾಕ್ಕೆ (Team India) ಈ ಪಂದ್ಯ ಮುಖ್ಯವಾಗಿದೆ. ಅನೇಕ ತಪ್ಪುಗಳನ್ನು ಸರಿಪಡಿಸಿ ಗೆಲುವಿನ ಟ್ರ್ಯಾಕ್​ಗೆ ಮರಳಬೇಕಾದ ಅನಿವಾರ್ಯತೆ ಇದೆ. ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಕೊಹ್ಲಿ ಪಡೆಯ ಬ್ಯಾಟ್ಸ್​ಮನ್​ಗಳು ಲಯಕಂಡುಕೊಳ್ಳಬೇಕಿದೆ.

ಲಾರ್ಡ್ಸ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಳಿಕ ಲೀಡ್ಸ್‌ನಲ್ಲಿ ಭಾರತ ತೋರಿದ ಕೆಟ್ಟ ನಿರ್ವಹಣೆ ಸಾಕಷ್ಟು ನಿರಾಸೆ ಮೂಡಿಸಿತ್ತು. ಮೊದಲ ದಿನವೇ ಅಲ್ಪಮೊತ್ತಕ್ಕೆ ಕುಸಿದರೂ ಪಂದ್ಯದ 3ನೇ ದಿನ ಭಾರತ ದಿಟ್ಟ ಪ್ರತಿರೋಧ ತೋರಿತ್ತು. ಆದರೆ 4ನೇ ದಿನ ಮತ್ತೆ ದಿಢೀರ್ ಕುಸಿದ ಪರಿಣಾಮ ಸೋಲಿಗೆ ಶರಣಾಗಬೇಕಾಯಿತು. ಈ ಮೂಲಕ ಇಂಗ್ಲೆಂಡ್ ಸರಣಿಯಲ್ಲಿ 1-1 ಅಂತರದ ಸಮಬಲ ಸಾಧಿಸಿತು.

ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ಉಪ ನಾಯಕ ಅಜಿಂಕ್ಯಾ ರಹಾನೆ ತಮ್ಮ ಘನತೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಇಶಾಂತ್ ಶರ್ಮಾ ಬೌಲಿಂಗ್ ಕೂಡ ಸದ್ದು ಮಾಡುತ್ತಿಲ್ಲ. ರವಿಚಂದ್ರನ್ ಅಶ್ವಿನ್ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂಬ ಕೂಗು ಜೋರಾಗಿದೆ. ಇದರ ನಡುವೆ ಇಂಜುರಿಯಿಂದ ಬಳಲುತ್ತಿದ್ದ ರವೀಂದ್ರ ಜಡೇಜಾ ಗುಣಮುಖರಾಗಿದ್ದಾರೆ. ಹೀಗೆ ಭಾರತಕ್ಕೆ ಪ್ಲೇಯಿಂಗ್ 11 ಆಡಿಸುವುದೇ ಬಹುದೊಡ್ಡ ಚಾಜೆಂಜ್ ಆಗಿದೆ.

ಇದರ ನಡುವೆ ಮೀಸಲು ಆಟಗಾರರಾಗಿ ಕಳೆದ 3 ತಿಂಗಳಿನಿಂದ ಭಾರತ ತಂಡದ ಜತೆಗಿರುವ ಕರ್ನಾಟಕದ ವೇಗಿ ಪ್ರಸಿದ್ಧಕೃಷ್ಣ ಪ್ರಧಾನ ಟೆಸ್ಟ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಕಾರ್ಯದೊತ್ತಡ ತಗ್ಗಿಸಲು ಬುಮ್ರಾ, ಶಮಿ ಅಥವಾ ಸಿರಾಜ್‌ಗೆ ವಿಶ್ರಾಂತಿ ನೀಡಿದರೆ ನಾಲ್ಕನೇ ಅಥವಾ ಐದನೇ ಟೆಸ್ಟ್‌ನಲ್ಲಿ ಪ್ರಸಿದ್ಧಕೃಷ್ಣ ಆಡುವ ಬಳಗದಲ್ಲೂ ಕಾಣಿಸಿಕೊಳ್ಳುವ ನಿರೀಕ್ಷೆ ಇದೆ.

ಇತ್ತ ಇಂಗ್ಲೆಂಡ್ ಮೊದಲ ಮೂರು ಟೆಸ್ಟ್​ಗಿಂತ ಈಗ ಮತ್ತಷ್ಟು ಬಲಿಷ್ಠವಾಗಿದೆ. ತಂಡದಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದು, ಹೊಸ ಆಟಗಾರರನ್ನು ಸೇರಿಸಿಕೊಂಡಿದೆ. ಹ್ಯಾಟ್ರಿಕ್ ಸೆಂಚುರಿ ಬಾರಿಸಿ ಭರ್ಜರಿ ಫಾರ್ಮ್​ನಲ್ಲಿರುವ ನಾಯಕ ಜೋ ರೂಟ್ ಅವರೇ ಆಂಗ್ಲರ ಬಹುದೊಡ್ಡ ಆಸ್ತಿ. ಈಗಾಗಲೇ 500 ರನ್‌ ಗಡಿ ದಾಟಿರುವ ರೂಟ್‌ ಏಕಾಂಗಿಯಾಗಿ ತಂಡವನ್ನು ಮೇಲೆತ್ತಬಲ್ಲ ಸಾಹಸಿ. ರೂಟ್‌ ಸ್ಪಿನ್‌ ನಿಭಾಯಿಸುವಲ್ಲಿ ತುಸು ಹಿಂದೆ ಎಂಬುದು ರಹಸ್ಯವೇನಲ್ಲ. ಆಗ ಅಶ್ವಿ‌ನ್‌ ಸೇರ್ಪಡೆ ಹೆಚ್ಚು ಅರ್ಥಪೂರ್ಣವೆನಿಸಲಿದೆ.

ಭಾರತ – ಇಂಗ್ಲೆಂಡ್ 4ನೇ ಟೆಸ್ಟ್ ಪಂದ್ಯ ಎಲ್ಲಿ?:

ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಲಂಡನ್​ನ ಕೆನ್ನಿಂಗಸ್ಟನ್ ಓವಲ್​ ಮೈದಾನದಲ್ಲಿ ನಡೆಯಲಿದೆ.

ಎಷ್ಟು ಗಂಟೆಗೆ ಆರಂಭ?:

ಭಾರತದ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.

ಓವಲ್‌ನಲ್ಲಿ ಭಾರತ ಇದುವರೆಗೆ 13 ಟೆಸ್ಟ್ ಪಂದ್ಯಗಳನ್ನು ಆಡಿದ್ದು 1ರಲ್ಲಿ ಮಾತ್ರ ಗೆದ್ದು, 5ರಲ್ಲಿ ಸೋತಿದೆ. 7 ಟೆಸ್ಟ್ ಡ್ರಾಗೊಂಡಿದೆ. 1971ರಲ್ಲಿ ಆಡಿದ ಓವಲ್ ಟೆಸ್ಟ್‌ನಲ್ಲಿ ಜಯಿಸಿದ್ದ ಭಾರತ, ಇಲ್ಲಿ ಆಡಿದ ಕೊನೇ ಮೂರೂ (2011, 2014, 2018) ಟೆಸ್ಟ್‌ಗಳಲ್ಲಿ ಸೋಲು ಅನುಭವಿಸಿದೆ.

IPL 2022: ಐಪಿಎಲ್‌ನಲ್ಲಿ 2 ಹೊಸ ತಂಡಗಳ ಖರೀದಿಗಾಗಿ ಅರ್ಜಿ ಆಹ್ವಾನಿಸಿದ ಬಿಸಿಸಿಐ; ಮೂಲ ಬೆಲೆ ಎಷ್ಟು ಸಾವಿರ ಕೋಟಿ ಗೊತ್ತಾ?

ರಾಹುಲ್ ದ್ರಾವಿಡ್ ಗರಡಿ ಹುಡುಗನ ಆರ್ಭಟ: ಎದುರಾಳಿ ತಂಡ 69 ರನ್​ಗೆ ಆಲೌಟ್

(India vs England 4th Test Preview Virat Kohli India Look To Fight Back After Big Defeat In Leeds)

Published On - 7:22 am, Thu, 2 September 21

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ