AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕುಲ್ದೀಪ್ ಕಮಾಲ್: ಇಂಗ್ಲೆಂಡ್ ಆಲೌಟ್

India vs England, 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕು ಪಂದ್ಯಗಳು ಮುಗಿದಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಇದೀಗ ಧರ್ಮಶಾಲಾದಲ್ಲಿ ಐದನೇ ಪಂದ್ಯ ನಡೆಯುತ್ತಿದೆ.

IND vs ENG: ಕುಲ್ದೀಪ್ ಕಮಾಲ್: ಇಂಗ್ಲೆಂಡ್ ಆಲೌಟ್
ಟೀಮ್ ಇಂಡಿಯಾ
TV9 Web
| Edited By: |

Updated on: Mar 07, 2024 | 2:46 PM

Share

ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಝಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 64 ರನ್ ಪೇರಿಸಿದ ಬಳಿಕ ಡಕೆಟ್ (27) ಕುಲ್ದೀಪ್ ಯಾದವ್​ಗೆ ವಿಕೆಟ್ ಒಪ್ಪಿಸಿದರು.

ಇದರ ಬೆನ್ನಲ್ಲೇ ಒಲೀ ಪೋಪ್ (11) ವಿಕೆಟ್ ಪಡೆಯುವಲ್ಲಿ ಕುಲ್ದೀಪ್ ಯಾದವ್ ಯಶಸ್ವಿಯಾದರು. ಇದಾಗ್ಯೂ ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ಝಾಕ್ ಕ್ರಾಲಿ ಆಕರ್ಷಕ ಅರ್ಧಶತಕ ಬಾರಿಸಿದರು.

ಈ ಹಂತದಲ್ಲಿ ಮತ್ತೆ ದಾಳಿಗಿಳಿದ ಕುಲ್ದೀಪ್ ಯಾದವ್ ಡೇಂಜರಸ್ ಬ್ಯಾಟರ್ ಝಾಕ್ ಕ್ರಾಲಿ (79) ಯನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರ ಬೆನ್ನಲ್ಲೇ ಜಾನಿ ಬೈರ್​ಸ್ಟೋವ್ (29) ಹಾಗೂ ಜೋ ರೂಟ್ (26) ವಿಕೆಟ್ ಒಪ್ಪಿಸಿದರು.

ಕೇವಲ 175 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಇಂಗ್ಲೆಂಡ್ ತಂಡಕ್ಕೆ ಆಸರೆಯಾಗಲು ಈ ಹಂತದಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್​ ಕಣಕ್ಕಿಳಿದರು. ಆದರೆ ಕುಲ್ದೀಪ್ ಯಾದವ್ ಎಸೆದ ಮ್ಯಾಜಿಕಲ್ ಡೆಲಿವರಿಯನ್ನು ಗುರುತಿಸುವಲ್ಲಿ ಎಡವಿದ ಸ್ಟೋಕ್ಸ್​ (0) ಶೂನ್ಯಕ್ಕೆ ಔಟಾಗಿ ಬಂದ ವೇಗದಲ್ಲೇ ಹಿಂತಿರುಗಿದರು. ಈ ವಿಕೆಟ್​ನೊಂದಿಗೆ ಕುಲ್ದೀಪ್ ಯಾದವ್ 5 ವಿಕೆಟ್​ಗಳ ಸಾಧನೆ ಮಾಡಿದರು.

ಆ ಬಳಿಕ ಬಂದ ಟಾಮ್ ಹಾರ್ಟ್ಲಿ (6) ಹಾಗೂ ಮಾರ್ಕ್​ ವುಡ್​ನ (0) ಔಟ್ ಮಾಡುವಲ್ಲಿ ರವಿಚಂದ್ರನ್ ಅಶ್ವಿನ್ ಯಶಸ್ವಿಯಾದರು. ಅಂತಿಮವಾಗಿ ಇಂಗ್ಲೆಂಡ್ ತಂಡವು 218 ರನ್​ಗಳಿಸಿ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಉತ್ತಮ ಸ್ಪಿನ್ ದಾಳಿ ಸಂಘಟಿಸಿದ ಕುಲ್ದೀಪ್ ಯಾದವ್ 5 ವಿಕೆಟ್ ಕಬಳಿಸಿದರೆ, ರವಿಚಂದ್ರನ್ ಅಶ್ವಿನ್ 4 ವಿಕೆಟ್ ಪಡೆದು ಮಿಂಚಿದರು.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಝಾಕ್ ಕ್ರಾಲಿ, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್, ಜೇಮ್ಸ್ ಅ್ಯಂಡರ್ಸನ್, ಮಾರ್ಕ್ ವುಡ್.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್