AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 5th Test: ಇಂಗ್ಲೆಂಡ್​ಗೆ ಭರ್ಜರಿ ಜಯ: ಕಮರಿದ ಸರಣಿ ಗೆಲ್ಲುವ ಟೀಮ್ ಇಂಡಿಯಾ ಕನಸು

India vs England 5th Test: ಈ ಸರಣಿಯು ಕಳೆದ ವರ್ಷ ನಡೆದ ಭಾರತ-ಇಂಗ್ಲೆಂಡ್ ನಡುವಣ ಸರಣಿಯ ಕೊನೆಯ ಪಂದ್ಯವಾಗಿದೆ. ಅಂದರೆ 5 ಪಂದ್ಯಗಳ ಸರಣಿಯ ಮೊದಲ 4 ಪಂದ್ಯಗಳು ಈಗಾಗಲೇ ಮುಗಿದಿದೆ.

India vs England 5th Test: ಇಂಗ್ಲೆಂಡ್​ಗೆ ಭರ್ಜರಿ ಜಯ: ಕಮರಿದ ಸರಣಿ ಗೆಲ್ಲುವ ಟೀಮ್ ಇಂಡಿಯಾ ಕನಸು
India vs England 5th Test
TV9 Web
| Edited By: |

Updated on: Jul 05, 2022 | 4:31 PM

Share

India vs England 5th Test: ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಮೈದಾನದಲ್ಲಿ ನಡೆದ ಭಾರತದ (England vs India) ವಿರುದ್ದ 5ನೇ ಟೆಸ್ಟ್​​ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ವಿಶೇಷ ಎಂದರೆ ಟೀಮ್ ಇಂಡಿಯಾ ನೀಡಿ 378 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತುವ ಮೂಲಕ ಇಂಗ್ಲೆಂಡ್ ಹೊಸ ಇತಿಹಾಸ ನಿರ್ಮಿಸಿದೆ. ಏಕೆಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂಗ್ಲೆಂಡ್ ತಂಡವು 2ನೇ ಇನಿಂಗ್ಸ್​ನಲ್ಲಿ ಇಷ್ಟೊಂದು ಬೃಹತ್ ಮೊತ್ತವನ್ನು ಚೇಸ್ ಮಾಡಿರಲಿಲ್ಲ. ಇದೀಗ 378 ರನ್​ಗಳನ್ನು ಬೆನ್ನತ್ತುವ ಮೂಲಕ ಬೆನ್​ ಸ್ಟೋಕ್ಸ್ ಪಡೆ ಐತಿಹಾಸಿಕ ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ ರಿಷಭ್ ಪಂತ್ (146) ಹಾಗೂ ರವೀಂದ್ರ ಜಡೇಜಾ (104) ಅವರ ಶತಕದ ನೆರವಿನಿಂದ 416 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡದ ಪರ ಜಾನಿ ಬೈರ್​ಸ್ಟೋವ್​ (106) ಮಾತ್ರ ಶತಕ ಬಾರಿಸಿದ್ದರು. ಈ ಭರ್ಜರಿ ಶತಕದ ಹೊರತಾಗಿಯೂ ಇಂಗ್ಲೆಂಡ್ ಕೇವಲ 284 ರನ್​ಗಳಿಗೆ ಆಲೌಟ್ ಆಗಿತ್ತು.

ಮೊದಲ ಇನಿಂಗ್ಸ್​ನಲ್ಲಿ 132 ರನ್​ಗಳ ಮುನ್ನಡೆ ಪಡೆದ ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ ಮುಗ್ಗರಿಸಿತು. ಪರಿಣಾಮ 4ನೇ ದಿನದಾಟದಲ್ಲಿ ಭಾರತ ತಂಡವು ಕೇವಲ 245 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ 378 ರನ್​ಗಳ ಟಾರ್ಗೆಟ್ ಪಡೆದ ಇಂಗ್ಲೆಂಡ್ ತಂಡವು 4ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 259 ರನ್​ ಕಲೆಹಾಕಿ ಗೆಲುವನ್ನು ಖಚಿತಪಡಿಸಿಕೊಂಡಿದ್ದರು.

ಅದರಂತೆ ಐದನೇ ದಿನದಾಟದಲ್ಲಿ 136 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಜೋ ರೂಟ್ ಬ್ಯಾಟ್ ಮೇಲೆಕ್ಕತ್ತಿದ್ದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ಜಾನಿ ಬೈರ್​ಸ್ಟೋವ್ ಕೂಡ 138 ಎಸೆತಗಳಲ್ಲಿ ಸೆಂಚುರಿ ಸಿಡಿಸಿದರು. ಪರಿಣಾಮ ಕೊನೆಯ ದಿನದಾಟದ ಮೊದಲ ಸೆಷನ್​ನಲ್ಲೇ ಇಂಗ್ಲೆಂಡ್ ತಂಡವು 378 ರನ್​ಗಳ ಟಾರ್ಗೆಟ್ ಬೆನ್ನತ್ತಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಈ ಗೆಲುವಿನೊಂದಿಗೆ ಈ ಸರಣಿಯು ಸಮಬಲದಲ್ಲಿ ಅಂತ್ಯಗೊಂಡಿದೆ.

ಇದನ್ನೂ ಓದಿ
Image
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
Image
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Image
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

ಏಕೆಂದರೆ ಈ ಸರಣಿಯು ಕಳೆದ ವರ್ಷ ನಡೆದ ಭಾರತ-ಇಂಗ್ಲೆಂಡ್ ನಡುವಣ ಸರಣಿಯ ಕೊನೆಯ ಪಂದ್ಯವಾಗಿದೆ. ಅಂದರೆ 5 ಪಂದ್ಯಗಳ ಸರಣಿಯ ಮೊದಲ 4 ಪಂದ್ಯಗಳು ಈಗಾಗಲೇ ಮುಗಿದಿದೆ. ಇನ್ನು ಐದನೇ ಪಂದ್ಯವನ್ನು ಕೊರೋನಾ ಕಾರಣದಿಂದಾಗಿ ಈ ವರ್ಷಕ್ಕೆ ಮುಂದೂಡಲಾಗಿತ್ತು. ಅದರಂತೆ ಇದೀಗ ಐದನೇ ಟೆಸ್ಟ್ ಪಂದ್ಯವನ್ನು ಆಡಲಾಗಿತ್ತು.

ಅತ್ತ ಮೊದಲ 4 ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು. ಅಂದರೆ ನ್ಯಾಟಿಂಗ್​ಹ್ಯಾಮ್​ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯವು ಮಳೆಯ ಕಾರಣ ಡ್ರಾನಲ್ಲಿ ಅಂತ್ಯವಾಗಿತ್ತು. ಇದಾದ ಬಳಿಕ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ನಡೆದ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ 151 ರನ್​ಗಳ ಐತಿಹಾಸಿಕ ಗೆಲುವು ದಾಖಲಿಸಿತ್ತು.

ಇನ್ನು ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ತಂಡವು ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತು. ಓವಲ್​ ಮೈದಾನದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ 157 ರನ್​ಗಳ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಹೊಂದಿತ್ತು. ಇದೀಗ 5ನೇ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್​ಗಳಿಂದ ಟೀಮ್ ಇಂಡಿಯಾವನ್ನು ಮಣಿಸಿ ಇಂಗ್ಲೆಂಡ್ ತಂಡವು ಸರಣಿಯನ್ನು 2-2 ಅಂತರದಲ್ಲಿ ಸಮಬಲಗೊಳಿಸಿದೆ.

ಇದರೊಂದಿಗೆ ಇಂಗ್ಲೆಂಡ್​ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಟೀಮ್ ಇಂಡಿಯಾ 15 ವರ್ಷಗಳ ಕನಸು ಕೂಡ ಕಮರಿದೆ. ಭಾರತ ತಂಡವು ಕೊನೆಯ ಬಾರಿಗೆ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಗೆದ್ದಿದ್ದು 2007 ರಲ್ಲಿ, ಇದಾದ ಬಳಿಕ ಆಂಗ್ಲರ ನೆಲದಲ್ಲಿ ಭಾರತ ತಂಡಕ್ಕೆ ಐತಿಹಾಸಿಕ ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಈ ಬಾರಿ ಅಂತಹದೊಂದು ಭರವಸೆ ಮೂಡಿಸಿದರೂ, ಅಂತಿಮ ಪಂದ್ಯದಲ್ಲಿ ಸೋಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ಡ್ರಾನೊಂದಿಗೆ ಅಂತ್ಯಗೊಳಿಸಿದೆ.

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ