AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravi Shastri: ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ: ರವಿಶಾಸ್ತ್ರಿಗೆ ಮತ್ತೆ ಪಾಸಿಟಿವ್, 5ನೇ ಟೆಸ್ಟ್​ನಿಂದ ಹೊರಕ್ಕೆ

Ravi Shastri Corona Positive: ನಾಲ್ಕನೇ ಟೆಸ್ಟ್ ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾ ಐದನೇ ಟೆಸ್ಟ್ ಪಂದ್ಯಕ್ಕಾಗಿ ಮ್ಯಾಂಚೆಸ್ಟರ್​ಗೆ ತೆರಳಲಿದೆ. ರವಿಶಾಸ್ತ್ರಿ 14 ದಿನಗಳ ಕ್ವಾರಂಟೈನ್​ನಲ್ಲಿ ಇರಬೇಕಿರುವುದರಿಂದ ಇವರನ್ನು ಬಿಟ್ಟು ಕೊಹ್ಲಿ ಪಡೆ ಪ್ರಯಾಣ ಬೆಳೆಸಲಿದೆ.

Ravi Shastri: ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ: ರವಿಶಾಸ್ತ್ರಿಗೆ ಮತ್ತೆ ಪಾಸಿಟಿವ್, 5ನೇ ಟೆಸ್ಟ್​ನಿಂದ ಹೊರಕ್ಕೆ
Ravi Shastri and Virat Kohli
TV9 Web
| Edited By: |

Updated on: Sep 06, 2021 | 11:56 AM

Share

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ನಾಲ್ಕನೇ ಟೆಸ್ಟ್​ನ (4th Test) ಅಂತಿಮ ದಿನದಾಟ ಶುರುವಾಗುವ ಮುನ್ನವೇ ಕೊಹ್ಲಿ ಪಡೆಗೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ (Ravi Shastri) ಅವರಿಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್ (Corona Positive) ಕಂಡುಬಂದಿದ್ದು, 14 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ಈ ಮೂಲಕ ಸೆಪ್ಟೆಂಬರ್ 10 ರಿಂದ ಆರಂಭವಾಗಲಿರುವ ಐದನೇ ಟೆಸ್ಟ್​ನಿಂದ ರವಿಶಾಸ್ತ್ರಿ ದೂರ ಉಳಿಯಲಿದ್ದಾರೆ. ತಂಡದ ಮುಖ್ಯ ಕೋಚ್​ನ ಅನುಪಸ್ಥಿತಿಯಲ್ಲಿ ಭಾರತ ಕಣಕ್ಕಿಳಿಯಬೇಕಾದ ಅನಿವಾರ್ಯತೆ ಎದುರಾಗಿರುವುದು ದೊಡ್ಡ ಹಿನ್ನಡೆಯಾಗಿದೆ.

ಇನ್ನೂ ಮುನ್ನೆಚ್ಚರಿಕೆ ಕ್ರಮವಾಗಿ ರವಿಶಾಸ್ತ್ರಿ ಜೊತೆ ನಿಕಟ ಸಂಪರ್ಕದಲ್ಲಿದ್ದ ಸಪೋರ್ಟ್ ಸ್ಟಾಫ್​ನ ಮೂವರನ್ನೂ ಐಸೋಲೇಶನ್​ಗೆ ಕಳುಹಿಸಲಾಗಿದೆ. ಇವರಲ್ಲಿ ಬೌಲಿಂಗ್ ಕೋಚ್ ಆಗಿರುವ ಭರತ್ ಅರುಣ್ ಕೂಡ ಇದ್ದಾರೆ. ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಮತ್ತು ಪ್ರಧಾನ ಫಿಸಿಯೋ ಥೆರಪಿಸ್ಟ್ ನಿತಿನ್ ಪಟೇಲ್ ಅವರು ಕೂಡ ಐಸೋಲೇಶನ್​ನಲ್ಲಿ ಇದ್ದಾರೆ. ಹೀಗಾಗಿ ಪ್ರಮುಖ ಮಾರ್ಗದರ್ಶಕರ ಅನುಪಸ್ಥಿತಿ ಭಾರತಕ್ಕೆ ಕಾಡಲಿದೆ.

ಆರಂಭದಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್​ನಲ್ಲಿ ರವಿಶಾಸ್ತ್ರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ನಂತರ ನೆಗೆಟಿವ್ ಬಂದಿತ್ತು. ಭಾನುವಾರ ಮತ್ತೆ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ. ಹೀಗಾಗಿ 14 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಬೇಕಾಗಿದೆ ಎಂದು ಇನ್​ಸೈಡ್ ಸ್ಪೋರ್ಟ್ಸ್​ ವರದಿ ಮಾಡಿದೆ.

ಭಾರತ ತಂಡದ ಎಲ್ಲಾ ಸದಸ್ಯರಿಗೆ ಆರ್​ಟಿ-ಪಿಸಿಆರ್ ಟೆಸ್ಟ್ ಮಾಡಲಾಗಿದೆ. ಭರತ್ ಅರುಣ್ ಅವರಿಗೆ ಸೋಂಕು ದೃಢಪಡದಿದ್ದರೂ ಐಸೋಲೇಶನ್​ನಲ್ಲಿ ಇರಬೇಕಾದ ಸಂದರ್ಭ ಬಂದದ್ದು ಇದು ಎರಡನೇ ಬಾರಿ. ಸದ್ಯ ಯಾವ ಆಟಗಾರರಿಗೂ ರ್ಯಾಪಿಡ್ ಟೆಸ್ಟ್​ನಲ್ಲಿ ಪಾಸಿಟಿವ್ ಬಂದಿಲ್ಲ. ಮೂರನೇ ಬಾರಿ ನಡೆಸಲಾದ ರ್ಯಾಪಿಡ್ ಟೆಸ್ಟ್​ನಲ್ಲಿ ಬೇರೆಲ್ಲಾ ಆಟಗಾರರು ಮತ್ತು ಸಿಬ್ಬಂದಿಗೆ ನೆಗಟಿವ್ ರಿಪೋರ್ಟ್ ಬಂದಿದೆ.

ಸದ್ಯ ಸಾಗುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾ ಐದನೇ ಟೆಸ್ಟ್ ಪಂದ್ಯಕ್ಕಾಗಿ ಮ್ಯಾಂಚೆಸ್ಟರ್​ಗೆ ತೆರಳಲಿದೆ. ರವಿಶಾಸ್ತ್ರಿ 14 ದಿನಗಳ ಕ್ವಾರಂಟೈನ್​ನಲ್ಲಿ ಇರಬೇಕಿರುವುದರಿಂದ ಇವರನ್ನು ಬಿಟ್ಟು ಕೊಹ್ಲಿ ಪಡೆ ಪ್ರಯಾಣ ಬೆಳೆಸಲಿದೆ. ಭಾರತ ತಂಡ ಇದ್ದ ಹೋಟೆಲ್​ನಲ್ಲಿ ರವಿಶಾಸ್ತ್ರಿ ಅವರಿಂದ ಪುಸ್ತಕ ಬಿಡುಗಡೆ ಸಮಾರಂಭ ನಡೆದಿತ್ತು. ಬ್ರಿಟನ್ ದೇಶದಲ್ಲಿ ಕಾರ್ಯಕ್ರಮ ಆಯೋಜನೆಯಲ್ಲಿ ಕಟ್ಟುನಿಟ್ಟಿನ ಕೋವಿಡ್ ನಿಯಮಗಳು ಇಲ್ಲ. ಹೀಗಾಗಿ, ಹೊರಗಿನಿಂದ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಿಂದ ಶಾಸ್ತ್ರಿ ಅವರಿಗೆ ಸೋಂಕು ತಗುಲಿರಬಹುದು ಎಂದು ಹೇಳಲಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ರೋಚಕ ಘಟ್ಟಕ್ಕೆ ಬಂದುನಿಂತಿದೆ. ಟೀಮ್ ಇಂಡಿಯಾ ನೀಡಿರುವ 367 ರನ್​ಗಳ ಸವಾಲಿನ ಟಾರ್ಗೆಟ್ ಬೆನ್ನಟ್ಟಿರುವ ಆಂಗ್ಲರು ನಾಲ್ಕನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 77 ರನ್ ಬಾರಿಸಿದೆ. ಪಂದ್ಯದ ಫಲಿತಾಂಶ ಅಂತಿಮ ದಿನಕ್ಕೆ ತಲುಪಿದ್ದು ಇಂಗ್ಲೆಂಡ್ ಗೆಲುವಿಗೆ 291 ರನ್​ಗಳ ಅವಶ್ಯಕತೆಯಿದ್ದರೆ, ಭಾರತದ ಗೆಲುವಿಗೆ ರೂಟ್ ಪಡೆಯ ಎಲ್ಲ ವಿಕೆಟ್​ಗಳು ಬೇಕಾಗಿದೆ.

India vs England: ಟೀಮ್ ಇಂಡಿಯಾಕ್ಕೆ ಡಬಲ್ ಶಾಕ್: ಇಂದು ಫೀಲ್ಡ್​​ಗಿಳಿಯಲ್ಲ ಈ ಆಟಗಾರರು: 5ನೇ ಟೆಸ್ಟ್​ಗೂ ಅನುಮಾನ

India vs England: ಟೀಮ್ ಇಂಡಿಯಾ 2-1 ಮುನ್ನಡೆಗೆ ಅಡ್ಡಿ ಪಡಿಸುತ್ತಾನ ವರುಣ?: ಅಂತಿಮ ದಿನದ ಹವಾಮಾನ ವರದಿ ಇಲ್ಲಿದೆ

(India vs England Coach Ravi Shastri tested positive for COVID-19 again out of 5th test and 14 days quarantine)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ