AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ರದ್ದಾಗಲು ಕೋವಿಡ್ ಕಾರಣವಲ್ಲ: ಇಲ್ಲಿದೆ ನೋಡಿ ಅಸಲಿ ವಿಚಾರ

ಭಾರತ ಹಾಗೂ ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ರದ್ದಾಗಲು ಕೊರೊನಾ ಕಾರಣವಲ್ಲ ಎಂದು ಇಂಗ್ಲೆಂಡ್‌ ಹಾಗೂ ವೇಲ್ಸ್ ಕ್ರಿಕೆಟ್‌ ಅಕಾಡೆಮಿ ಸಿಇಒ ಟಾಮ್‌ ಹ್ಯಾರಿಸನ್ ಹೇಳಿದ್ದಾರೆ. ಅಸಲಿ ಕಾರಣ ಇಲ್ಲಿದೆ ನೋಡಿ

India vs England: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ರದ್ದಾಗಲು ಕೋವಿಡ್ ಕಾರಣವಲ್ಲ: ಇಲ್ಲಿದೆ ನೋಡಿ ಅಸಲಿ ವಿಚಾರ
India vs England
TV9 Web
| Updated By: Vinay Bhat|

Updated on: Sep 11, 2021 | 7:21 AM

Share

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಅಂತಿಮ ಐದನೇ ಟೆಸ್ಟ್ (5th Test) ಪಂದ್ಯ ಸೆ. 10 ಶುಕ್ರವಾರ ಮ್ಯಾಂಚೆಸ್ಟರ್​​ನಲ್ಲಿ ಆರಂಭವಾಗಬೇಕಿತ್ತು. ಆದರೆ, ಆಗಿದ್ದೇ ಬೇರೆ. ಕೊನೇಯ ಕ್ಷಣದ ವರೆಗೂ ಈ ಐದನೇ ಟೆಸ್ಟ್‌ ಪಂದ್ಯ ನಡೆಯುವುದನ್ನು ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಶುರುವಾಗಲು ಇನ್ನೇನು ಕೆಲವೇ ಕ್ಷಣಗಳು ಬಾಕಿಯಿರುವಾಗ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ಪಂದ್ಯ ರದ್ದೆಂದು ಘೋಷಿಸಿತು. ಕೋವಿಡ್-19 (Covid-19) ಪ್ರಕರಣಗಳು ಹೆಚ್ಚಿದ್ದರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್‌ ಪಂದ್ಯ ರದ್ದಾಗಲು ಕಾರಣ ಎಂದು ಹೇಳಲಾಗಿದೆ. ಆದರೆ, ಈ ಟೆಸ್ಟ್ ನಡೆಯದಿರಲು ಕೊರೊನಾ ಕಾರಣವಲ್ಲ ಎಂದು ಇಂಗ್ಲೆಂಡ್‌ ಹಾಗೂ ವೇಲ್ಸ್ ಕ್ರಿಕೆಟ್‌ ಅಕಾಡೆಮಿ ಸಿಇಒ ಟಾಮ್‌ ಹ್ಯಾರಿಸನ್ (Tom Harrison) ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಟಾಮ್, ಗುರುವಾರ ಟೀಮ್‌ ಇಂಡಿಯಾದ ಕಿರಿಯ ಫಿಸಿಯೊ ಯೋಗೇಶ್‌ ಪರ್ಮಾರ್ ಅವರಿಗೆ ಕೋವಿಡ್‌-19 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಭಾರತದ ಕೆಲ ಹಿರಿಯ ಆಟಗಾರರು ಶುಕ್ರವಾರ ಐದನೇ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪಂದ್ಯ ಆರಂಭವಾಗುವ ಎರಡು ತಾಸು ಮುನ್ನ ಪಂದ್ಯವನ್ನು ರದ್ದುಗೊಳಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

“ಪಂದ್ಯ ರದ್ದಾಗಲು ಕೋವಿಡ್‌-19 ನಿಜವಾದ ಕಾರಣವಲ್ಲ. ಟೀಮ್‌ ಇಂಡಿಯಾ ಫಿಸಿಯೊಗೆ ಕೋವಿಡ್‌-19 ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಮುಂದೆ ಏನಾಗಬಹುದೆಂಬ ಗ್ರಹಿಕೆ ಇತ್ತು. ಪಂದ್ಯದ ದಿನ ಪ್ರವಾಸಿ ಆಟಗಾರರಿಗೆ ಆರಾಮ ವಲಯ ನೀಡಿ ಭರವಸೆ ಮೂಡಿಸಲು ನಾವು ಸಾಕಷ್ಟು ಪ್ರಯತ್ನ ನಡೆಸಿದ್ದೆವು. ಆದರೆ, ಇದು ಫಲ ನೀಡಲಿಲ್ಲ. ಐದನೇ ಟೆಸ್ಟ್‌ ಪಂದ್ಯವಾಡಲು ಟೀಮ್‌ ಇಂಡಿಯಾ ಆರಾಮದಾಯಕವಾಗಿಲ್ಲ ಎಂಬುದು ನಮಗೆ ಗುರುವಾರ ಬೋಜನ ವೇಳೆಗೆ ಸ್ಪಷ್ಟವಾಗಿತ್ತು ಎಂಬ ಅಂಶವನ್ನು ಇದೇ ವೆಳೆ ಇಸಿಬಿ ಸಿಇಒ ತಿಳಿಸಿದ್ದಾರೆ.

ಇನ್ನೂ ಟೀಮ್ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್‌ ದಿನೇಶ್ ಕಾರ್ತಿಕ್ ಕೂಡ ಪಂದ್ಯ ರದ್ದಾಗಲು ಟೀಮ್ ಇಂಡಿಯಾ ಆಟಗಾರರು ಕಾರಣ, ಕೋವಿಡ್‌-19 ಭೀತಿಯಿಂದಾಗಿ ಭಾರತೀಯ ಆಟಗಾರರು ಹೆದರಿದ್ದರು ಎಂದು ಕಾರ್ತಿಕ್ ಹೇಳಿದ್ದಾರೆ.

“ನಾನು ನಾಲ್ಕನೇ ಟೆಸ್ಟ್‌ ಪಂದ್ಯದ ಬಳಿಕ ಭಾರತೀಯ ಕೆಲ ಆಟಗಾರರ ಜೊತೆ ಮಾತನಾಡಿದೆ. ಆದರೆ ಹೆಚ್ಚಿನವರಲ್ಲಿ ಮಾತನಾಡಿಲ್ಲ. ಅವರು ದಣಿದಿದ್ದಾರೆ. ಎಲ್ಲಾ ಪಂದ್ಯಗಳು ಬೆನ್ನು ಬೆನ್ನಿಗೆ ನಡೆದಿದ್ದಾಗಿದೆ. ಆದರೆ ಅವರಿಗೆ ಕೇವಲ ಒಬ್ಬನೇ ಒಬ್ಬ ಫಿಸಿಯೋ (ಯೋಗೇಶ್ ಪಾರ್ಮರ್) ಉಳಿದಿದ್ದರು. ಹೀಗಾಗಿ ಅವರೆಲ್ಲ ಆ ಒಬ್ಬನೇ ಫಿಸಿಯೋನ ಸಹಾಯ ಪಡೆಯಬೇಕಾಗಿತ್ತು. ಬಹಳ ಕೆಲಸಗಳು ಅವರಿಂದಲೇ ಆಗಬೇಕಾಗಿದೆ. ಈಗ ಅವರಿಗೂ ಪಾಸಿಟಿವ್ ಬಂದಿದೆ. ಹೀಗಾಗಿ ಸಮಸ್ಯೆ ಶುರುವಾಗಿದೆ,” ಎಂದು ಕಾರ್ತಿಕ್ ಹೇಳಿದರು.

ಮಂದಿನ ವರ್ಷ ಜುಲೈ ತಿಂಗಳಲ್ಲಿ ಭಾರತ ತಂಡ ಸೀಮಿತ ಓವರ್‌ಗಳ ಸರಣಿ ಆಡಲು ಇಂಗ್ಲೆಂಡ್‌ಗೆ ತೆರಳಲಿದೆ. ಬಹುಶಃ ಈ ಅವಧಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳಿಗೆ ಏಕೈಕ ಟೆಸ್ಟ್ ಪಂದ್ಯ ಆಡಿಸುವ ಸಾಧ್ಯತೆ ಇದೆ.

ಮಹೇಂದ್ರ ಸಿಂಗ್ ಧೋನಿಯನ್ನು ಮೆಂಟರ್ ಆಗಿ ನೇಮಕ ಮಾಡಿರುವುದು ಒಳ್ಳೆಯ ಕ್ರಮವೆಂದ ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್

Rashid Khan: ಟಿ20 ವಿಶ್ವಕಪ್​ಗೆ ಅಫ್ಘಾನ್ ತಂಡ ಪ್ರಕಟ: ನಾಯಕತ್ವಕ್ಕೆ ರಶೀದ್ ಖಾನ್ ರಾಜೀನಾಮೆ

(India vs England: Covid-19 cases in the Indian camp was not the main reason behind the cancellation)

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?