AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: 4ನೇ ಟೆಸ್ಟ್​ಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ: 1 ವರ್ಷದ ಬಳಿಕ ಸ್ಟಾರ್ ಆಲ್ರೌಂಡರ್ ಕಮ್​ಬ್ಯಾಕ್

India vs England 4th Test: ಅನುಭವಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಜೋಸ್‌ ಬಟ್ಲರ್‌ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಕಾರಣ ನಾಲ್ಕನೇ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರ ಜಾಗಕ್ಕೆ ಕೆಂಟ್‌ ತಂಡದ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಸ್ಯಾಮ್‌ ಬಿಲ್ಲಿಂಗ್ಸ್‌ ಅವರು ಸ್ಥಾನ ಪಡೆದುಕೊಂಡಿದ್ದಾರೆ.

India vs England: 4ನೇ ಟೆಸ್ಟ್​ಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ: 1 ವರ್ಷದ ಬಳಿಕ ಸ್ಟಾರ್ ಆಲ್ರೌಂಡರ್ ಕಮ್​ಬ್ಯಾಕ್
England Team
TV9 Web
| Edited By: |

Updated on: Aug 30, 2021 | 7:24 AM

Share

ಲಂಡನ್​ನ ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟವಾಗಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು ತಲಾ 1-1 ಅಂಕಗಳ ಅಂತರದ ಸಮಬಲ ಸಾಧಿಸಿದ್ದು, ಉಳಿದಿರುವ ಎರಡೂ ಪಂದ್ಯ ಮುಖ್ಯವಾಗಿದೆ. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಕೊಂಚ ಬದಲಾವಣೆ ಮಾಡಿ ಬಲಿಷ್ಠ ಆಟಗಾರರನ್ನೇ ಆಯ್ಕೆ ಮಾಡಿದೆ. ತಂಡದಿಂದ ಹೊರಗುಳಿದಿದ್ದ ಸ್ಟಾರ್ ಆಲ್ರೌಂಡರ್ ಕ್ರಿಸ್ ವೋಕ್ಸ್ ಕಮ್​ಬ್ಯಾಕ್ ಮಾಡಿದ್ದು, ಆನೆಬಲ ಬಂದಂತಾಗಿದೆ.

ಕ್ರಿಸ್ ವೋಕ್ಸ್ ಕೊನೆಯದಾಗಿ 2020ರ ಜುಲೈನಲ್ಲಿ ಕಣಕ್ಕಿಳಿದಿದ್ದರು. ಪಾಕಿಸ್ತಾನ ವಿರುದ್ಧದ ಸರಣಿ ವೇಳೆ ವೋಕ್ಸ್‌ ಇಂಜುರಿಗೆ ತುತ್ತಾಗಿದ್ದರು. ಹಿಮ್ಮಡಿ ಗಾಯದ ಸಮ್ಯಸ್ಯೆ ಮತ್ತು ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್ ಮಂಡಳಿ ತಂದ ಆಟಗಾರರ ರೊಟೇಷನ್‌ ಪಾಲಿಸಿ ಕಾರಣ ಕಳೆದ ಒಂದು ವರ್ಷದಿಂದ ವೋಕ್ಸ್ ಟೆಸ್ಟ್‌ ಕ್ರಿಕೆಟ್‌ ಆಡದೇ ಉಳಿಯಬೇಕಾಯಿತು. ಸದ್ಯ ನಾಲ್ಕನೇ ಟೆಸ್ಟ್​ಗೆ ಆಯ್ಕೆಯಾಗಿದ್ದು ತಂಡ ಮತ್ತಷ್ಟು ಬಲಿಷ್ಠವಾಗಿದೆ.

ಇನ್ನೂ ಅನುಭವಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಜೋಸ್‌ ಬಟ್ಲರ್‌ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಕಾರಣ ನಾಲ್ಕನೇ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರ ಜಾಗಕ್ಕೆ ಕೆಂಟ್‌ ತಂಡದ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಸ್ಯಾಮ್‌ ಬಿಲ್ಲಿಂಗ್ಸ್‌ ಅವರು ಸ್ಥಾನ ಪಡೆದುಕೊಂಡಿದ್ದಾರೆ. ಬಟ್ಲರ್‌ ಅನುಪಸ್ಥಿತಿಯಲ್ಲಿ ಜಾನಿ ಬೈರ್‌ಸ್ಟೋವ್‌ ವಿಕೆಟ್‌ಕೀಪಿಂಗ್‌ ಜವಾಬ್ದಾರಿ ಹೊರಲಿದ್ದಾರೆ ಎಂದು ಸಿಲ್ವರ್‌ವುಡ್‌ ಹೇಳಿದ್ದಾರೆ.

ಇನ್ನೂ ಎರಡನೇ ಟೆಸ್ಟ್​ ಪಂದ್ಯದ ವೇಳೆ ಭುಜಕ್ಕೆ ಪೆಟ್ಟು ಮಾಡಿಕೊಂಡು ಇಂಜುರಿಗೆ ತುತ್ತಾಗಿದ್ದ ವೇಗಿ ಮಾರ್ಕ್‌ ವುಡ್‌ ಸ್ಥಾನ ಪಡೆದುಕೊಂಡಿದ್ದಾರೆಯಾದರೂ ಇನ್ನೂ ಸಂಪೂರ್ಣ ಚೇತರಿಸದ ಕಾರಣ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲೂ ಆಡುವ ಹನ್ನೊಂದರ ಬಳಗದಿಂದ ಹೊರಗುಳಿಯುವ ಸಾಧ್ಯತೆ ಇದೆ.

ನಾಲ್ಕನೇ ಟೆಸ್ಟ್‌ ಪಂದ್ಯಕ್ಕೆ ಇಂಗ್ಲೆಂಡ್‌ ತಂಡ:

ಜೋ ರೂಟ್‌ (ನಾಯಕ), ಮೊಯೀನ್ ಅಲಿ, ಜೇಮ್ಸ್‌ ಆಂಡರ್ಸನ್‌, ಜಾನಿ ಬೈರ್‌ಸ್ಟೋವ್‌, ಸ್ಯಾಮ್‌ ಬಿಲ್ಲಿಂಗ್ಸ್‌, ರೋರಿ ಬರ್ನ್ಸ್‌, ಸ್ಯಾಮ್‌ ಕರ್ರನ್, ಹಸೀಬ್ ಹಮೀದ್‌, ಡ್ಯಾನ್‌ ಲಾರೆನ್ಸ್‌, ಡಾವಿಡ್‌ ಮಲಾನ್, ಕ್ರೈಗ್ ಓವರ್ಟನ್, ಓಲ್ಲೀ ಪೋಪ್, ಓಲ್ಲೀ ರಾಬಿನ್ಸನ್, ಕ್ರಿಸ್‌ ವೋಕ್ಸ್‌, ಮಾರ್ಕ್‌ ವುಡ್‌.

ಇತ್ತ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲೂ ಬದಲಾವಣೆಯ ಗಾಳಿ ಬೀಸುವ ಅಂದಾಜಿದೆ. ನಾಯಕ ವಿರಾಟ್ ಕೊಹ್ಲಿ ಹೆಚ್ಚುವರಿ ಬ್ಯಾಟ್ಸ್‌ಮನ್‌ ಆಡಿಸುವ ಸಾಧ್ಯತೆಯನ್ನು ನಿರಾಕರಿಸಿದ್ದಾರೆ. ಆದರೆ, ಬೌಲಿಂಗ್‌ನಲ್ಲಿ ಬದಲಾವಣೆ ತರುವ ಸುಳಿವು ನೀಡಿದ್ದಾರೆ. ಮುಂದಿನ ಪಂದ್ಯಗಳಲ್ಲೂ ಐದು ಬೌಲರ್‌ಗಳನ್ನು ಆಡಿಸುವ ತಂತ್ರವನ್ನು ಮುಂದುವರಿಸುವುದಾಗಿ ಹೇಳಿರುವ ಕೊಹ್ಲಿ, ಆಟಗಾರರ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಬೌಲಿಂಗ್‌ ವಿಭಾಗದಲ್ಲಿ ಬದಲಾವಣೆ ತರುವುದಾಗಿ ಹೇಳಿದ್ದಾರೆ.

Ind vs Eng: ಕ್ಲಾಸ್ ಪ್ಲೇಯರ್! ಆಂಗ್ಲರ ನೆಲದಲ್ಲಿ ಹಿಟ್​ಮ್ಯಾನ್ ಆಟಕ್ಕೆ ಫಿದಾ ಆದ ಆಸಿಸ್ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್

Tokyo Paralympics: ಸೂಪರ್ ಸಂಡೇ; ಪ್ಯಾರಾಲಂಪಿಕ್ಸ್​ನಲ್ಲಿ ಭಾರತಕ್ಕೆ ಒಲಿದು ಬಂದವು 3 ಪದಕಗಳು! ಇಲ್ಲಿದೆ ವಿವರ

(India vs England Englands Squad For 4th Test Announced Mark Wood and Chris Woakes return)

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!