AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಬುಮ್ರಾಗೆ ಮೊದಲ ಓವರ್​ನಲ್ಲೇ ವಿಕೆಟ್! ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ ರೋರಿ ಬರ್ನ್ಸ್.. ವಿಡಿಯೋ ನೋಡಿ

India vs England: ಓಪನರ್ ರೋರಿ ಬರ್ನ್ಸ್ ಎಲ್‌ಬಿಡಬ್ಲ್ಯೂಗೆ ಔಟಾದರು, ಇದು ಭಾರತಕ್ಕೆ ಮೊದಲ ಯಶಸ್ಸು ನೀಡಿತು. ಬುಮ್ರಾ ಮೊದಲ ಓವರ್‌ನ ಐದನೇ ಎಸೆತದಲ್ಲಿ ವಿಕೆಟ್ ಪಡೆದರು.

India vs England: ಬುಮ್ರಾಗೆ ಮೊದಲ ಓವರ್​ನಲ್ಲೇ ವಿಕೆಟ್! ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ ರೋರಿ ಬರ್ನ್ಸ್.. ವಿಡಿಯೋ ನೋಡಿ
ಬುಮ್ರಾಗೆ ಮೊದಲ ಓವರ್​ನಲ್ಲೇ ವಿಕೆಟ್
TV9 Web
| Edited By: |

Updated on:Aug 04, 2021 | 5:43 PM

Share

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಭಾರತ ಪ್ರಬಲ ಆರಂಭ ಮಾಡಿದೆ. ಭಾರತದ ವೇಗಿ ಜಸ್​ಪ್ರೀತ್ ಬುಮ್ರಾ ನಾಟಿಂಗ್ ಹ್ಯಾಮ್ ಟೆಸ್ಟ್​ನಲ್ಲಿ ಮೊದಲ ಓವರ್​ನಲ್ಲೇ ಇಂಗ್ಲೆಂಡ್ ವಿಕೆಟ್ ಪಡೆದಿದ್ದಾರೆ. ಓಪನರ್ ರೋರಿ ಬರ್ನ್ಸ್ ಎಲ್‌ಬಿಡಬ್ಲ್ಯೂಗೆ ಔಟಾದರು, ಇದು ಭಾರತಕ್ಕೆ ಮೊದಲ ಯಶಸ್ಸು ನೀಡಿತು. ಬುಮ್ರಾ ಮೊದಲ ಓವರ್‌ನ ಐದನೇ ಎಸೆತದಲ್ಲಿ ವಿಕೆಟ್ ಪಡೆದರು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ಕೆಎಲ್ ರಾಹುಲ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದ್ದಾರೆ. ಅದಲ್ಲದೆ, ರವೀಂದ್ರ ಜಡೇಜಾ ಒಬ್ಬರೇ ಸ್ಪಿನ್ನರ್ ಆಗಿದ್ದು, ಮೊಹಮ್ಮದ್ ಸಿರಾಜ್ ಗೆ ಅಶ್ವಿನ್ ಬದಲಿಗೆ ಅವಕಾಶ ನೀಡಲಾಗಿದೆ.

ಭಾರತದ ಓಪನರ್ ಯಾರು? ಭಾರತ ತಂಡದ ಆಟಗಾರರು ನಿರಂತರವಾಗಿ ಗಾಯಗೊಳ್ಳುತ್ತಿರುವುದರಿಂದ ತಂಡದ ಆಡಳಿತಕ್ಕೆ ಅಂತಿಮ 11 ಆಟಗಾರರನ್ನು ಆಯ್ಕೆ ಮಾಡುವುದು ಕಷ್ಟಕರವಾಗಿತ್ತು. ಇತ್ತೀಚೆಗೆ, ತಂಡದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಗಾಯಗೊಂಡಿದ್ದು, ಹೊಸ ಆರಂಭಿಕ ಯಾರು ಎಂಬ ಕುತೂಹಲವಿತ್ತು. ಅದಕ್ಕಾಗಿಯೇ ಎರಡು ವರ್ಷಗಳ ಹಿಂದೆ ಭಾರತಕ್ಕಾಗಿ ಕೊನೆಯ ಟೆಸ್ಟ್ ಆಡಿದ ಕೆಎಲ್ ರಾಹುಲ್ ಹೆಸರಿಸಲಾಯಿತು. ರೋಹಿತ್ ಶರ್ಮಾ ಜೊತೆಗೆ ರಾಹುಲ್ ರನ್ನು ಓಪನರ್ ಆಗಿ ಕಳುಹಿಸಲಾಗುತ್ತದೆ. ಕೌಂಟಿ 11 ತಂಡದ ವಿರುದ್ಧ ಇತ್ತೀಚೆಗೆ ನಡೆದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಕೆಎಲ್ ರಾಹುಲ್ ಕೂಡ ಶತಕ ಗಳಿಸಿದ್ದಾರೆ.

ಭಾರತ ತಂಡ – ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ ತಂಡ – ಆರ್. ಬರ್ನ್ಸ್, ಡಿ. ಸಿಬ್ಲಿ, ಕ್ರೌಲಿ, ಜೋ ರೂಟ್, ಜಾನಿ ಬೈರ್‌ಸ್ಟೊ, ಡಿ. ಲಾರೆನ್ಸ್, ಜಾಸ್ ಬಟ್ಲರ್, ಸ್ಯಾಮ್ ಕರನ್, ಒ. ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್

Published On - 5:42 pm, Wed, 4 August 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್