IND vs ENG: ಅತಿ ವೇಗವಾಗಿ 600 ಟೆಸ್ಟ್ ವಿಕೆಟ್ ಪಡೆದ ಬೌಲರ್; ಟೆಸ್ಟ್​ನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮುರಿದ ಆಂಡರ್ಸನ್

IND vs ENG: ಕೆಎಲ್ ರಾಹುಲ್ ಅವರನ್ನು ಔಟ್ ಮಾಡುವ ಮೂಲಕ ಅವರು ಟೆಸ್ಟ್ ನಲ್ಲಿ 620 ವಿಕೆಟ್ ಗಳನ್ನು ಪೂರೈಸಿದರು. ಇದರೊಂದಿಗೆ, ಜೇಮ್ಸ್ ಆಂಡರ್ಸನ್ ಭಾರತದ ಶ್ರೇಷ್ಠ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದರು.

IND vs ENG: ಅತಿ ವೇಗವಾಗಿ 600 ಟೆಸ್ಟ್ ವಿಕೆಟ್ ಪಡೆದ ಬೌಲರ್; ಟೆಸ್ಟ್​ನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮುರಿದ ಆಂಡರ್ಸನ್
ಜೇಮ್ಸ್ ಆಂಡರ್ಸನ್
Follow us
| Updated By: Vinay Bhat

Updated on: Aug 07, 2021 | 6:42 AM

ಇಂಗ್ಲೆಂಡ್ ನ ಅನುಭವಿ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಅವರನ್ನು ಔಟ್ ಮಾಡುವ ಮೂಲಕ ಅವರು ಟೆಸ್ಟ್ ನಲ್ಲಿ 620 ವಿಕೆಟ್ ಗಳನ್ನು ಪೂರೈಸಿದರು. ಇದರೊಂದಿಗೆ, ಜೇಮ್ಸ್ ಆಂಡರ್ಸನ್ ಭಾರತದ ಶ್ರೇಷ್ಠ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದರು. ಕುಂಬ್ಳೆ 619 ಟೆಸ್ಟ್ ವಿಕೆಟ್ ಪಡೆದಿದ್ದಾರೆ. ಈಗ ಶ್ರೀಲಂಕಾದ ಶ್ರೇಷ್ಠ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ (800 ವಿಕೆಟ್) ಮತ್ತು ಆಸ್ಟ್ರೇಲಿಯಾದ ಮಾಜಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ (708 ವಿಕೆಟ್) ಮಾತ್ರ ಆಂಡರ್ಸನ್ಗಿಂತ ಮುಂದಿದ್ದಾರೆ. ಆಂಡರ್ಸನ್ ಟೆಸ್ಟ್​ನಲ್ಲಿ ವಿಕೆಟ್​ಗಳ ವಿಷಯದಲ್ಲಿ ಅತ್ಯಂತ ಯಶಸ್ವಿ ವೇಗದ ಬೌಲರ್.

ಜೇಮ್ಸ್ ಆಂಡರ್ಸನ್ 2003 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು. ಅವರು 163 ನೇ ಟೆಸ್ಟ್ ಆಡುತ್ತಿದ್ದಾರೆ. ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ ಆಟಗಾರರಲ್ಲಿ ಅವರು ಏಳನೇ ಸ್ಥಾನದಲ್ಲಿದ್ದಾರೆ. ಆದಾಗ್ಯೂ, ಅವರು ಇಂಗ್ಲೆಂಡ್ ಪರ ಅತಿ ಹೆಚ್ಚು ಟೆಸ್ಟ್ ಆಡಿದ ಆಟಗಾರ ಎನಿಸಿಕೊಂಡಿದ್ದಾರೆ. ಜೇಮ್ಸ್ ಆಂಡರ್ಸನ್ ಭಾರತದ ವಿರುದ್ಧ ನಾಟಿಂಗ್ ಹ್ಯಾಮ್ ಟೆಸ್ಟ್​ನಲ್ಲಿ ಅದ್ಭುತ ಬೌಲಿಂಗ್ ಮಾಡಿದ್ದಾರೆ. ಪಂದ್ಯದ ಎರಡನೇ ದಿನ ಸತತ ಎರಡು ಎಸೆತಗಳಲ್ಲಿ ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರ ವಿಕೆಟ್ ಪಡೆದರು. ಅವರು ಕೊಹ್ಲಿಗೆ ಖಾತೆ ತೆರೆಯಲೂ ಅವಕಾಶ ನೀಡಲಿಲ್ಲ.

ಆಂಡರ್ಸನ್ ಅತಿ ವೇಗವಾಗಿ 600 ಟೆಸ್ಟ್ ವಿಕೆಟ್ ಪಡೆದ ಬೌಲರ್ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ವೇಗವಾಗಿ 600 ವಿಕೆಟ್ ಪಡೆದ ಬೌಲರ್. ಏಳು ಪ್ರಮುಖ ಟೆಸ್ಟ್ ಆಡುವ ರಾಷ್ಟ್ರಗಳ ವಿರುದ್ಧ 50 ಕ್ಕೂ ಹೆಚ್ಚು ವಿಕೆಟ್ ಪಡೆದ ಏಕೈಕ ಬೌಲರ್ ಅವರು. ಟೆಸ್ಟ್​ನಲ್ಲಿ 30 ಬಾರಿ ಒಂದು ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದ ಅದ್ಭುತ ಸಾಧನೆ ಮಾಡಿದ್ದಾರೆ. ಕಳೆದ ತಿಂಗಳು, ಅವರು ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 1000 ವಿಕೆಟ್ ಪೂರೈಸಿದರು. ಜೊತೆಗೆ 1000 ಪ್ರಥಮ ದರ್ಜೆ ವಿಕೆಟ್ ಪಡೆದ 216 ನೇ ಬೌಲರ್ ಎನಿಸಿಕೊಂಡಿದ್ದಾರೆ.

ತಾಜಾ ಸುದ್ದಿ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ